<p>ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. 595 (ಶೇ 99.16) ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5ನೇ ಸ್ಥಾನಕ್ಕೆ ಜಿಗಿದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾನೆ.</p>.<p>ವಿಜ್ಞಾನ ವಿಭಾಗದ ಪ್ರಥಮ ಫಲಿತಾಂಶದಲ್ಲಿ ತನುಶ್ರೀ 593 (ಶೇ 98.83) ಅಂಕ ಗಳಿಸಿ ರಾಜ್ಯದಲ್ಲಿ 7 ಸ್ಥಾನ ಪಡೆದಿದ್ದಳು. ಚಿನ್ಮಯ್ ಮರು ಮೌಲ್ಯಮಾಪನಕ್ಕೆ ಒಳಪಡಿಸಿದಂತೆ ಏಪ್ರಿಲ್ 29ರಂದು ಹೊರಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ 595 (ಶೇ 99. 16) ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ (ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದಿದ್ದಾನೆ.</p>.<p>ತನುಶ್ರೀ 593 (ಶೇ 98.83) (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100) ನಾಲ್ಕು ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಹಾಗೂ ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ.</p>.<p>ವಾಣಿಜ್ಯ ವಿಭಾಗದಲ್ಲಿ ಧ್ಯಾನ ಈ ಹಿಂದೆ 590 ಅಂಕ (ಕನ್ನಡ-100, ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100) ಪಡೆದಿದ್ದು ಮರು ಮೌಲ್ಯಮಾಪನ ನಡೆಸಿದಾಗ ಭಾಷಾ ವಿಷಯದಲ್ಲಿ ಹೆಚ್ಚುವರಿ 1 ಅಂಕ ಪಡೆದು (591) ಶೇ 98.50 ಅಂಕ ಪಡೆದು ರಾಜ್ಯಕ್ಕೆ 9ನೇ ರ್ಯಾಂಕ್, ಕಾಲೇಜಿಗೆ ತೃತೀಯ ಸ್ಥಾನಿಯಾಗಿದ್ದಾನೆ.</p>.<p>ಉಳಿದಂತೆ ವಿಜ್ಞಾನ ವಿಭಾಗದಲ್ಲಿ ಈ ಹಿಂದೆ ಜಿ.ಎಸ್.ರಾಹುಲ್ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 4 ಅಂಕಪಡೆದು 588, ಆಶ್ಲೇಷ್ ಜೆ.ಎಸ್. ಹೆಚ್ಚುವರಿ 6 ಅಂಕ ಪಡೆದು 573, ಸಮ್ಯಕ್ ತೇಜಸ್ವಿ ಹೆಚ್ಚುವರಿ 4 (576) ಅಂಕ ಪದಿದ್ದಾರೆ. ಮೈಥಿಲಿ ಗೋರೆ, ಮೋಕ್ಷಾ, ನಿನಾದ ಎಸ್.ಎ., ಪ್ರಣವ್ ದೇವ್, ವೆನಿಕಾ ಬಿ.ವೈ., ವಿಕಾಸ್ ಜಿ.ಎನ್., ಯಶಸ್ವಿ ಆರ್.ಸಾಲ್ಯಾನ್, ಯಶಸ್ವಿನಿ ಜಯೇಂದ್ರ ಬಂಗೇರ ಹೆಚ್ಚುವರಿ ಅಂಕ ಪಡೆದಿದ್ದಾರೆ.</p>.<p>ವಾಣಿಜ್ಯ ವಿಭಾಗದಲ್ಲಿ ನೇಹಾ ಭಟ್ ಹೆಚ್ಚುವರಿ 11 ಅಂಕ ಪಡೆದು 584 (ಶೇ 97.33) ಸಾಧನೆ ಮಾಡಿದ್ದಾರೆ. ಒಟ್ಟು 17 ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕಾಗಿ ಪ್ರಯತ್ನಿಸಿದ್ದು ಈ ಪೈಕಿ ಬಹುತೇಕ ಮಂದಿ ಹೆಚ್ಚುವರಿ ಅಂಕ ಪಡೆದಿದ್ದಾರೆ ಎಂದು ಶೈಕ್ಷಣಿಕ ಮಂಡಳಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಎಂ.ಕೆ. ಕಾಶಿನಾಥ್., ನಿರ್ದೇಶಕ ಗಂಗಾಧರ್ ಇ. ಮಂಡಳಲೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1676567889</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ. 595 (ಶೇ 99.16) ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 5ನೇ ಸ್ಥಾನಕ್ಕೆ ಜಿಗಿದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾನೆ.</p>.<p>ವಿಜ್ಞಾನ ವಿಭಾಗದ ಪ್ರಥಮ ಫಲಿತಾಂಶದಲ್ಲಿ ತನುಶ್ರೀ 593 (ಶೇ 98.83) ಅಂಕ ಗಳಿಸಿ ರಾಜ್ಯದಲ್ಲಿ 7 ಸ್ಥಾನ ಪಡೆದಿದ್ದಳು. ಚಿನ್ಮಯ್ ಮರು ಮೌಲ್ಯಮಾಪನಕ್ಕೆ ಒಳಪಡಿಸಿದಂತೆ ಏಪ್ರಿಲ್ 29ರಂದು ಹೊರಬಂದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ 595 (ಶೇ 99. 16) ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್ಯಾಂಕ್ (ಭೌತಶಾಸ್ತ್ರ-100, ರಸಾಯನಶಾಸ್ತ್ರ-100, ಗಣಿತ-100 ಮತ್ತು ಗಣಕ ವಿಜ್ಞಾನ-100) ಪಡೆದಿದ್ದಾನೆ.</p>.<p>ತನುಶ್ರೀ 593 (ಶೇ 98.83) (ರಸಾಯನಶಾಸ್ತ್ರ-100, ಭೌತಶಾಸ್ತ್ರ-100 ಗಣಿತಶಾಸ್ತ್ರ-100, ಜೀವಶಾಸ್ತ್ರ-100) ನಾಲ್ಕು ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಹಾಗೂ ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ.</p>.<p>ವಾಣಿಜ್ಯ ವಿಭಾಗದಲ್ಲಿ ಧ್ಯಾನ ಈ ಹಿಂದೆ 590 ಅಂಕ (ಕನ್ನಡ-100, ವ್ಯವಹಾರ ಅಧ್ಯಯನ-100, ಲೆಕ್ಕಶಾಸ್ತ್ರ-100) ಪಡೆದಿದ್ದು ಮರು ಮೌಲ್ಯಮಾಪನ ನಡೆಸಿದಾಗ ಭಾಷಾ ವಿಷಯದಲ್ಲಿ ಹೆಚ್ಚುವರಿ 1 ಅಂಕ ಪಡೆದು (591) ಶೇ 98.50 ಅಂಕ ಪಡೆದು ರಾಜ್ಯಕ್ಕೆ 9ನೇ ರ್ಯಾಂಕ್, ಕಾಲೇಜಿಗೆ ತೃತೀಯ ಸ್ಥಾನಿಯಾಗಿದ್ದಾನೆ.</p>.<p>ಉಳಿದಂತೆ ವಿಜ್ಞಾನ ವಿಭಾಗದಲ್ಲಿ ಈ ಹಿಂದೆ ಜಿ.ಎಸ್.ರಾಹುಲ್ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 4 ಅಂಕಪಡೆದು 588, ಆಶ್ಲೇಷ್ ಜೆ.ಎಸ್. ಹೆಚ್ಚುವರಿ 6 ಅಂಕ ಪಡೆದು 573, ಸಮ್ಯಕ್ ತೇಜಸ್ವಿ ಹೆಚ್ಚುವರಿ 4 (576) ಅಂಕ ಪದಿದ್ದಾರೆ. ಮೈಥಿಲಿ ಗೋರೆ, ಮೋಕ್ಷಾ, ನಿನಾದ ಎಸ್.ಎ., ಪ್ರಣವ್ ದೇವ್, ವೆನಿಕಾ ಬಿ.ವೈ., ವಿಕಾಸ್ ಜಿ.ಎನ್., ಯಶಸ್ವಿ ಆರ್.ಸಾಲ್ಯಾನ್, ಯಶಸ್ವಿನಿ ಜಯೇಂದ್ರ ಬಂಗೇರ ಹೆಚ್ಚುವರಿ ಅಂಕ ಪಡೆದಿದ್ದಾರೆ.</p>.<p>ವಾಣಿಜ್ಯ ವಿಭಾಗದಲ್ಲಿ ನೇಹಾ ಭಟ್ ಹೆಚ್ಚುವರಿ 11 ಅಂಕ ಪಡೆದು 584 (ಶೇ 97.33) ಸಾಧನೆ ಮಾಡಿದ್ದಾರೆ. ಒಟ್ಟು 17 ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕಾಗಿ ಪ್ರಯತ್ನಿಸಿದ್ದು ಈ ಪೈಕಿ ಬಹುತೇಕ ಮಂದಿ ಹೆಚ್ಚುವರಿ ಅಂಕ ಪಡೆದಿದ್ದಾರೆ ಎಂದು ಶೈಕ್ಷಣಿಕ ಮಂಡಳಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಖಜಾಂಚಿ ಎಂ.ಕೆ. ಕಾಶಿನಾಥ್., ನಿರ್ದೇಶಕ ಗಂಗಾಧರ್ ಇ. ಮಂಡಳಲೆ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-29-1676567889</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>