<p>ಸೊರಬ: ‘ವಿದ್ಯಾರ್ಥಿಗಳು ಸತತ ಪರಿಶ್ರಮ, ಆತ್ಮವಿಶ್ವಾಸ, ಶ್ರದ್ಧೆಯೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ’ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಶಂಕರ ಶೇಟ್ ಹೇಳಿದರು.</p>.<p>ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಮಾತನಾಡಿದರು.</p>.<p>‘ರಾಜ್ಯದಲ್ಲಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯೆ ಯಾರೂ ಕದಿಯಲಾಗದ್ದು. ಸಾಧನೆಗೆ ಶಿಕ್ಷಣವೇ ಮೂಲ ಮಂತ್ರವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಕಲಿಕೆಯಲ್ಲಿ ಆಸಕ್ತಿ ತೋರಿ ಮುಂದೆ ಬರುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ತಾಲ್ಲೂಕಿನ ಭಾಗ್ಯಶ್ರೀ ಆನವಟ್ಟಿ (577 ಅಂಕ–ವಿಜ್ಞಾನ ) ಸಂಗೀತ ಆನವಟ್ಟಿ (574–ವಾಣಿಜ್ಯ) ಹಾಗೂ ಕಲಾ ವಿಭಾಗದ ಪ್ರಿಯಾಂಕಾ ಎಸ್. ಆನವಟ್ಟಿ (573), ಜ್ಯೋತಿ ಎಸ್. ನಿಸರಾಣಿ (573) ಅವರನ್ನು ಗೌರವಿಸಲಾಯಿತು.</p>.<p>ಸಮಾಜ ಸೇವಕ ರಾಜು ಹಿರಿಯಾವಲಿ, ಪಾಣಿ ರಾಜಪ್ಪ, ವಿಜೇಂದ್ರಗೌಡ, ಉಮೇಶ್ ಭದ್ರಾಪುರ, ಮಹೇಶ್ ಖಾರ್ವಿ, ಭಾರತಿ ಭಂಡಾರಿ, ಅರ್ಚನಾ, ರಾಘವೇಂದ್ರ, ಸರಸ್ವತಿ ನಾವಡ, ಪುಷ್ಪಾ, ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-42-256058387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ‘ವಿದ್ಯಾರ್ಥಿಗಳು ಸತತ ಪರಿಶ್ರಮ, ಆತ್ಮವಿಶ್ವಾಸ, ಶ್ರದ್ಧೆಯೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಿದೆ’ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ. ಶಂಕರ ಶೇಟ್ ಹೇಳಿದರು.</p>.<p>ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಮಾತನಾಡಿದರು.</p>.<p>‘ರಾಜ್ಯದಲ್ಲಿ ಉತ್ತಮ ಫಲಿತಾಂಶ ಬಂದಿದೆ. ವಿದ್ಯೆ ಯಾರೂ ಕದಿಯಲಾಗದ್ದು. ಸಾಧನೆಗೆ ಶಿಕ್ಷಣವೇ ಮೂಲ ಮಂತ್ರವಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಕಲಿಕೆಯಲ್ಲಿ ಆಸಕ್ತಿ ತೋರಿ ಮುಂದೆ ಬರುತ್ತಿರುವುದು ಸಂತಸದ ಸಂಗತಿ’ ಎಂದರು.</p>.<p>ಸಾಮಾಜಿಕ ಚಿಂತಕ ರಾಜಪ್ಪ ಮಾಸ್ತರ್ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ತಾಲ್ಲೂಕಿನ ಭಾಗ್ಯಶ್ರೀ ಆನವಟ್ಟಿ (577 ಅಂಕ–ವಿಜ್ಞಾನ ) ಸಂಗೀತ ಆನವಟ್ಟಿ (574–ವಾಣಿಜ್ಯ) ಹಾಗೂ ಕಲಾ ವಿಭಾಗದ ಪ್ರಿಯಾಂಕಾ ಎಸ್. ಆನವಟ್ಟಿ (573), ಜ್ಯೋತಿ ಎಸ್. ನಿಸರಾಣಿ (573) ಅವರನ್ನು ಗೌರವಿಸಲಾಯಿತು.</p>.<p>ಸಮಾಜ ಸೇವಕ ರಾಜು ಹಿರಿಯಾವಲಿ, ಪಾಣಿ ರಾಜಪ್ಪ, ವಿಜೇಂದ್ರಗೌಡ, ಉಮೇಶ್ ಭದ್ರಾಪುರ, ಮಹೇಶ್ ಖಾರ್ವಿ, ಭಾರತಿ ಭಂಡಾರಿ, ಅರ್ಚನಾ, ರಾಘವೇಂದ್ರ, ಸರಸ್ವತಿ ನಾವಡ, ಪುಷ್ಪಾ, ನಾಗರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-42-256058387</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>