<p>ಕಲಬುರಗಿ: ‘ನಮ್ಮಲ್ಲಿ ಸೌಲಭ್ಯಗಳು ಕಡಿಮೆ ಇದ್ದರೂ, ನಮ್ಮ ಕನಸುಗಳು ದೊಡ್ಡದಾಗಿರಬೇಕು. ಪರಿಸ್ಥಿತಿ ಹೇಗಿದ್ದರೂ ಕನಸುಗಳನ್ನು ಬಿಡಬಾರದು. ಪರಿಶ್ರಮವೇ ಭವಿಷ್ಯವನ್ನು ನಿರ್ಮಿಸುತ್ತದೆ’ ಎಂದು ಪಿಯುಸಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಸೃಷ್ಟಿ ಮಲ್ಲಿನಾಥ ಪಾಟೀಲ ಹೇಳಿದರು.</p>.<p>ನಗರದ ಸಂತೋಷ ಕಾಲೊನಿಯ ಕೆಎಚ್ಬಿ ಗ್ರೀನ್ ಪಾರ್ಕ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಡಾವಣೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕರ್ನಾಟಕ ಪರಿಶ್ರಮವಾದಿಗಳ ಫಲವತ್ತಾದ ಭೂಮಿಯಾಗಿದೆ. ನನ್ನ ತಂದೆ–ತಾಯಿಯ ತ್ಯಾಗ, ಗುರುಗಳ ಮಾರ್ಗದರ್ಶನ ಸಾಧನೆಗೆ ಸ್ಫೂರ್ತಿಯಾಯಿತು’ ಎಂದರು.</p>.<p>ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ, ಶಿಕ್ಷಣ ಪ್ರೇಮಿ ಸಂಗಮೇಶ ಸರಡಗಿ, ವಕೀಲ ಹಣಮಂತರಾಯ ಅಟ್ಟೂರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಶ್ರೀನಿವಾಸ ಬುಜ್ಜಿ, ಬಸವರಾಜ ಹೆಳವಾರ, ದಿಲೀಪಕುಮಾರ ಭಕ್ರೆ, ಸಂಜೀವಕುಮಾರ ಮಡ್ದೆ, ಬಸವರಾಜ ಕೊರಳ್ಳಿ, ಸೂರ್ಯಕಾಂತ ಸಾವಳಗಿ, ಹಣಮಂತ ಪೂಜಾರಿ, ಸಾಯಿ ಟೇಲರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-34-1082525098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ನಮ್ಮಲ್ಲಿ ಸೌಲಭ್ಯಗಳು ಕಡಿಮೆ ಇದ್ದರೂ, ನಮ್ಮ ಕನಸುಗಳು ದೊಡ್ಡದಾಗಿರಬೇಕು. ಪರಿಸ್ಥಿತಿ ಹೇಗಿದ್ದರೂ ಕನಸುಗಳನ್ನು ಬಿಡಬಾರದು. ಪರಿಶ್ರಮವೇ ಭವಿಷ್ಯವನ್ನು ನಿರ್ಮಿಸುತ್ತದೆ’ ಎಂದು ಪಿಯುಸಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಸೃಷ್ಟಿ ಮಲ್ಲಿನಾಥ ಪಾಟೀಲ ಹೇಳಿದರು.</p>.<p>ನಗರದ ಸಂತೋಷ ಕಾಲೊನಿಯ ಕೆಎಚ್ಬಿ ಗ್ರೀನ್ ಪಾರ್ಕ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಡಾವಣೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕಲ್ಯಾಣ ಕರ್ನಾಟಕ ಪರಿಶ್ರಮವಾದಿಗಳ ಫಲವತ್ತಾದ ಭೂಮಿಯಾಗಿದೆ. ನನ್ನ ತಂದೆ–ತಾಯಿಯ ತ್ಯಾಗ, ಗುರುಗಳ ಮಾರ್ಗದರ್ಶನ ಸಾಧನೆಗೆ ಸ್ಫೂರ್ತಿಯಾಯಿತು’ ಎಂದರು.</p>.<p>ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ, ಶಿಕ್ಷಣ ಪ್ರೇಮಿ ಸಂಗಮೇಶ ಸರಡಗಿ, ವಕೀಲ ಹಣಮಂತರಾಯ ಅಟ್ಟೂರ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಶ್ರೀನಿವಾಸ ಬುಜ್ಜಿ, ಬಸವರಾಜ ಹೆಳವಾರ, ದಿಲೀಪಕುಮಾರ ಭಕ್ರೆ, ಸಂಜೀವಕುಮಾರ ಮಡ್ದೆ, ಬಸವರಾಜ ಕೊರಳ್ಳಿ, ಸೂರ್ಯಕಾಂತ ಸಾವಳಗಿ, ಹಣಮಂತ ಪೂಜಾರಿ, ಸಾಯಿ ಟೇಲರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-34-1082525098</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>