<p>ನರಸಿಂಹರಾಜಪುರ: ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಜವಾಹರ ನವೋದಯ ವಿದ್ಯಾಸಂಸ್ಥೆಯ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಹೇಳಿದರು.</p>.<p>ಪಟ್ಟಣದ ಎಂಕೆಸಿಪಿಎಂ (ಶಾರದಾ ವಿದ್ಯಾಮಂದಿರ) ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಕೋರ್ಸ್ಗಳ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಪದವಿ ಪೂರ್ವ ಹಂತದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಎರಡು ವರ್ಷ ಕಠಿಣ ಪರಿಶ್ರಮದಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಸಮಯದ ಸದುಪಯೋಗ, ಆರೋಗ್ಯದ ಬಗ್ಗೆ ಕಾಳಜಿ, ಮಾನಸಿಕ ನಿಯಂತ್ರಣ ಜತೆಗೆ ಕಲಿಯುವ ತಂತ್ರವನ್ನು ಮೈಗೂಡಿಸಿಕೊಂಡಾಗ ಯಶಸ್ಸು ಸಾಧ್ಯವಾಗುತ್ತದೆ ಎಂದರು.</p>.<p>ಕಲಿಕೆಯ ಮೂಲ ಉದ್ದೇಶವನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಓದು. ಈ ಹಂತದಲ್ಲಿ ಉಪನ್ಯಾಸಕರೊಂದಿಗೆ ಕೂಡಿ ಕಲಿತಾಗ ವಿದ್ಯೆ ಮಹತ್ವವನ್ನು ಪಡೆದುಕೊಳ್ಳುತ್ತದೆ. ಮುಂದಿನ ಹಂತದ ಜ್ಞಾನಾರ್ಜನೆಗೆ ಬೇಕಾದ ಎಲ್ಲ ತಳಹದಿಗಳು ಇಲ್ಲಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಬೆಮ್ಮನೆ ದಯಾನಂದ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಕೃತಜ್ಞತಾ ಭಾವನೆ ಬೆಳೆಸಿಕೊಳ್ಳ ಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಎಂ.ಕೆ.ಸಿ.ಪಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೂರ್ಣ ಫಲಿತಾಂಶ ಪಡೆಯುತ್ತಿರುವುದು ಶ್ಲಾಘನೀಯ ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ಶೈಕ್ಷಣಿಕ ಸಂಯೋಜಕಿ ತೃಪ್ತಿ ಅಮರ್, ಪ್ರಾಂಶುಪಾಲೆ ಪದ್ಮ ರಮೇಶ್, ವಿದ್ಯಾರ್ಥಿಗಳಾದ ಲಕ್ಷ್ಮೀ, ಜಿಷಾ, ತೇಜಸ್ವಿನಿ, ಶಾಲ್ವಾ ಫಾತಿಮಾ, ಧೃತಿ ಭಾಗವಹಿಸಿದ್ದರು.</p>.<p>ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ದೀಕ್ಷಾ (588), ಬ್ರೇಟ್ಟಾ (580), ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಕೃಪಾನಿ (592), ಅಕ್ಷತಾ ಸೇನ್ (590) ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-1068856035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ಶ್ರದ್ಧೆ ಮತ್ತು ಸತತ ಪರಿಶ್ರಮದಿಂದ ಮಾತ್ರ ಯಶಸ್ಸುಗಳಿಸಲು ಸಾಧ್ಯ ಎಂದು ಜವಾಹರ ನವೋದಯ ವಿದ್ಯಾಸಂಸ್ಥೆಯ ನಿವೃತ್ತ ಸಹಾಯಕ ಆಯುಕ್ತ ರಾಮಚಂದ್ರ ಅಡ್ಡಮನೆ ಹೇಳಿದರು.</p>.<p>ಪಟ್ಟಣದ ಎಂಕೆಸಿಪಿಎಂ (ಶಾರದಾ ವಿದ್ಯಾಮಂದಿರ) ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿವಿಧ ಕೋರ್ಸ್ಗಳ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಪದವಿ ಪೂರ್ವ ಹಂತದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಎರಡು ವರ್ಷ ಕಠಿಣ ಪರಿಶ್ರಮದಿಂದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಸಮಯದ ಸದುಪಯೋಗ, ಆರೋಗ್ಯದ ಬಗ್ಗೆ ಕಾಳಜಿ, ಮಾನಸಿಕ ನಿಯಂತ್ರಣ ಜತೆಗೆ ಕಲಿಯುವ ತಂತ್ರವನ್ನು ಮೈಗೂಡಿಸಿಕೊಂಡಾಗ ಯಶಸ್ಸು ಸಾಧ್ಯವಾಗುತ್ತದೆ ಎಂದರು.</p>.<p>ಕಲಿಕೆಯ ಮೂಲ ಉದ್ದೇಶವನ್ನು ಅರ್ಥ ಮಾಡಿಕೊಳ್ಳುವುದೇ ನಿಜವಾದ ಓದು. ಈ ಹಂತದಲ್ಲಿ ಉಪನ್ಯಾಸಕರೊಂದಿಗೆ ಕೂಡಿ ಕಲಿತಾಗ ವಿದ್ಯೆ ಮಹತ್ವವನ್ನು ಪಡೆದುಕೊಳ್ಳುತ್ತದೆ. ಮುಂದಿನ ಹಂತದ ಜ್ಞಾನಾರ್ಜನೆಗೆ ಬೇಕಾದ ಎಲ್ಲ ತಳಹದಿಗಳು ಇಲ್ಲಿ ಲಭ್ಯವಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದರು.</p>.<p>ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಬೆಮ್ಮನೆ ದಯಾನಂದ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಕೃತಜ್ಞತಾ ಭಾವನೆ ಬೆಳೆಸಿಕೊಳ್ಳ ಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಎಂ.ಕೆ.ಸಿ.ಪಿ.ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪೂರ್ಣ ಫಲಿತಾಂಶ ಪಡೆಯುತ್ತಿರುವುದು ಶ್ಲಾಘನೀಯ ಎಂದರು.</p>.<p>ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಸ್.ಎಸ್.ಶಾಂತಕುಮಾರ್, ಜಂಟಿ ಕಾರ್ಯದರ್ಶಿ ಪಿ.ಕೆ.ಬಸವರಾಜಪ್ಪ, ಶೈಕ್ಷಣಿಕ ಸಂಯೋಜಕಿ ತೃಪ್ತಿ ಅಮರ್, ಪ್ರಾಂಶುಪಾಲೆ ಪದ್ಮ ರಮೇಶ್, ವಿದ್ಯಾರ್ಥಿಗಳಾದ ಲಕ್ಷ್ಮೀ, ಜಿಷಾ, ತೇಜಸ್ವಿನಿ, ಶಾಲ್ವಾ ಫಾತಿಮಾ, ಧೃತಿ ಭಾಗವಹಿಸಿದ್ದರು.</p>.<p>ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ದೀಕ್ಷಾ (588), ಬ್ರೇಟ್ಟಾ (580), ವಾಣಿಜ್ಯ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದ ಕೃಪಾನಿ (592), ಅಕ್ಷತಾ ಸೇನ್ (590) ಅವರನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-126-1068856035</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>