<p>ಹುಬ್ಬಳ್ಳಿ: ‘ಉದ್ಯಮ ಹಾಗೂ ಕಂಪನಿ ಕ್ಷೇತ್ರಗಳು ಕೌಶಲ, ನಿರಂತರ ಶ್ರಮ, ಸಂವಹನ ನಿಪುಣತೆ ಹಾಗೂ ವೃತ್ತಿ ಬದ್ಧತೆಯನ್ನು ಹೆಚ್ಚು ಬಯಸುತ್ತವೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರು ಇವುಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮೇಘಾ ದೊಡ್ಡಗೌಡರ ಹೇಳಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್.ಎಸ್.ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ನೀವು ಕಾರ್ಪೊರೇಟ್ ಆಗಲು ಸಿದ್ಧರಿದ್ದೀರಾ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು. ಉದ್ಯಮ, ಕಂಪನಿ ಆರಂಭಿಸುವುದರಿಂದ ಹಲವು ಉದ್ಯೋಗಗಳನ್ನು ಸೃಷ್ಟಿಸಿ, ನಿರುದ್ಯೋಗಿಗಳ ಬದುಕಿಗೆ ಆಸರೆಯಾಗಬಹುದು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳ ವೃತ್ತಿ ಜೀವನ ರೂಪಿಸಲು ಇಂತಹ ಕಾರ್ಯಾಗಾರಗಳು ಹೆಚ್ಚು ಉಪಯುಕ್ತವಾಗುತ್ತವೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ ಮಾತನಾಡಿದರು. ಉಪನ್ಯಾಸಕಿ ಆರತಿ ಎಂ. ಪಟ್ಟಂದ, ತೇಜಸ್ವಿನಿ ಕಟ್ಟಿಮನಿ, ರಕ್ಷಿತಾ ಶಿರಕೋಳ, ದೇವದತ್ತ ವೈ., ಅಂಕಿತಾ ಅಗಸಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-24-123120901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಉದ್ಯಮ ಹಾಗೂ ಕಂಪನಿ ಕ್ಷೇತ್ರಗಳು ಕೌಶಲ, ನಿರಂತರ ಶ್ರಮ, ಸಂವಹನ ನಿಪುಣತೆ ಹಾಗೂ ವೃತ್ತಿ ಬದ್ಧತೆಯನ್ನು ಹೆಚ್ಚು ಬಯಸುತ್ತವೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರು ಇವುಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಂಪನ್ಮೂಲ ವ್ಯಕ್ತಿ ಮೇಘಾ ದೊಡ್ಡಗೌಡರ ಹೇಳಿದರು.</p>.<p>ನಗರದ ಕೆಎಲ್ಇ ಸಂಸ್ಥೆಯ ಕಾಡಸಿದ್ದೇಶ್ವರ ಕಲಾ ಮಹಾವಿದ್ಯಾಲಯ ಹಾಗೂ ಎಚ್.ಎಸ್.ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ನೀವು ಕಾರ್ಪೊರೇಟ್ ಆಗಲು ಸಿದ್ಧರಿದ್ದೀರಾ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು. ಉದ್ಯಮ, ಕಂಪನಿ ಆರಂಭಿಸುವುದರಿಂದ ಹಲವು ಉದ್ಯೋಗಗಳನ್ನು ಸೃಷ್ಟಿಸಿ, ನಿರುದ್ಯೋಗಿಗಳ ಬದುಕಿಗೆ ಆಸರೆಯಾಗಬಹುದು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳ ವೃತ್ತಿ ಜೀವನ ರೂಪಿಸಲು ಇಂತಹ ಕಾರ್ಯಾಗಾರಗಳು ಹೆಚ್ಚು ಉಪಯುಕ್ತವಾಗುತ್ತವೆ’ ಎಂದು ತಿಳಿಸಿದರು.</p>.<p>ಪ್ರಾಚಾರ್ಯರಾದ ಸುಮಂಗಲಾ ಬಿ. ಪಾಟೀಲ ಮಾತನಾಡಿದರು. ಉಪನ್ಯಾಸಕಿ ಆರತಿ ಎಂ. ಪಟ್ಟಂದ, ತೇಜಸ್ವಿನಿ ಕಟ್ಟಿಮನಿ, ರಕ್ಷಿತಾ ಶಿರಕೋಳ, ದೇವದತ್ತ ವೈ., ಅಂಕಿತಾ ಅಗಸಿಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-24-123120901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>