<p>ಮೈಸೂರು: ರಾಜ್ಯ ಸರ್ಕಾರವು ಜಿಲ್ಲೆಯ ಎರಡು ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ (ಪಿಯು) ಕಾಲೇಜುಗಳಾಗಿ ಉನ್ನತೀಕರಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಹೆಚ್ಚುವರಿಯಾಗಿ ಎರಡು ಪಿಯು ಕಾಲೇಜುಗಳು ಸೇರ್ಪಡೆಯಾದಂತಾಗಿದೆ.</p>.<p>ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಸಾಲುಂಡಿ ಹಾಗೂ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಈ ‘ಮೇಲ್ದರ್ಜೆಯ ಗ್ಯಾರಂಟಿ’ ದೊರೆತಿದೆ. ಇಲ್ಲಿಗೆ ಪ್ರಥಮ ಪಿಯುಗೆ ದಾಖಲಾತಿ ಮಾಡಿಕೊಳ್ಳಲಾಗುವುದು. ಇದರೊಂದಿಗೆ, ಗ್ರಾಮೀಣ ಶಿಕ್ಷಣ ವ್ಯವಸ್ಥೆ ಬಲಪಡಿಸುವ ಕೆಲಸವನ್ನು ಶಾಲಾ ಶಿಕ್ಷಣ ಇಲಾಖೆಯ(ಪಿಯು) ಮೂಲಕ ಮಾಡಲಾಗುತ್ತಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಗಳ, ಎಸ್ಎಸ್ಎಲ್ಸಿ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ಇದನ್ನು ಈಗ ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಒಟ್ಟು 23 ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿದ್ದು, ಅವುಗಳಲ್ಲಿ ಮೈಸೂರು ಜಿಲ್ಲೆಯ ಎರಡು ಪ್ರೌಢಶಾಲೆಗಳು ಸೇರಿವೆ.</p>.<p>ಜಿಲ್ಲೆಯಲ್ಲಿ ಈವರೆಗೆ 272 ಪಿಯು ಕಾಲೇಜುಗಳಿದ್ದವು. ಹೊಸ ಕಾಲೇಜುಗಳೊಂದಿಗೆ ಈ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.</p>.<p>ಕಾಮರ್ಸ್ ಸಂಯೋಜನೆ: ಪ್ರಸಕ್ತ 2026–27ನೇ ಸಾಲಿನಿಂದಲೇ ಈ ಪಿಯು ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಇಬಿಎಸಿಎಸ್ (ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಗಣಿತ ವಿಜ್ಞಾನ) ಸಂಯೋಜನೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕಾಲೇಜುಗಳಿಗೆ ‘ಸಂಕೇತ ಸಂಖ್ಯೆ’ಯನ್ನೂ ನೀಡಲಾಗಿದೆ.</p>.<p>ಈ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆಗೆ ಅನುಕೂಲ ಆಗುವಂತೆ, ಜಿಲ್ಲೆಯ ಇತರ ಕಡೆಗಳಲ್ಲಿ ಕಡಿಮೆ ಕಾರ್ಯಭಾರವಿರುವ ಉಪನ್ಯಾಸಕರನ್ನು ನಿಯಮಾನುಸಾರ ಈ ಕಾಲೇಜುಗಳಿಗೆ ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದಲ್ಲೇ ಪಿಯು ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದರಿಂದಾಗಿ, ಆ ಭಾಗದ ವಿದ್ಯಾರ್ಥಿಗಳು ದೂರದ ನಗರಗಳಿಗೆ ಹೋಗುವುದು ತಪ್ಪುತ್ತದೆ. ಆಯಾ ಪ್ರೌಢಶಾಲೆಯಲ್ಲಿ ಕಲಿತವರು, ಅಲ್ಲಿಯೇ ಪಿಯು ಕಾಲೇಜು ಶಿಕ್ಷಣ ಪಡೆಯುವುದಕ್ಕೂ ಅವಕಾಶವಿದೆ. ಆದರೆ, ಇಲ್ಲಿ ಸದ್ಯಕ್ಕೆ ಕಲಾ ಹಾಗೂ ವಿಜ್ಞಾನ ವಿಭಾಗದ ಅವಕಾಶ ಇಲ್ಲ. ಜೊತೆಗೆ ಈ ಪ್ರೌಢಶಾಲೆಗಳಲ್ಲಿ, ಪಿಯು ಶಿಕ್ಷಣಕ್ಕೆ ತಕ್ಕಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.</p>.<p>ಉನ್ನತೀಕರಣಕ್ಕೆ ಆಯ್ಕೆ ಮಾಡುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಕಲಿಯುತ್ತಿರಬೇಕು ಹಾಗೂ 15 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-1382745227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ರಾಜ್ಯ ಸರ್ಕಾರವು ಜಿಲ್ಲೆಯ ಎರಡು ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ (ಪಿಯು) ಕಾಲೇಜುಗಳಾಗಿ ಉನ್ನತೀಕರಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಹೆಚ್ಚುವರಿಯಾಗಿ ಎರಡು ಪಿಯು ಕಾಲೇಜುಗಳು ಸೇರ್ಪಡೆಯಾದಂತಾಗಿದೆ.</p>.<p>ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಸಾಲುಂಡಿ ಹಾಗೂ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಗಳಿಗೆ ಈ ‘ಮೇಲ್ದರ್ಜೆಯ ಗ್ಯಾರಂಟಿ’ ದೊರೆತಿದೆ. ಇಲ್ಲಿಗೆ ಪ್ರಥಮ ಪಿಯುಗೆ ದಾಖಲಾತಿ ಮಾಡಿಕೊಳ್ಳಲಾಗುವುದು. ಇದರೊಂದಿಗೆ, ಗ್ರಾಮೀಣ ಶಿಕ್ಷಣ ವ್ಯವಸ್ಥೆ ಬಲಪಡಿಸುವ ಕೆಲಸವನ್ನು ಶಾಲಾ ಶಿಕ್ಷಣ ಇಲಾಖೆಯ(ಪಿಯು) ಮೂಲಕ ಮಾಡಲಾಗುತ್ತಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಗಳ, ಎಸ್ಎಸ್ಎಲ್ಸಿ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ಇದನ್ನು ಈಗ ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಒಟ್ಟು 23 ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿದ್ದು, ಅವುಗಳಲ್ಲಿ ಮೈಸೂರು ಜಿಲ್ಲೆಯ ಎರಡು ಪ್ರೌಢಶಾಲೆಗಳು ಸೇರಿವೆ.</p>.<p>ಜಿಲ್ಲೆಯಲ್ಲಿ ಈವರೆಗೆ 272 ಪಿಯು ಕಾಲೇಜುಗಳಿದ್ದವು. ಹೊಸ ಕಾಲೇಜುಗಳೊಂದಿಗೆ ಈ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.</p>.<p>ಕಾಮರ್ಸ್ ಸಂಯೋಜನೆ: ಪ್ರಸಕ್ತ 2026–27ನೇ ಸಾಲಿನಿಂದಲೇ ಈ ಪಿಯು ಕಾಲೇಜುಗಳಲ್ಲಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಇಬಿಎಸಿಎಸ್ (ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಗಣಿತ ವಿಜ್ಞಾನ) ಸಂಯೋಜನೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಈ ಕಾಲೇಜುಗಳಿಗೆ ‘ಸಂಕೇತ ಸಂಖ್ಯೆ’ಯನ್ನೂ ನೀಡಲಾಗಿದೆ.</p>.<p>ಈ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆಗೆ ಅನುಕೂಲ ಆಗುವಂತೆ, ಜಿಲ್ಲೆಯ ಇತರ ಕಡೆಗಳಲ್ಲಿ ಕಡಿಮೆ ಕಾರ್ಯಭಾರವಿರುವ ಉಪನ್ಯಾಸಕರನ್ನು ನಿಯಮಾನುಸಾರ ಈ ಕಾಲೇಜುಗಳಿಗೆ ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದಲ್ಲೇ ಪಿಯು ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದರಿಂದಾಗಿ, ಆ ಭಾಗದ ವಿದ್ಯಾರ್ಥಿಗಳು ದೂರದ ನಗರಗಳಿಗೆ ಹೋಗುವುದು ತಪ್ಪುತ್ತದೆ. ಆಯಾ ಪ್ರೌಢಶಾಲೆಯಲ್ಲಿ ಕಲಿತವರು, ಅಲ್ಲಿಯೇ ಪಿಯು ಕಾಲೇಜು ಶಿಕ್ಷಣ ಪಡೆಯುವುದಕ್ಕೂ ಅವಕಾಶವಿದೆ. ಆದರೆ, ಇಲ್ಲಿ ಸದ್ಯಕ್ಕೆ ಕಲಾ ಹಾಗೂ ವಿಜ್ಞಾನ ವಿಭಾಗದ ಅವಕಾಶ ಇಲ್ಲ. ಜೊತೆಗೆ ಈ ಪ್ರೌಢಶಾಲೆಗಳಲ್ಲಿ, ಪಿಯು ಶಿಕ್ಷಣಕ್ಕೆ ತಕ್ಕಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.</p>.<p>ಉನ್ನತೀಕರಣಕ್ಕೆ ಆಯ್ಕೆ ಮಾಡುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಕಲಿಯುತ್ತಿರಬೇಕು ಹಾಗೂ 15 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-1382745227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>