<p>ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಫಲಿತಾಂಶದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಶುಕ್ರವಾರ ಸನ್ಮಾನ ಕಾರ್ಯಕ್ರಮ ನಡೆಯಿತು.</p>.<p>ಪ್ರಾಂಶುಪಾಲ ಎಂ.ಡಿ.ಶಿವಕುಮಾರ್ ಮಾತನಾಡಿ, ಉಪನ್ಯಾಸಕರ, ಪೋಷಕರ, ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ 92 ಫಲಿತಾಂಶ ಬಂದಿದೆ. 114 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದರು.</p>.<p>ನಗದು ವಿತರಿಸಿ ಮಾತನಾಡಿದ ಮಂಜುನಾಥ್, ‘ಕಾಲೇಜಿಗೆ, ಪೋಷಕರಿಗೆ ಕೀರ್ತಿ ತಂದಿದ್ದೀರಿ. ಮುಂದೆ ಕೇಂದ್ರ, ರಾಜ್ಯ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆ ಎದುರಿಸಿ ನಾಗರಿಕ ಸೇವೆಗಳಿಗೆ ಆಯ್ಕೆಯಾಗಿ ಸಾಮಾಜಿಕ ಋಣ ತೀರಿಸಿ’ ಎಂದರು.</p>.<p>ಕನ್ನಡದಲ್ಲಿ ಪೂರ್ಣಾಂಕ ಪಡೆದ ಹದಿನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಮಾತನಾಡಿದ ಎಸ್ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ, ಕನ್ನಡದಲ್ಲಿ ಪೂರ್ಣಾಂಕ ಪಡೆಯುವುದು ಸುಲಭವಲ್ಲ. ಕನ್ನಡವನ್ನು ಶುದ್ಧವಾಗಿ ಓದುವ, ಬರೆಯುವ, ಮಾತನಾಡುವ ಸಾಮರ್ಥ್ಯ ಗಳಿಸಿಕೊಂಡಲ್ಲಿ ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗುತ್ತಾರೆ ಎಂದರು.</p>.<p>ಉದ್ಯಮಿ ಸಂತೋಷ್ ಓಸ್ವಾಲ್, ಸಮಾಜ ಸೇವಕಿ ಸ್ವರ್ಣಗೌರಮ್ಮ ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಚ್.ಎಸ್.ಮಂಜಪ್ಪ, ಲೋಕೇಶ್, ಉಪನ್ಯಾಸಕಿ ವಸಂತಲಕ್ಷ್ಮಿ, ಷಡಕ್ಷರಿ, ಸಿಬ್ಬಂದಿ, ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-17-1172031515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪಿಯು ಫಲಿತಾಂಶದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಶುಕ್ರವಾರ ಸನ್ಮಾನ ಕಾರ್ಯಕ್ರಮ ನಡೆಯಿತು.</p>.<p>ಪ್ರಾಂಶುಪಾಲ ಎಂ.ಡಿ.ಶಿವಕುಮಾರ್ ಮಾತನಾಡಿ, ಉಪನ್ಯಾಸಕರ, ಪೋಷಕರ, ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ 92 ಫಲಿತಾಂಶ ಬಂದಿದೆ. 114 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದರು.</p>.<p>ನಗದು ವಿತರಿಸಿ ಮಾತನಾಡಿದ ಮಂಜುನಾಥ್, ‘ಕಾಲೇಜಿಗೆ, ಪೋಷಕರಿಗೆ ಕೀರ್ತಿ ತಂದಿದ್ದೀರಿ. ಮುಂದೆ ಕೇಂದ್ರ, ರಾಜ್ಯ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆ ಎದುರಿಸಿ ನಾಗರಿಕ ಸೇವೆಗಳಿಗೆ ಆಯ್ಕೆಯಾಗಿ ಸಾಮಾಜಿಕ ಋಣ ತೀರಿಸಿ’ ಎಂದರು.</p>.<p>ಕನ್ನಡದಲ್ಲಿ ಪೂರ್ಣಾಂಕ ಪಡೆದ ಹದಿನಾಲ್ಕು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಿ ಮಾತನಾಡಿದ ಎಸ್ವಿಪಿ ಕಾಲೇಜು ಪ್ರಾಂಶುಪಾಲ ರೇಣುಕಯ್ಯ, ಕನ್ನಡದಲ್ಲಿ ಪೂರ್ಣಾಂಕ ಪಡೆಯುವುದು ಸುಲಭವಲ್ಲ. ಕನ್ನಡವನ್ನು ಶುದ್ಧವಾಗಿ ಓದುವ, ಬರೆಯುವ, ಮಾತನಾಡುವ ಸಾಮರ್ಥ್ಯ ಗಳಿಸಿಕೊಂಡಲ್ಲಿ ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗುತ್ತಾರೆ ಎಂದರು.</p>.<p>ಉದ್ಯಮಿ ಸಂತೋಷ್ ಓಸ್ವಾಲ್, ಸಮಾಜ ಸೇವಕಿ ಸ್ವರ್ಣಗೌರಮ್ಮ ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಎಚ್.ಎಸ್.ಮಂಜಪ್ಪ, ಲೋಕೇಶ್, ಉಪನ್ಯಾಸಕಿ ವಸಂತಲಕ್ಷ್ಮಿ, ಷಡಕ್ಷರಿ, ಸಿಬ್ಬಂದಿ, ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-17-1172031515</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>