<p>ಸಿರಿಗೆರೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ಪಿಯುಸಿ ಶಿಕ್ಷಣ ನೀಡಲು ತರಳಬಾಳು ಮಠವು ತರಳಬಾಳು ಪ್ರತಿಭಾ ಪುರಸ್ಕಾರ ಯೋಜನೆಯನ್ನು ರೂಪಿಸಿದೆ. ಅದಕ್ಕಾಗಿ ಹಲವು ದಾನಿಗಳು ಮಠದಲ್ಲಿ ಸ್ಥಾಪಿಸಿರುವ ದತ್ತಿ ನಿಧಿಯಲ್ಲಿ ಬರುವ ಆದಾಯವನ್ನು ಬಳಸಿಕೊಳ್ಳಲಾಗುವುದು.</p>.<p>ಉಚಿತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್ 27ರಂದು ಬೆಳಿಗ್ಗೆ 11ಕ್ಕೆ ಸಿರಿಗೆರೆಯ ಎಂ.ಬಿ.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಲಿಖಿತ ಪರೀಕ್ಷೆ ಬರೆಯಬೇಕು. ಲಿಖಿತ ಪರೀಕ್ಷೆ ತೆಗೆದುಕೊಳ್ಳಲು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ತೆಗೆದುಕೊಂಡಿರಬೇಕು.</p>.<p>ವಿದ್ಯಾರ್ಥಿಗಳು ಯಾವುದೇ ಜಿಲ್ಲೆಯವರಾಗಿರಬಹುದು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳೂ ಪರೀಕ್ಷೆ ತೆಗೆದುಕೊಳ್ಳಲು ಅರ್ಹರು. ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಮಠದಿಂದ ಭರಿಸಲಾಗುವುದಲ್ಲದೇ, ಉಚಿತ ಹಾಸ್ಟೆಲ್ ಸೌಲಭ್ಯ ಸಹ ನೀಡಲಾಗುವುದು.</p>.<p>ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನ.</p>.<p>ಹೆಚ್ಚಿನ ವಿವರಗಳಿಗೆ: ಎ.ಬಿ. ಮಂಜುನಾಥ್, ಪ್ರಾಚಾರ್ಯರು, ಎಂ.ಬಿ.ಆರ್. ಪದವಿಪೂರ್ವ ಕಾಲೇಜು, ಸಿರಿಗೆರೆ, ಚಿತ್ರದುರ್ಗ ಮೊ: 99869 85206, 96639 56275, 97387 08051 ಇವರನ್ನು ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-44-153251345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರಿಗೆರೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಕಾಲ ಉಚಿತವಾಗಿ ಪಿಯುಸಿ ಶಿಕ್ಷಣ ನೀಡಲು ತರಳಬಾಳು ಮಠವು ತರಳಬಾಳು ಪ್ರತಿಭಾ ಪುರಸ್ಕಾರ ಯೋಜನೆಯನ್ನು ರೂಪಿಸಿದೆ. ಅದಕ್ಕಾಗಿ ಹಲವು ದಾನಿಗಳು ಮಠದಲ್ಲಿ ಸ್ಥಾಪಿಸಿರುವ ದತ್ತಿ ನಿಧಿಯಲ್ಲಿ ಬರುವ ಆದಾಯವನ್ನು ಬಳಸಿಕೊಳ್ಳಲಾಗುವುದು.</p>.<p>ಉಚಿತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್ 27ರಂದು ಬೆಳಿಗ್ಗೆ 11ಕ್ಕೆ ಸಿರಿಗೆರೆಯ ಎಂ.ಬಿ.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ಲಿಖಿತ ಪರೀಕ್ಷೆ ಬರೆಯಬೇಕು. ಲಿಖಿತ ಪರೀಕ್ಷೆ ತೆಗೆದುಕೊಳ್ಳಲು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕಗಳನ್ನು ತೆಗೆದುಕೊಂಡಿರಬೇಕು.</p>.<p>ವಿದ್ಯಾರ್ಥಿಗಳು ಯಾವುದೇ ಜಿಲ್ಲೆಯವರಾಗಿರಬಹುದು. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳೂ ಪರೀಕ್ಷೆ ತೆಗೆದುಕೊಳ್ಳಲು ಅರ್ಹರು. ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕವನ್ನು ಮಠದಿಂದ ಭರಿಸಲಾಗುವುದಲ್ಲದೇ, ಉಚಿತ ಹಾಸ್ಟೆಲ್ ಸೌಲಭ್ಯ ಸಹ ನೀಡಲಾಗುವುದು.</p>.<p>ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನ.</p>.<p>ಹೆಚ್ಚಿನ ವಿವರಗಳಿಗೆ: ಎ.ಬಿ. ಮಂಜುನಾಥ್, ಪ್ರಾಚಾರ್ಯರು, ಎಂ.ಬಿ.ಆರ್. ಪದವಿಪೂರ್ವ ಕಾಲೇಜು, ಸಿರಿಗೆರೆ, ಚಿತ್ರದುರ್ಗ ಮೊ: 99869 85206, 96639 56275, 97387 08051 ಇವರನ್ನು ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-44-153251345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>