<p>ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.</p>.<p>ವಿಜ್ಞಾನ ವಿಭಾಗದಲ್ಲಿ ಧನುಷ್ ಗುತ್ತಿ 598 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 593 ಅಂಕಗಳನ್ನು ಪಡೆದ ಸರಸ್ವತಿ ಎಂ.ಎಸ್., ಉಪನ್ಯಾಸಕರ ಮಾರ್ಗದರ್ಶನ ಮತ್ತು ಕಾಲೇಜಿನ ನಿರ್ದೇಶಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು ಎಂದರು.</p>.<p>592 ಅಂಕಗಳೊಂದಿಗೆ ಸಾಧನೆ ಮಾಡಿರುವ ತಸ್ನೀಮ್ ಎಸ್.ಎಂ., ಕಾಲೇಜಿನ ಪರಿಸರ ಮತ್ತು ಉಪನ್ಯಾಸಕರ ನಿರಂತರ ಸಹಕಾರ ಯಶಸ್ಸಿಗೆ ಕಾರಣ ಎಂದು ತಿಳಿಸಿದರು.</p>.<p>‘ರ್ಯಾಂಕ್ ಬರುವ ನಿರೀಕ್ಷೆ ಇತ್ತು. ಚೆನ್ನಾಗಿ ಅಭ್ಯಾಸ ಮಾಡಿದ್ದೆ. ಕಾಲೇಜಿನಲ್ಲಿ ಒದಗಿಸಿದ್ದ ಪಠ್ಯವಸ್ತುಗಳನ್ನೇ ಕೇಂದ್ರೀಕರಿಸಿ ಅಭ್ಯಾಸ ಮಾಡಿದ್ದೆ. ಅಪ್ಪನಂತೆ ಮೆಕ್ಯಾನಿಕಲ್ ಎಂಜಿನಿಯರ್ ಆಗುವ ಆಸೆ ಇದೆ.</p>.<p>ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದು, ಈ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದೇನೆ’ ಎಂದು ಧನುಷ್ ಗುತ್ತಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದನು.</p>.<p>ಈತ ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ರಾಜೇಂದ್ರ ಗುತ್ತಿ– ಆಶಾ ಗುತ್ತಿ ದಂಪತಿ ಪುತ್ರ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-29-1417563667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.</p>.<p>ವಿಜ್ಞಾನ ವಿಭಾಗದಲ್ಲಿ ಧನುಷ್ ಗುತ್ತಿ 598 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 593 ಅಂಕಗಳನ್ನು ಪಡೆದ ಸರಸ್ವತಿ ಎಂ.ಎಸ್., ಉಪನ್ಯಾಸಕರ ಮಾರ್ಗದರ್ಶನ ಮತ್ತು ಕಾಲೇಜಿನ ನಿರ್ದೇಶಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು ಎಂದರು.</p>.<p>592 ಅಂಕಗಳೊಂದಿಗೆ ಸಾಧನೆ ಮಾಡಿರುವ ತಸ್ನೀಮ್ ಎಸ್.ಎಂ., ಕಾಲೇಜಿನ ಪರಿಸರ ಮತ್ತು ಉಪನ್ಯಾಸಕರ ನಿರಂತರ ಸಹಕಾರ ಯಶಸ್ಸಿಗೆ ಕಾರಣ ಎಂದು ತಿಳಿಸಿದರು.</p>.<p>‘ರ್ಯಾಂಕ್ ಬರುವ ನಿರೀಕ್ಷೆ ಇತ್ತು. ಚೆನ್ನಾಗಿ ಅಭ್ಯಾಸ ಮಾಡಿದ್ದೆ. ಕಾಲೇಜಿನಲ್ಲಿ ಒದಗಿಸಿದ್ದ ಪಠ್ಯವಸ್ತುಗಳನ್ನೇ ಕೇಂದ್ರೀಕರಿಸಿ ಅಭ್ಯಾಸ ಮಾಡಿದ್ದೆ. ಅಪ್ಪನಂತೆ ಮೆಕ್ಯಾನಿಕಲ್ ಎಂಜಿನಿಯರ್ ಆಗುವ ಆಸೆ ಇದೆ.</p>.<p>ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದು, ಈ ಪರೀಕ್ಷೆ ಸಿದ್ಧತೆಯಲ್ಲಿ ತೊಡಗಿದ್ದೇನೆ’ ಎಂದು ಧನುಷ್ ಗುತ್ತಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದನು.</p>.<p>ಈತ ಬೆಂಗಳೂರಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿರುವ ರಾಜೇಂದ್ರ ಗುತ್ತಿ– ಆಶಾ ಗುತ್ತಿ ದಂಪತಿ ಪುತ್ರ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260410-29-1417563667</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>