<p>ಕಳಸ: ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಗೌಡಲು ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿನ ಕಳಸ ತಾಲ್ಲೂಕು ಗಿರಿಜನ ಗೌಡಲು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಜನಪದ ಕಲೆಯಾದ ಅಂಟಿಕೆ ಪಿಂಟಿಕೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರದ ಅಧಿಕಾರಿ ಡಾ.ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬುಡಕಟ್ಟು ಪಂಗಡಗಳ ಮಕ್ಕಳು ಉನ್ನತ ವ್ಯಾಸಂಗಕ್ಕೆ ಒತ್ತು ನೀಡಬೇಕು ಎಂದರು.</p>.<p>ಧ್ವನಿ ಕಾನೂನು ಜಾಗೃತಿ ಟ್ರಸ್ಟ್ ಸಂಸ್ಥಾಪಕ ಕೆ.ಎಲ್.ಕಾರ್ತಿಕ್ ಮಾತನಾಡಿ, ಬುಡಕಟ್ಟು ಜನರ ಹಕ್ಕುಗಳು ಮತ್ತು ಈ ಸಮುದಾಯದ ಏಳ್ಗೆಗೆ ಸಮಾಜದಲ್ಲಿ ಇರುವ ಅವಕಾಶಗಳ ಬಗ್ಗೆ ವಿವರಿಸಿದರು.</p>.<p>ಕಿರುತೆರೆ ಕಲಾವಿದ ಗಜೇಂದ್ರ ಮರಸಣಿಗೆ, ಯಕ್ಷಗಾನ ಕಲಾವಿದೆ ಗಿರಿಜಾ ಗೋಪಾಲ ಬೇಡಕ್ಕಿ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಅಧ್ಯಕ್ಷ ಅನಿಲ್ ಮುಜೇಕಾನು, ಕಾರ್ಯದರ್ಶಿ ಕುಕ್ಕೋಡು ಗಣೇಶ್, ಖಜಾಂಜಿ ಬಾಲಕೃಷ್ಣ, ಶಿಕ್ಷಕರಾದ ಶಿವಪ್ಪ, ರಾಜೇಶ್ ಮಲಗಾರು, ಸುಧಾಕರ ಹುಲ್ಲಿನುಡಿಗೆ, ಮೇಘಾನಂದ ಬೇಡಕ್ಕಿ, ದಿನೇಶ್ ಎಸ್.ಕೆ.ಮೇಗಲ್, ಸುರೇಶ್ ಕೆರ್ನಾಳಿ, ನಾಗೇಂದ್ರ ಮುಜೇಕಾನು, ರೇವತಿ, ಸುರೇಶ್ ಬಿಳಿಗಲ್, ಸತೀಶ್ ಒಡ್ಡಿಕಟ್ಟೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1304754171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳಸ: ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಗೌಡಲು ಸಮುದಾಯದ ವಿದ್ಯಾರ್ಥಿಗಳಿಗೆ ಇಲ್ಲಿನ ಕಳಸ ತಾಲ್ಲೂಕು ಗಿರಿಜನ ಗೌಡಲು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಜನಪದ ಕಲೆಯಾದ ಅಂಟಿಕೆ ಪಿಂಟಿಕೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರದ ಅಧಿಕಾರಿ ಡಾ.ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬುಡಕಟ್ಟು ಪಂಗಡಗಳ ಮಕ್ಕಳು ಉನ್ನತ ವ್ಯಾಸಂಗಕ್ಕೆ ಒತ್ತು ನೀಡಬೇಕು ಎಂದರು.</p>.<p>ಧ್ವನಿ ಕಾನೂನು ಜಾಗೃತಿ ಟ್ರಸ್ಟ್ ಸಂಸ್ಥಾಪಕ ಕೆ.ಎಲ್.ಕಾರ್ತಿಕ್ ಮಾತನಾಡಿ, ಬುಡಕಟ್ಟು ಜನರ ಹಕ್ಕುಗಳು ಮತ್ತು ಈ ಸಮುದಾಯದ ಏಳ್ಗೆಗೆ ಸಮಾಜದಲ್ಲಿ ಇರುವ ಅವಕಾಶಗಳ ಬಗ್ಗೆ ವಿವರಿಸಿದರು.</p>.<p>ಕಿರುತೆರೆ ಕಲಾವಿದ ಗಜೇಂದ್ರ ಮರಸಣಿಗೆ, ಯಕ್ಷಗಾನ ಕಲಾವಿದೆ ಗಿರಿಜಾ ಗೋಪಾಲ ಬೇಡಕ್ಕಿ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಅಧ್ಯಕ್ಷ ಅನಿಲ್ ಮುಜೇಕಾನು, ಕಾರ್ಯದರ್ಶಿ ಕುಕ್ಕೋಡು ಗಣೇಶ್, ಖಜಾಂಜಿ ಬಾಲಕೃಷ್ಣ, ಶಿಕ್ಷಕರಾದ ಶಿವಪ್ಪ, ರಾಜೇಶ್ ಮಲಗಾರು, ಸುಧಾಕರ ಹುಲ್ಲಿನುಡಿಗೆ, ಮೇಘಾನಂದ ಬೇಡಕ್ಕಿ, ದಿನೇಶ್ ಎಸ್.ಕೆ.ಮೇಗಲ್, ಸುರೇಶ್ ಕೆರ್ನಾಳಿ, ನಾಗೇಂದ್ರ ಮುಜೇಕಾನು, ರೇವತಿ, ಸುರೇಶ್ ಬಿಳಿಗಲ್, ಸತೀಶ್ ಒಡ್ಡಿಕಟ್ಟೆ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-126-1304754171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>