<p>ಹುಣಸಗಿ: ಇಲ್ಲಿನ ಯುಕೆಪಿ ಕ್ಯಾಂಪಿನಲ್ಲಿರುವ ಶಿಕ್ಷಕರ ಕಲಿಕಾ ಕೇಂದ್ರದಲ್ಲಿ ಎಪಿಡಿ ಸಂಸ್ಥೆಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ವಿಶೇಷ ಚೇತನ ಮಕ್ಕಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ರಮೇಶ ಮಾನೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು.</p>.<p>ಉನ್ನತ ಶಿಕ್ಷಣದ ಅವಕಾಶಗಳು, ವೃತ್ತಿಪರ ಕೋರ್ಸ್ಗಳು, ಕೌಶಲಾಭಿವೃದ್ಧಿ ತರಬೇತಿಗಳು, ಸರ್ಕಾರಿ ಯೋಜನೆಗಳು, ಸ್ವಯಂ ಉದ್ಯೋಗ ಮತ್ತು ಸ್ವಾವಲಂಬಿ ಜೀವನದ ಕುರಿತು ಮಾಹಿತಿ ನೀಡಿದರು. ಎಪಿಡಿ ಸಂಸ್ಥೆಯ ಹುಣಸಗಿ ತಾಲ್ಲೂಕು ಸಂಯೋಜಕ ಚನ್ನವೀರ ಅವರು ಸಂಸ್ಥೆಯ ಕಾರ್ಯಕ್ರಮಗಳ ಕುರಿತು ತಿಳಿಸಿದರು.</p>.<p>ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸಮುದಾಯ ಸಂಯೋಜಕ ಬಿ.ಬಿ.ಹಾಜಿರಾ, ರೇಣುಕಾ ಹಾಗೂ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-30-1936628330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ಇಲ್ಲಿನ ಯುಕೆಪಿ ಕ್ಯಾಂಪಿನಲ್ಲಿರುವ ಶಿಕ್ಷಕರ ಕಲಿಕಾ ಕೇಂದ್ರದಲ್ಲಿ ಎಪಿಡಿ ಸಂಸ್ಥೆಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹಾಗೂ ವಿಶೇಷ ಚೇತನ ಮಕ್ಕಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ರಮೇಶ ಮಾನೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಹಾಗೂ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು.</p>.<p>ಉನ್ನತ ಶಿಕ್ಷಣದ ಅವಕಾಶಗಳು, ವೃತ್ತಿಪರ ಕೋರ್ಸ್ಗಳು, ಕೌಶಲಾಭಿವೃದ್ಧಿ ತರಬೇತಿಗಳು, ಸರ್ಕಾರಿ ಯೋಜನೆಗಳು, ಸ್ವಯಂ ಉದ್ಯೋಗ ಮತ್ತು ಸ್ವಾವಲಂಬಿ ಜೀವನದ ಕುರಿತು ಮಾಹಿತಿ ನೀಡಿದರು. ಎಪಿಡಿ ಸಂಸ್ಥೆಯ ಹುಣಸಗಿ ತಾಲ್ಲೂಕು ಸಂಯೋಜಕ ಚನ್ನವೀರ ಅವರು ಸಂಸ್ಥೆಯ ಕಾರ್ಯಕ್ರಮಗಳ ಕುರಿತು ತಿಳಿಸಿದರು.</p>.<p>ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಸಮುದಾಯ ಸಂಯೋಜಕ ಬಿ.ಬಿ.ಹಾಜಿರಾ, ರೇಣುಕಾ ಹಾಗೂ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-30-1936628330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>