<p>ಮೈಸೂರು: ಕಾಲೇಜು ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು ಅವಶ್ಯಕ ಎಂದು ಕಾಲೇಜಿನ ನಿರ್ದೇಶಕ ಹರೀಶ್ ಪಿ. ಹೇಳಿದರು.</p>.<p>ಇಲ್ಲಿನ ದಕ್ಷ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಬಿಎ ವಿಭಾಗದಿಂದ ‘ಕಾಲೇಜ್ ಟು ಕಾರ್ಪೊರೇಟ್–ಸ್ಕಿಲ್ಸ್ ದಟ್ ಮೇಕ್ ಯು ಎಂಬಿಎ ರೆಡಿ’ ವಿಷಯ ಕುರಿತು ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕೇವಲ ತಂತ್ರಜ್ಞಾನಕ್ಕೆ ಸೀಮಿತವಾಗದೇ ಪ್ರಾಯೋಗಿಕ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪೂಜಾ ಜೋಶಿ ಮಾತನಾಡಿ, ‘ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಇಂತಹ ಕಾರ್ಯಾಗಾರಗಳು ಅವಶ್ಯಕ’ ಎಂದರು.</p>.<p>ಕಾಲೇಜಿನ ಕಾರ್ಪೊರೇಟ್ ಸಲಹಾ ಮಂಡಳಿಯ ಅಧ್ಯಕ್ಷ ಸಂಜಯ್ ವಿರ್ನಾವೆ ಎಂ.ಬಿ.ಎ. ನಂತರದ ಉದ್ಯೋಗಾವಕಾಶಗಳು ವಿಷಯ ಕುರಿತು ಮಾತನಾಡಿದರು. ಅರ್ಪಿತಾ ಎಚ್.ಆರ್., ಜಯಂತ್, ಸುಮಂತ್, ಗೋಕುಲ್ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1652527873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕಾಲೇಜು ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದು ಅವಶ್ಯಕ ಎಂದು ಕಾಲೇಜಿನ ನಿರ್ದೇಶಕ ಹರೀಶ್ ಪಿ. ಹೇಳಿದರು.</p>.<p>ಇಲ್ಲಿನ ದಕ್ಷ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಬಿಎ ವಿಭಾಗದಿಂದ ‘ಕಾಲೇಜ್ ಟು ಕಾರ್ಪೊರೇಟ್–ಸ್ಕಿಲ್ಸ್ ದಟ್ ಮೇಕ್ ಯು ಎಂಬಿಎ ರೆಡಿ’ ವಿಷಯ ಕುರಿತು ಈಚೆಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಕೇವಲ ತಂತ್ರಜ್ಞಾನಕ್ಕೆ ಸೀಮಿತವಾಗದೇ ಪ್ರಾಯೋಗಿಕ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪೂಜಾ ಜೋಶಿ ಮಾತನಾಡಿ, ‘ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಇಂತಹ ಕಾರ್ಯಾಗಾರಗಳು ಅವಶ್ಯಕ’ ಎಂದರು.</p>.<p>ಕಾಲೇಜಿನ ಕಾರ್ಪೊರೇಟ್ ಸಲಹಾ ಮಂಡಳಿಯ ಅಧ್ಯಕ್ಷ ಸಂಜಯ್ ವಿರ್ನಾವೆ ಎಂ.ಬಿ.ಎ. ನಂತರದ ಉದ್ಯೋಗಾವಕಾಶಗಳು ವಿಷಯ ಕುರಿತು ಮಾತನಾಡಿದರು. ಅರ್ಪಿತಾ ಎಚ್.ಆರ್., ಜಯಂತ್, ಸುಮಂತ್, ಗೋಕುಲ್ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-39-1652527873</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>