<p>ಹರಿಹರ: ‘ಐಬಸವಾದಿ ಶರಣರ ಅಗ್ರಪಂಕ್ತಿಯಲ್ಲಿ ಬರುವ ಶಿವಶರಣ ಮಾದಾರ ಚನ್ನಯ್ಯ ಜಯಂತ್ಯುತ್ಸವದ ಅಂಗವಾಗಿ, 2024-2025 ಹಾಗೂ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಅರ್ಹ ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ನೀಡಲಾಗುವುದು’ ಎಂದು ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಆನಂದ ಕುಮಾರ ಹೇಳಿದರು.</p>.<p>‘ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀಕಾಂತ್ ಚಿತ್ರ ಮಂದಿರದ ಎದುರಿನ ಕಾಟ್ವೆ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ , ಜಾತಿ ಪ್ರಮಾಣಪತ್ರದ ನಕಲು ಪ್ರತಿ, 2 ಫೋಟೊ, ಮೊಬೈಲ್ ನಂ. ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ಎಂ.ಎಸ್ ಆನಂದಕುಮಾರ್ ಮೊ.ನಂ. 7406609623, ಪ್ರಧಾನ ಕಾರ್ಯದರ್ಶಿ ಎಚ್.ಶಿವಪ್ಪ ಮೊ.ನಂ. 9342696588ಗೆ ಸಂಪರ್ಕಿಸಬಹುದು.</p>.<p>ಸಮಾಜದ ಗೌರವಾಧ್ಯಕ್ಷ ಎಲ್.ಬಿ. ಹನುಮಂತಪ್ಪ, ಉಪಾಧ್ಯಕ್ಷ ಬನ್ನಿಕೊಡು ಹನುಮಂತಪ್ಪ, ಮುಖಂಡರಾದ ಬಸವರಾಜಪ್ಪ, ಎ.ಕೆ.ನಾಗೇಂದ್ರಪ್ಪ, ರೈತ ಸಂಘದ ಉಪಾಧ್ಯಕ್ಷ ಹಳ್ಳಿಹಾಳ ಹನುಮಂತಪ್ಪ, ಭೂ–ನ್ಯಾಯ ಮಂಡಳಿ ಸದಸ್ಯ ಎಂ.ಎಸ್ ಶ್ರೀನಿವಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-43-228747144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ‘ಐಬಸವಾದಿ ಶರಣರ ಅಗ್ರಪಂಕ್ತಿಯಲ್ಲಿ ಬರುವ ಶಿವಶರಣ ಮಾದಾರ ಚನ್ನಯ್ಯ ಜಯಂತ್ಯುತ್ಸವದ ಅಂಗವಾಗಿ, 2024-2025 ಹಾಗೂ 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 75ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದ ಅರ್ಹ ವಿದ್ಯಾರ್ಥಿಗಳಿಗೆ, ಪ್ರತಿಭಾ ಪುರಸ್ಕಾರ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ನೀಡಲಾಗುವುದು’ ಎಂದು ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಆನಂದ ಕುಮಾರ ಹೇಳಿದರು.</p>.<p>‘ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀಕಾಂತ್ ಚಿತ್ರ ಮಂದಿರದ ಎದುರಿನ ಕಾಟ್ವೆ ಭವನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಅಂಕಪಟ್ಟಿ , ಜಾತಿ ಪ್ರಮಾಣಪತ್ರದ ನಕಲು ಪ್ರತಿ, 2 ಫೋಟೊ, ಮೊಬೈಲ್ ನಂ. ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ಎಂ.ಎಸ್ ಆನಂದಕುಮಾರ್ ಮೊ.ನಂ. 7406609623, ಪ್ರಧಾನ ಕಾರ್ಯದರ್ಶಿ ಎಚ್.ಶಿವಪ್ಪ ಮೊ.ನಂ. 9342696588ಗೆ ಸಂಪರ್ಕಿಸಬಹುದು.</p>.<p>ಸಮಾಜದ ಗೌರವಾಧ್ಯಕ್ಷ ಎಲ್.ಬಿ. ಹನುಮಂತಪ್ಪ, ಉಪಾಧ್ಯಕ್ಷ ಬನ್ನಿಕೊಡು ಹನುಮಂತಪ್ಪ, ಮುಖಂಡರಾದ ಬಸವರಾಜಪ್ಪ, ಎ.ಕೆ.ನಾಗೇಂದ್ರಪ್ಪ, ರೈತ ಸಂಘದ ಉಪಾಧ್ಯಕ್ಷ ಹಳ್ಳಿಹಾಳ ಹನುಮಂತಪ್ಪ, ಭೂ–ನ್ಯಾಯ ಮಂಡಳಿ ಸದಸ್ಯ ಎಂ.ಎಸ್ ಶ್ರೀನಿವಾಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-43-228747144</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>