<p>ಗದಗ: ‘ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಓದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದ ವ್ಯಕ್ತಿಗೆ ಉದ್ಯೋಗ ಹಿಡಿಯುವ ದಾರಿ ಸುಗಮಗೊಳ್ಳುವುದು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.</p>.<p>ಜಿಲ್ಲಾಡಳಿತ, ಸಮಗ್ರ ಶಿಕ್ಷಣ ಕರ್ನಾಟಕದ ಆಶ್ರಯದಲ್ಲಿ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಆವರಣದಲ್ಲಿ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಏರ್ಪಡಿಸಿದ್ದ ಕರಿಯರ್ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ವೃತ್ತಿ ಮಾರ್ಗದರ್ಶನ ಘಟಕವನ್ನು ರಾಜ್ಯದ ಎಲ್ಲ ಜಿಲ್ಲೆಗಳ ಡಯಟ್ಗಳಲ್ಲಿ ತೆರೆಯುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ಗದಗ ನಗರದಲ್ಲಿ ಕೂಡ ಈ ಘಟಕವನ್ನು ಪ್ರಾರಂಭಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಘಟಕದಲ್ಲಿರುವ ವಿಷಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮಾರ್ಗದರ್ಶನ ಪಡೆದುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಪೂರಕವಾದ ಗ್ರಂಥಗಳು, ಉನ್ನತ ಕೋರ್ಸ್ಗಳ ಮಾಹಿತಿ ಪುಸ್ತಕಗಳಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು. ಕಂಪ್ಯೂಟರ್, ಅಂತರ್ಜಾಲ ಸೌಲಭ್ಯವೂ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ವಿದೇಶದಲ್ಲಿ ವ್ಯಾಸಂಗ ಮಾಡುವುದಕ್ಕೂ ಭಾರತದಲ್ಲಿ ಅಧ್ಯಯನ ಮಾಡುವುದಕ್ಕೂ ಇಂದಿನ ದಿನಗಳಲ್ಲಿ ಬಹಳ ವ್ಯತ್ಯಾಸವಿಲ್ಲ. ವಿದೇಶಗಳಲ್ಲಿ ದೊರಕುವಂತಹ ಎಲ್ಲ ಸಂಪನ್ಮೂಲಗಳು, ವಿಷಯ ತಜ್ಞರು ಭಾರತದಲ್ಲಿಯೂ ಲಭ್ಯವಿದ್ದಾರೆ. ಕಲಿಕಾ ಸಾಮಗ್ರಿ, ಮಾಹಿತಿ ಮತ್ತು ತಂತ್ರಜ್ಞಾನದ ಮೂಲಕ ಸಾಧಿಸಬೇಕೆಂಬ ಛಲವಿದ್ದರೆ ಉನ್ನತ ಸಾಧನೆ ಮಾಡಬಹುದಾಗಿದೆ’ ಎಂದರು.</p>.<p>ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಡಯಟ್ ಹಿರಿಯ ಉಪನ್ಯಾಸಕ ಬಿ.ಎಫ್.ಅರವಟಗಿ, ಡಯಟ್ ಉಪನ್ಯಾಸಕ ಕೆ.ವೈ.ವಿಭೂತಿ, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೇಸೂರ, ಅಧೀಕ್ಷಕಿ ಶೈಲಜಾ ತಟ್ಟಿ ಉಪಸ್ಥಿತರಿದ್ದರು.</p>.<p>ಡಯಟ್ ಅಧೀಕ್ಷಕ ಶ್ರೀನಿವಾಸ ಕುಲಕರ್ಣಿ ಪ್ರಾರ್ಥಿಸಿದರು. ಉಪನ್ಯಾಸಕರಾದ ಎಚ್.ಬಿ.ರಡ್ಡೇರ ಸ್ವಾಗತಿಸಿದರು. ಯಲ್ಲಪ್ಪ ಹಂದ್ರಾಳ ನಿರೂಪಿಸಿದರು. ಜಿ.ಡಿ.ದಾಸರ ವಂದಿಸಿದರು.</p>.<p>ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಚಿತ್ರಪ್ರದರ್ಶನ, ವಿವಿಧ ಇಲಾಖೆ ಯೋಜನೆಗಳ ಕುರಿತು ಹಾಗೂ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಗಣಿತ ಪ್ರಯೋಗಳ ಮಳಿಗೆಗಳು ಗಮನ ಸೆಳೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-23-209446956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಓದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದ ವ್ಯಕ್ತಿಗೆ ಉದ್ಯೋಗ ಹಿಡಿಯುವ ದಾರಿ ಸುಗಮಗೊಳ್ಳುವುದು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.</p>.<p>ಜಿಲ್ಲಾಡಳಿತ, ಸಮಗ್ರ ಶಿಕ್ಷಣ ಕರ್ನಾಟಕದ ಆಶ್ರಯದಲ್ಲಿ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಆವರಣದಲ್ಲಿ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಏರ್ಪಡಿಸಿದ್ದ ಕರಿಯರ್ ಮೇಳ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ವೃತ್ತಿ ಮಾರ್ಗದರ್ಶನ ಘಟಕವನ್ನು ರಾಜ್ಯದ ಎಲ್ಲ ಜಿಲ್ಲೆಗಳ ಡಯಟ್ಗಳಲ್ಲಿ ತೆರೆಯುವಂತೆ ಸರ್ಕಾರ ಆದೇಶಿಸಿದೆ. ಅದರಂತೆ ಗದಗ ನಗರದಲ್ಲಿ ಕೂಡ ಈ ಘಟಕವನ್ನು ಪ್ರಾರಂಭಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಘಟಕದಲ್ಲಿರುವ ವಿಷಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಮಾರ್ಗದರ್ಶನ ಪಡೆದುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಪೂರಕವಾದ ಗ್ರಂಥಗಳು, ಉನ್ನತ ಕೋರ್ಸ್ಗಳ ಮಾಹಿತಿ ಪುಸ್ತಕಗಳಿದ್ದು, ವಿದ್ಯಾರ್ಥಿಗಳು ಅಧ್ಯಯನ ಮಾಡಬಹುದು. ಕಂಪ್ಯೂಟರ್, ಅಂತರ್ಜಾಲ ಸೌಲಭ್ಯವೂ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>‘ವಿದೇಶದಲ್ಲಿ ವ್ಯಾಸಂಗ ಮಾಡುವುದಕ್ಕೂ ಭಾರತದಲ್ಲಿ ಅಧ್ಯಯನ ಮಾಡುವುದಕ್ಕೂ ಇಂದಿನ ದಿನಗಳಲ್ಲಿ ಬಹಳ ವ್ಯತ್ಯಾಸವಿಲ್ಲ. ವಿದೇಶಗಳಲ್ಲಿ ದೊರಕುವಂತಹ ಎಲ್ಲ ಸಂಪನ್ಮೂಲಗಳು, ವಿಷಯ ತಜ್ಞರು ಭಾರತದಲ್ಲಿಯೂ ಲಭ್ಯವಿದ್ದಾರೆ. ಕಲಿಕಾ ಸಾಮಗ್ರಿ, ಮಾಹಿತಿ ಮತ್ತು ತಂತ್ರಜ್ಞಾನದ ಮೂಲಕ ಸಾಧಿಸಬೇಕೆಂಬ ಛಲವಿದ್ದರೆ ಉನ್ನತ ಸಾಧನೆ ಮಾಡಬಹುದಾಗಿದೆ’ ಎಂದರು.</p>.<p>ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಡಯಟ್ ಹಿರಿಯ ಉಪನ್ಯಾಸಕ ಬಿ.ಎಫ್.ಅರವಟಗಿ, ಡಯಟ್ ಉಪನ್ಯಾಸಕ ಕೆ.ವೈ.ವಿಭೂತಿ, ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೇಸೂರ, ಅಧೀಕ್ಷಕಿ ಶೈಲಜಾ ತಟ್ಟಿ ಉಪಸ್ಥಿತರಿದ್ದರು.</p>.<p>ಡಯಟ್ ಅಧೀಕ್ಷಕ ಶ್ರೀನಿವಾಸ ಕುಲಕರ್ಣಿ ಪ್ರಾರ್ಥಿಸಿದರು. ಉಪನ್ಯಾಸಕರಾದ ಎಚ್.ಬಿ.ರಡ್ಡೇರ ಸ್ವಾಗತಿಸಿದರು. ಯಲ್ಲಪ್ಪ ಹಂದ್ರಾಳ ನಿರೂಪಿಸಿದರು. ಜಿ.ಡಿ.ದಾಸರ ವಂದಿಸಿದರು.</p>.<p>ಗದಗ ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಚಿತ್ರಪ್ರದರ್ಶನ, ವಿವಿಧ ಇಲಾಖೆ ಯೋಜನೆಗಳ ಕುರಿತು ಹಾಗೂ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ಗಣಿತ ಪ್ರಯೋಗಳ ಮಳಿಗೆಗಳು ಗಮನ ಸೆಳೆದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-23-209446956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>