<p>ಶಿಗ್ಗಾವಿ: ‘ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಮುಖ್ಯ. ಬಡಕೂಲಿಕಾರರ ಮಕ್ಕಳು ಪರಿಶ್ರಮ ವಹಿಸಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಅದಕ್ಕೆ ಬೆಂಬಲವಾಗಿ ನಮ್ಮ ಸಂಸ್ಥೆ ನಿಂತಿದೆ’ ಎಂದು ಬಂಕಾಪುರ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮಹಮ್ಮದ ಹುಸೇನ್ ಖತೀಬ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಣಣದ ಎಸ್.ಎ.ಕ್ಯೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ದ್ವಿತೀಯ ವರ್ಷದ ಪಿಯು ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಾಲೇಜಿನ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಅದರಿಂದ ಇನ್ನಷ್ಟು ಸೌಲಭ್ಯ ನೀಡಲು ಸಾಧ್ಯವಿದೆ. ಈಗಾಗಲೆ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದೆ. ಅದರಿಂದ ಮಕ್ಕಳ ಶೈಕ್ಷಣಿಕ ಸುಧಾರಣೆ ಸಾಧ್ಯವಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ಮಹಮ್ಮದತಮೀದ್ ಖಾಜಿ ಮಾತನಾಡಿ, ‘ಬಡಕೂಲಿಕಾರರ ಮಕ್ಕಳಲ್ಲಿ ಉತ್ತಮ ಪ್ರತಿಭೆ ಇದೆ. ಅದಕ್ಕೆ ಸೂಕ್ತ ಪ್ರೋತ್ಸಾಹ ನೀಡುವ ಕೆಲಸ ನಮ್ಮದಾಗಿದೆ. ಪರಿಶ್ರಮ ಇದ್ದಲ್ಲಿ ಯಶಸ್ಸು ಇದೆ ಎಂಬುವುದನ್ನು ಸಾಧಿಸಿ ತೋರಿದ್ದಾರೆ. ಅದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ’ ಎಂದರು.</p>.<p>ಮುಖಂಡ ಅಬ್ದುಲ್ ರಹೆಮಾನ್ ಪಟೇಲ್ ಮಾತನಾಡಿದರು. ಸಂಸ್ಥೆ ಸದಸ್ಯರಾದ ಅಯೂಭಖಾನ್ ಪಠಾಣ, ಕಲಂದರ ಜಂಗಳಿ, ಇಖಾಕಅಹ್ಮದ ಪಟೇಲ್, ಅಬ್ದಲ್ ಅಜೀಜ ಖತೀಬ, ಅಬ್ದುಲಮುನಾಫ್ ಡಾಣೆಬಾಗ, ಇಮ್ತಿಯಾಜ್ ಅಹಮ್ಮದ ಭಟ್ಟಿಪುರಿ, ಕಾಲೇಜಿನ ಪ್ರಾಚಾರ್ಯ ತೈಕೇರ್ಖಾನ್ ಪಠಾಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-22-1759777275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ‘ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಮುಖ್ಯ. ಬಡಕೂಲಿಕಾರರ ಮಕ್ಕಳು ಪರಿಶ್ರಮ ವಹಿಸಿ ಉತ್ತಮ ಫಲಿತಾಂಶ ಪಡೆದಿದ್ದಾರೆ. ಅದಕ್ಕೆ ಬೆಂಬಲವಾಗಿ ನಮ್ಮ ಸಂಸ್ಥೆ ನಿಂತಿದೆ’ ಎಂದು ಬಂಕಾಪುರ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಮಹಮ್ಮದ ಹುಸೇನ್ ಖತೀಬ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಣಣದ ಎಸ್.ಎ.ಕ್ಯೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ದ್ವಿತೀಯ ವರ್ಷದ ಪಿಯು ಪರೀಕ್ಷೆಯಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕಾಲೇಜಿನ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಅದರಿಂದ ಇನ್ನಷ್ಟು ಸೌಲಭ್ಯ ನೀಡಲು ಸಾಧ್ಯವಿದೆ. ಈಗಾಗಲೆ ಹೆಚ್ಚುವರಿ ಕೊಠಡಿಗಳನ್ನು ನೀಡಲಾಗಿದೆ. ಅದರಿಂದ ಮಕ್ಕಳ ಶೈಕ್ಷಣಿಕ ಸುಧಾರಣೆ ಸಾಧ್ಯವಿದೆ’ ಎಂದರು.</p>.<p>ಸಂಸ್ಥೆಯ ಕಾರ್ಯದರ್ಶಿ ಮಹಮ್ಮದತಮೀದ್ ಖಾಜಿ ಮಾತನಾಡಿ, ‘ಬಡಕೂಲಿಕಾರರ ಮಕ್ಕಳಲ್ಲಿ ಉತ್ತಮ ಪ್ರತಿಭೆ ಇದೆ. ಅದಕ್ಕೆ ಸೂಕ್ತ ಪ್ರೋತ್ಸಾಹ ನೀಡುವ ಕೆಲಸ ನಮ್ಮದಾಗಿದೆ. ಪರಿಶ್ರಮ ಇದ್ದಲ್ಲಿ ಯಶಸ್ಸು ಇದೆ ಎಂಬುವುದನ್ನು ಸಾಧಿಸಿ ತೋರಿದ್ದಾರೆ. ಅದು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ’ ಎಂದರು.</p>.<p>ಮುಖಂಡ ಅಬ್ದುಲ್ ರಹೆಮಾನ್ ಪಟೇಲ್ ಮಾತನಾಡಿದರು. ಸಂಸ್ಥೆ ಸದಸ್ಯರಾದ ಅಯೂಭಖಾನ್ ಪಠಾಣ, ಕಲಂದರ ಜಂಗಳಿ, ಇಖಾಕಅಹ್ಮದ ಪಟೇಲ್, ಅಬ್ದಲ್ ಅಜೀಜ ಖತೀಬ, ಅಬ್ದುಲಮುನಾಫ್ ಡಾಣೆಬಾಗ, ಇಮ್ತಿಯಾಜ್ ಅಹಮ್ಮದ ಭಟ್ಟಿಪುರಿ, ಕಾಲೇಜಿನ ಪ್ರಾಚಾರ್ಯ ತೈಕೇರ್ಖಾನ್ ಪಠಾಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-22-1759777275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>