<p>ಜೇವರ್ಗಿ: ‘ಸತತ ಪರಿಶ್ರಮ ಇಲ್ಲದಿದ್ದರೆ ಯಾವ ಪರೀಕ್ಷೆಯನ್ನು ಗೆಲ್ಲಲು ಸಾಧ್ಯವಿಲ್ಲ’ ಎಂದು ಬಸವಶ್ರೀ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಬಸವರಾಜ ಕೋರೆ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ಸರ್ಕಲ್ ಹತ್ತಿರದ ಬಸವಶ್ರೀ ಪದವಿ ಕಾಲೇಜಿನಲ್ಲಿ ಬುಧವಾರ ಉಪನ್ಯಾಸಕ ಬಿ.ಎಸ್. ಸಾಲಿಮಠ ಅವರ ರಚಿತ ಇತಿಹಾಸ ಬಿಂಬ ಸ್ಪರ್ಧಾತ್ಮಕ ಪರೀಕ್ಷೆಗಳ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಓದುವಾಗ ಯಾವುದನ್ನೂ ಓದಬೇಕು. ಯಾವುದನ್ನು ಓದಬಾರದು ಎನ್ನುವುದನ್ನು ತಿಳಿದುಕೊಂಡರೆ ಉತ್ತಮ. ಪ್ರತಿದಿನ ಪತ್ರಿಕೆ ಓದಿ. ನಾಲ್ಕೈದು ವರ್ಷಗಳ ಸಾಮಾನ್ಯ ಜ್ಞಾನ ನಿಮಗೆ ತಿಳಿದಿರಲಿ. ಓದಲು ಸಮಯ ಇಟ್ಟುಕೊಂಡು ಕೂತಾಗ ಬೇರೆ ಕೆಲಸಗಳ ಬಗ್ಗೆ ಗಮನ ಕೊಡಬೇಡಿ’ ಎಂದು ಸಲಹೆ ನೀಡಿದರು.</p>.<p>ಲೇಖಕ ಬಿ.ಎಸ್. ಸಾಲಿಮಠ ಮಾತನಾಡಿ, ‘ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆವಾಗ ನಿಮಗೆ ಓದಲು ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಎನ್ನುವುದು ದೂರದ ಪಯಣ ಇದ್ದಂತೆ. ಇಲ್ಲಿ ಪರಿಶ್ರಮ ಮುಖ್ಯ. ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು’ ಎಂದರು.</p>.<p>ನೂರಂದೇಶ್ವರ ಕಾಲೇಜಿನ ಪ್ರಾಚಾರ್ಯ ವೆಂಕಟರಾವ ಮುಜುಮದಾರ, ನಿಂಬೆಣ್ಣ ರುದ್ರಪ್ಪಗೋಳ, ಉಪನ್ಯಾಸಕರಾದ ಸಂಜಯ ಪಾಟೀಲ, ಹಣಮಂತರಾಯ ಬಿರಾದಾರ, ಆನಂದ ಹರಸೂರ, ದೇವಪ್ಪ, ರಾಜಕುಮಾರ, ವಾಹಬ್, ಸಂತೋಷ, ಅಯ್ಯಣ್ಣ, ಅಶೋಕ ಪೂಜಾರಿ, ಅರ್ಚನಾ, ಪ್ರಿಯಾಂಕಾ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-31-180641640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೇವರ್ಗಿ: ‘ಸತತ ಪರಿಶ್ರಮ ಇಲ್ಲದಿದ್ದರೆ ಯಾವ ಪರೀಕ್ಷೆಯನ್ನು ಗೆಲ್ಲಲು ಸಾಧ್ಯವಿಲ್ಲ’ ಎಂದು ಬಸವಶ್ರೀ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಬಸವರಾಜ ಕೋರೆ ಹೇಳಿದರು.</p>.<p>ಪಟ್ಟಣದ ಬಸವೇಶ್ವರ ಸರ್ಕಲ್ ಹತ್ತಿರದ ಬಸವಶ್ರೀ ಪದವಿ ಕಾಲೇಜಿನಲ್ಲಿ ಬುಧವಾರ ಉಪನ್ಯಾಸಕ ಬಿ.ಎಸ್. ಸಾಲಿಮಠ ಅವರ ರಚಿತ ಇತಿಹಾಸ ಬಿಂಬ ಸ್ಪರ್ಧಾತ್ಮಕ ಪರೀಕ್ಷೆಗಳ ಕೈಪಿಡಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಓದುವಾಗ ಯಾವುದನ್ನೂ ಓದಬೇಕು. ಯಾವುದನ್ನು ಓದಬಾರದು ಎನ್ನುವುದನ್ನು ತಿಳಿದುಕೊಂಡರೆ ಉತ್ತಮ. ಪ್ರತಿದಿನ ಪತ್ರಿಕೆ ಓದಿ. ನಾಲ್ಕೈದು ವರ್ಷಗಳ ಸಾಮಾನ್ಯ ಜ್ಞಾನ ನಿಮಗೆ ತಿಳಿದಿರಲಿ. ಓದಲು ಸಮಯ ಇಟ್ಟುಕೊಂಡು ಕೂತಾಗ ಬೇರೆ ಕೆಲಸಗಳ ಬಗ್ಗೆ ಗಮನ ಕೊಡಬೇಡಿ’ ಎಂದು ಸಲಹೆ ನೀಡಿದರು.</p>.<p>ಲೇಖಕ ಬಿ.ಎಸ್. ಸಾಲಿಮಠ ಮಾತನಾಡಿ, ‘ಓದುವಾಗ ಯಾವಾಗಲೂ ಒಬ್ಬ ವ್ಯಕ್ತಿಯನ್ನು ಮಾದರಿಯನ್ನಾಗಿ ಇಟ್ಟುಕೊಳ್ಳಬೇಕು. ಆವಾಗ ನಿಮಗೆ ಓದಲು ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಎನ್ನುವುದು ದೂರದ ಪಯಣ ಇದ್ದಂತೆ. ಇಲ್ಲಿ ಪರಿಶ್ರಮ ಮುಖ್ಯ. ಧೈರ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು’ ಎಂದರು.</p>.<p>ನೂರಂದೇಶ್ವರ ಕಾಲೇಜಿನ ಪ್ರಾಚಾರ್ಯ ವೆಂಕಟರಾವ ಮುಜುಮದಾರ, ನಿಂಬೆಣ್ಣ ರುದ್ರಪ್ಪಗೋಳ, ಉಪನ್ಯಾಸಕರಾದ ಸಂಜಯ ಪಾಟೀಲ, ಹಣಮಂತರಾಯ ಬಿರಾದಾರ, ಆನಂದ ಹರಸೂರ, ದೇವಪ್ಪ, ರಾಜಕುಮಾರ, ವಾಹಬ್, ಸಂತೋಷ, ಅಯ್ಯಣ್ಣ, ಅಶೋಕ ಪೂಜಾರಿ, ಅರ್ಚನಾ, ಪ್ರಿಯಾಂಕಾ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-31-180641640</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>