<p>ಹುಲಸೂರ: ಶರಣ ಉರಿಲಿಂಗ ಪೆದ್ದಿ ಮಠ, ಬೇಲೂರು ಹಾಗೂ ಶರಣ ಉರಿಲಿಂಗ ಪೆದ್ದಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಸಾನ್ನಿಧ್ಯ ವಹಿಸಿದ್ದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿ, ‘ಶರಣರ ನಾಡಾದ ಬೇಲೂರಿನಲ್ಲಿ ಶೈಕ್ಷಣಿಕ ಕ್ರಾಂತಿ ನಡೆಯುತ್ತಿರುವುದು ಸಂತೋಷದ ಸಂಗತಿ ಎಂದ ಅವರು, ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸವನ್ನು ಉತ್ತಮಗೊಳಿಸಿಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಮಾಜ ಸೇವೆಯಲ್ಲಿ ತೊಡಗಬೇಕು’ ಎಂದರು.</p>.<p>ಉದ್ಘಾಟಕರಾಗಿ ಭಾಗವಹಿಸಿದ್ದ ಹುಲಸೂರಿನ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಉರಿಲಿಂಗ ಪೆದ್ದಿ ಮಠದ ಆಶ್ರಯದಲ್ಲಿ ಬೇಲೂರು ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಸನ್ಮಾರ್ಗದ ಕಡೆ ಸಾಗುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಬೇಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣ ಬಸಪ್ಪ ಬಿರಾದಾರ ಮಾತನಾಡಿ, ‘25 ವರ್ಷಗಳ ಬಳಿಕ ಶಾಲೆಗೆ ಶೇ 100ರಷ್ಟು ಫಲಿತಾಂಶ ಲಭಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ಹಾಗೂ ಪಾಲಕರ ಪರಿಶ್ರಮ ಮುಖ್ಯ ಕಾರಣ’ ಎಂದು ಹೇಳಿದರು.</p>.<p>ಶಿಕ್ಷಕ ಸಂಜೀವಕುಮಾರ ನಡುಕರ, ಹುಲಸೂರು ತಾಲ್ಲೂಕು ಪಂಚಾಯಿತಿ ಇಒ ಮಹಾದೇವ ಜಮ್ಮು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಪಿಡಿಒ ಬಸಪ್ಪ ಖಡ್ಡೆ, ವಕೀಲ ಸಂಜೀವಕುಮಾರ ಖೇಲೆ, ಶರಣಪ್ಪ ಗದಲೇಗಾಂವ, ಗುರುನಾಥ ವಿಠ್ಠಲ ವಾಗ್ಮಾರೆ, ಅಶೋಕ ರಾಜೋಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<p>ಭೀಮಶ್ಯಾ ವಾಗ್ಮಾರೆ ಸ್ವಾಗತಿಸಿದರು.ಮಹಾಲಿಂಗ ದೇವರು ಕಾರ್ಯಕ್ರಮ ನಿರೂಪಿಸಿದರು. ಗಣೇಶ ರಾಧು ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-33-725907712</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಶರಣ ಉರಿಲಿಂಗ ಪೆದ್ದಿ ಮಠ, ಬೇಲೂರು ಹಾಗೂ ಶರಣ ಉರಿಲಿಂಗ ಪೆದ್ದಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಬುದ್ಧ ಪೂರ್ಣಿಮೆ ಅಂಗವಾಗಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು.</p>.<p>ಕಾರ್ಯಕ್ರಮಕ್ಕೆ ಸಾನ್ನಿಧ್ಯ ವಹಿಸಿದ್ದ ಪಂಚಾಕ್ಷರಿ ಸ್ವಾಮೀಜಿ ಮಾತನಾಡಿ, ‘ಶರಣರ ನಾಡಾದ ಬೇಲೂರಿನಲ್ಲಿ ಶೈಕ್ಷಣಿಕ ಕ್ರಾಂತಿ ನಡೆಯುತ್ತಿರುವುದು ಸಂತೋಷದ ಸಂಗತಿ ಎಂದ ಅವರು, ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸವನ್ನು ಉತ್ತಮಗೊಳಿಸಿಕೊಂಡು ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಮಾಜ ಸೇವೆಯಲ್ಲಿ ತೊಡಗಬೇಕು’ ಎಂದರು.</p>.<p>ಉದ್ಘಾಟಕರಾಗಿ ಭಾಗವಹಿಸಿದ್ದ ಹುಲಸೂರಿನ ತಹಶೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಉರಿಲಿಂಗ ಪೆದ್ದಿ ಮಠದ ಆಶ್ರಯದಲ್ಲಿ ಬೇಲೂರು ರಾಜ್ಯದಾದ್ಯಂತ ಹೆಸರುವಾಸಿಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಸನ್ಮಾರ್ಗದ ಕಡೆ ಸಾಗುತ್ತಿರುವುದು ಶ್ಲಾಘನೀಯ’ ಎಂದರು.</p>.<p>ಬೇಲೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣ ಬಸಪ್ಪ ಬಿರಾದಾರ ಮಾತನಾಡಿ, ‘25 ವರ್ಷಗಳ ಬಳಿಕ ಶಾಲೆಗೆ ಶೇ 100ರಷ್ಟು ಫಲಿತಾಂಶ ಲಭಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ಹಾಗೂ ಪಾಲಕರ ಪರಿಶ್ರಮ ಮುಖ್ಯ ಕಾರಣ’ ಎಂದು ಹೇಳಿದರು.</p>.<p>ಶಿಕ್ಷಕ ಸಂಜೀವಕುಮಾರ ನಡುಕರ, ಹುಲಸೂರು ತಾಲ್ಲೂಕು ಪಂಚಾಯಿತಿ ಇಒ ಮಹಾದೇವ ಜಮ್ಮು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಪಿಡಿಒ ಬಸಪ್ಪ ಖಡ್ಡೆ, ವಕೀಲ ಸಂಜೀವಕುಮಾರ ಖೇಲೆ, ಶರಣಪ್ಪ ಗದಲೇಗಾಂವ, ಗುರುನಾಥ ವಿಠ್ಠಲ ವಾಗ್ಮಾರೆ, ಅಶೋಕ ರಾಜೋಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p>.<p>ಭೀಮಶ್ಯಾ ವಾಗ್ಮಾರೆ ಸ್ವಾಗತಿಸಿದರು.ಮಹಾಲಿಂಗ ದೇವರು ಕಾರ್ಯಕ್ರಮ ನಿರೂಪಿಸಿದರು. ಗಣೇಶ ರಾಧು ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-33-725907712</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>