<p>ಕುಷ್ಟಗಿ: ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವ ಹಿಂದುಳಿದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಮುಂದುವರಿಕೆಗಾಗಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಧಾರವಾಡದ ವಿದ್ಯಾಪೋಷಕ ಸ್ವಯಂ ಸೇವಾ ಸಂಸ್ಥೆ ಅರ್ಜಿ ಆಹ್ವಾನಿಸಿದೆ.</p>.<p>ಈ ವಿಷಯ ಕುರಿತು ಸೋಮವಾರ ಇಲ್ಲಿ ಸಂಸ್ಥೆಯ ಸ್ವಯಂ ಸೇವಕರಾದ ವೀರೇಶ ಬಂಗಾರಶೆಟ್ಟರ ಮತ್ತು ಅಮರೇಶ ಮುದೇನೂರು ಮಾಹಿತಿ ನೀಡಿದ್ದು, ಜೂನ್ 15ರೊಳಗೆ ಆನ್ಲೈನ್ (www.vidyaposhak.ngo) ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ಈ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮೊದಲ ಬಾರಿಗೆ ಬರೆದಿರುವ, ಪಿಯುಸಿ ವಾಣಿಜ್ಯ, ವಿಜ್ಞಾನ ವಿಭಾಗ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆದಿರಬೇಕು. ಎಸ್ಎಸ್ಎಲ್ಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮತ್ತು ವಾರ್ಷಿಕ ₹1.20 ಲಕ್ಷ ಕ್ಕಿಂತ ಕಡಿಮೆ ವಾರ್ಷಿಕ ಕುಟುಂಬ ಆದಾಯ ಹೊಂದಿರುವವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.</p>.<p>ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದರ ಜತೆಗೆ ಅವರ ಕೌಶಲ ಅಭಿವೃದ್ಧಿಗೆ ಪ್ರೋತ್ಸಾಹಿಸುವುದು, ಅಗತ್ಯ ಗ್ರಂಥಾಲಯ ಸೇವೆ ಒದಗಿಸುವುದು ಮತ್ತು ಪ್ರತಿಭಾವಂತರಿಗೆ ಲ್ಯಾಪ್ಟಾಪ್ ನೀಡಲಾಗುತ್ತದೆ. ಬಡ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸುವ ನಿಟ್ಟಿನಲ್ಲಿ ಸಂಸ್ಥೆ ಮುತುವರ್ಜಿ ವಹಿಸುತ್ತಿದೆ. ತಾಲ್ಲೂಕಿನ ಸುಮಾರು 25-30 ವಿದ್ಯಾರ್ಥಿಗಳಿಗೆ ಈ ಆರ್ಥಿಕ ನೆರವು ದೊರಕಲಿದೆ. ದಾನಿಗಳು, ಉದ್ಯಮಿಗಳ ಸಹಕಾರ ದೊರೆತರೆ ಈ ಅವಕಾಶವನ್ನು ಕೊಪ್ಪಳಕ್ಕೂ ವಿಸ್ತರಿಸುವ ಚಿಂತನೆಯಿದೆ ಎಂದು ವಿವರಿಸಿದರು. ಹೆಚ್ಚಿನ ಮಾಹಿತಿಗೆ 8123191034 ಸಂಪರ್ಕಿಸಬಹುದು ಎಂದು ಹೇಳಿದರು. ಶ್ರೀಧರ ಘೋರ್ಪಡೆ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-35-1705745976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಷ್ಟಗಿ: ಪ್ರಥಮ ಪಿಯುಸಿಗೆ ಪ್ರವೇಶ ಪಡೆಯುವ ಹಿಂದುಳಿದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಮುಂದುವರಿಕೆಗಾಗಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಧಾರವಾಡದ ವಿದ್ಯಾಪೋಷಕ ಸ್ವಯಂ ಸೇವಾ ಸಂಸ್ಥೆ ಅರ್ಜಿ ಆಹ್ವಾನಿಸಿದೆ.</p>.<p>ಈ ವಿಷಯ ಕುರಿತು ಸೋಮವಾರ ಇಲ್ಲಿ ಸಂಸ್ಥೆಯ ಸ್ವಯಂ ಸೇವಕರಾದ ವೀರೇಶ ಬಂಗಾರಶೆಟ್ಟರ ಮತ್ತು ಅಮರೇಶ ಮುದೇನೂರು ಮಾಹಿತಿ ನೀಡಿದ್ದು, ಜೂನ್ 15ರೊಳಗೆ ಆನ್ಲೈನ್ (www.vidyaposhak.ngo) ಮೂಲಕ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು. ಈ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮೊದಲ ಬಾರಿಗೆ ಬರೆದಿರುವ, ಪಿಯುಸಿ ವಾಣಿಜ್ಯ, ವಿಜ್ಞಾನ ವಿಭಾಗ ಮತ್ತು ಡಿಪ್ಲೊಮಾಕ್ಕೆ ಪ್ರವೇಶ ಪಡೆದಿರಬೇಕು. ಎಸ್ಎಸ್ಎಲ್ಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮತ್ತು ವಾರ್ಷಿಕ ₹1.20 ಲಕ್ಷ ಕ್ಕಿಂತ ಕಡಿಮೆ ವಾರ್ಷಿಕ ಕುಟುಂಬ ಆದಾಯ ಹೊಂದಿರುವವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.</p>.<p>ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವುದರ ಜತೆಗೆ ಅವರ ಕೌಶಲ ಅಭಿವೃದ್ಧಿಗೆ ಪ್ರೋತ್ಸಾಹಿಸುವುದು, ಅಗತ್ಯ ಗ್ರಂಥಾಲಯ ಸೇವೆ ಒದಗಿಸುವುದು ಮತ್ತು ಪ್ರತಿಭಾವಂತರಿಗೆ ಲ್ಯಾಪ್ಟಾಪ್ ನೀಡಲಾಗುತ್ತದೆ. ಬಡ ಮಕ್ಕಳಲ್ಲಿ ಕೀಳರಿಮೆ ಹೋಗಲಾಡಿಸುವ ನಿಟ್ಟಿನಲ್ಲಿ ಸಂಸ್ಥೆ ಮುತುವರ್ಜಿ ವಹಿಸುತ್ತಿದೆ. ತಾಲ್ಲೂಕಿನ ಸುಮಾರು 25-30 ವಿದ್ಯಾರ್ಥಿಗಳಿಗೆ ಈ ಆರ್ಥಿಕ ನೆರವು ದೊರಕಲಿದೆ. ದಾನಿಗಳು, ಉದ್ಯಮಿಗಳ ಸಹಕಾರ ದೊರೆತರೆ ಈ ಅವಕಾಶವನ್ನು ಕೊಪ್ಪಳಕ್ಕೂ ವಿಸ್ತರಿಸುವ ಚಿಂತನೆಯಿದೆ ಎಂದು ವಿವರಿಸಿದರು. ಹೆಚ್ಚಿನ ಮಾಹಿತಿಗೆ 8123191034 ಸಂಪರ್ಕಿಸಬಹುದು ಎಂದು ಹೇಳಿದರು. ಶ್ರೀಧರ ಘೋರ್ಪಡೆ ಇತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-35-1705745976</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>