<p>ಶಿಡ್ಲಘಟ್ಟ: ಶಿಡ್ಲಘಟ್ಟ–ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ಸ್ವಸ್ತಿ–2026 ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.</p>.<p>ಬಿಜಿಎಸ್ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ‘ಹದಿಹರೆಯದ ಮಕ್ಕಳ ಮನಸ್ಸು ಎಲ್ಲವನ್ನೂ ಬಯಸುತ್ತದೆ. ಎಲ್ಲವನ್ನೂ ಅನುಭವಿಸುವ ಹಾಗೂ ಪಡೆದುಕೊಳ್ಳುವ ತವಕವಿರುತ್ತದೆ. ಆದರೆ, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಪೋಷಕರು ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>13 ರಿಂದ 14ರ ವಯಸ್ಸಿನವರೆಗೆ ಮಕ್ಕಳನ್ನು ಹತೋಟಿಯಲ್ಲಿಡುವ ಕೆಲಸ ಪೋಷಕರಿಂದಾಗಬೇಕು. ಮನುಷ್ಯನ ದೊಡ್ಡ ಶತ್ರು ಅವನ ಸೋಮಾರಿತನ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಕೆ. ಮಹದೇವ್, ಹಿರಿಯ ವಿದ್ಯಾರ್ಥಿಗಳಾದ ಡಾ.ಅರುಣ್.ಟಿ.ವಿ, ಆರ್.ಅನುಷಾ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-16-402129602</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಡ್ಲಘಟ್ಟ: ಶಿಡ್ಲಘಟ್ಟ–ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಪಿಯು ಕಾಲೇಜಿನಲ್ಲಿ ಸ್ವಸ್ತಿ–2026 ಕಾರ್ಯಕ್ರಮವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.</p>.<p>ಬಿಜಿಎಸ್ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್. ಶಿವರಾಮರೆಡ್ಡಿ ಮಾತನಾಡಿ, ‘ಹದಿಹರೆಯದ ಮಕ್ಕಳ ಮನಸ್ಸು ಎಲ್ಲವನ್ನೂ ಬಯಸುತ್ತದೆ. ಎಲ್ಲವನ್ನೂ ಅನುಭವಿಸುವ ಹಾಗೂ ಪಡೆದುಕೊಳ್ಳುವ ತವಕವಿರುತ್ತದೆ. ಆದರೆ, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಪೋಷಕರು ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಹೇಳಿದರು.</p>.<p>13 ರಿಂದ 14ರ ವಯಸ್ಸಿನವರೆಗೆ ಮಕ್ಕಳನ್ನು ಹತೋಟಿಯಲ್ಲಿಡುವ ಕೆಲಸ ಪೋಷಕರಿಂದಾಗಬೇಕು. ಮನುಷ್ಯನ ದೊಡ್ಡ ಶತ್ರು ಅವನ ಸೋಮಾರಿತನ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಕೆ. ಮಹದೇವ್, ಹಿರಿಯ ವಿದ್ಯಾರ್ಥಿಗಳಾದ ಡಾ.ಅರುಣ್.ಟಿ.ವಿ, ಆರ್.ಅನುಷಾ ಸೇರಿದಂತೆ ಕಾಲೇಜು ಸಿಬ್ಬಂದಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-16-402129602</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>