<p>ಗುರುಮಠಕಲ್: ‘ನಮ್ಮೂರಾದ ಕಂದಕೂರು ಗ್ರಾಮದಲ್ಲೇ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸಿದರೆ ಮಕ್ಕಳ ಅಭ್ಯಾಸಕ್ಕೆ ಅನುಕೂಲವಾಗುತ್ತದೆ ಎನ್ನುವುದು ನಮ್ಮ ತಂದೆ ದಿ.ನಾಗನಗೌಡ ಕಂದಕೂರ ಅವರ ಕನಸಾಗಿತ್ತು’ ಎಂದು ಶಾಸಕ ಶರಣಗೌಡ ಕಂದಕೂರ ಅವರು ಸ್ಮರಿಸಿಕೊಂಡರು.</p>.<p>ತಾಲ್ಲೂಕಿನ ಕಂದಕೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ನೂತನ ಪದವಿ ಪೂರ್ವ ಕಾಲೇಜಿನ ಸೌಲಭ್ಯಗಳ ಪರಿಶೀಲನೆ ಮತ್ತು ಅಧಿಕಾರಿಗಳೊಡನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ತಂದೆಯವರ ಅವಧಿಯಲ್ಲೇ ಕಾಲೇಜು ಸ್ಥಾಪನೆಗೆ ಸಾಕಷ್ಟು ಪ್ರಯತ್ನಿಸಿದ್ದರು. ನಾನೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸತತ ಮನವಿ ಮಾಡಿ, ಕಾಲೇಜು ಸ್ಥಾಪನೆಯ ಅಗತ್ಯತೆಯನ್ನು ಮನವರಿಕೆ ಮಾಡಿದ್ದೆ. ಈಗ ಬಹುದಿನಗಳ ಕನಸು ನನಸಾಗಿದೆ’ ಎಂದು ಹೇಳಿದರು.</p>.<p>‘ಕಂದಕೂರ ಗ್ರಾಮಕ್ಕೆ ಸರ್ಕಾರ ನೂತನ ಕಾಲೇಜು ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ದಾಖಲಾತಿಗೆ ಸತತ ಪ್ರಯತ್ನ ಮಾಡಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕಲಾ ವಿಭಾಗಕ್ಕಿಂತ ವಾಣಿಜ್ಯ ವಿಭಾಗದ ಕೋರ್ಸ್ಗಳಿಗೆ ಹೆಚ್ಚಿನ ಅವಕಾಶಗಳಿವೆ. ಬಿ.ಕಾಂ, ಎಂಬಿಎ ಪದವಿ ಪಡೆದರೆ ಕಾರ್ಖಾನೆ, ಖಾಸಗಿ ಬೃಹತ್ ಉದ್ಯಮಗಳಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ. ಹೀಗಾಗಿ ಕಾಮರ್ಸ್ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>‘ನಮ್ಮೂರಿನ ಮಕ್ಕಳು ಕಾಲೇಜಿಗೆ ದೂರದ ಪಟ್ಟಣಗಳಿಗೆ ಅಲೆದಾಟವನ್ನು ತಪ್ಪಿಸಲು ಗ್ರಾಮದಲ್ಲೇ ಕಾಲೇಜು ಮಂಜೂರು ಮಾಡಿಸಲಾಗಿದೆ. ಗ್ರಾಮಸ್ಥರು ತಮ್ಮ ಮಕ್ಕಳಿಗೆ ಹೊಸ ಕಾಲೇಜಿಗೆ ದಾಖಲಾತಿ ಮಾಡಿಸಿ’ ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.</p>.<p>ಕಲಾ ವಿಭಾಗಕ್ಕೆ ಬೇಡಿಕೆ: ‘ಪ್ರಸ್ತುತ ಉನ್ನತೀಕರಿಸಿದ ಈ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರ ಆರಂಭಿಸಲು ಸರ್ಕಾರ ಅನುಮತಿಸಿದೆ. ಆದರೆ, ನಮ್ಮ ಭಾಗದಲ್ಲಿ ಕಲಾ ವಿಭಾಗಕ್ಕೆ ಹೆಚ್ಚಿನ ಬೇಡಿಕೆಯಿದೆ’ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.</p>.<p>ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಕಂದಕೂರ ಕರೆ ಮಾಡಿ, ನೂತನ ಕಾಲೇಜಿನಲ್ಲಿ ಕಲಾ ವಿಭಾಗದ ಸ್ಥಾಪನೆ ಕುರಿತು ಮನವಿ ಮಾಡಿದರು. ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕ ಸ್ಪಂದಿಸಿದ್ದು, ಪರಿಶೀಲಿಸಿ ಕ್ರಮವಹಿಸುವ ಭರವಸೆ ನೀಡಿದ್ದಾರೆ.</p>.<p>ನಂತರ ಇಲಾಖೆಯ ಕಾರ್ಯದರ್ಶಿ ರಶ್ಮಿ ಅವರಿಗೆ ಕರೆ ಮಾಡಿದ ಶಾಸಕರು, ಕಾಲೇಜಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು. ಡಿಡಿಪಿಯು ಪಂಡಿತರಾವ ಪವಾರ, ಬಿಇಒ ವೀರಣ್ಣ ಕನ್ನಳ್ಳಿ, ಶರಣಗೌಡ ಆಶನಾಳ, ಎಸ್ಡಿಎಂಸಿ ಅಧ್ಯಕ್ಷ ವೆಂಕಟರಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-30-1119310391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುರುಮಠಕಲ್: ‘ನಮ್ಮೂರಾದ ಕಂದಕೂರು ಗ್ರಾಮದಲ್ಲೇ ಸರ್ಕಾರಿ ಪಿಯು ಕಾಲೇಜು ಸ್ಥಾಪಿಸಿದರೆ ಮಕ್ಕಳ ಅಭ್ಯಾಸಕ್ಕೆ ಅನುಕೂಲವಾಗುತ್ತದೆ ಎನ್ನುವುದು ನಮ್ಮ ತಂದೆ ದಿ.ನಾಗನಗೌಡ ಕಂದಕೂರ ಅವರ ಕನಸಾಗಿತ್ತು’ ಎಂದು ಶಾಸಕ ಶರಣಗೌಡ ಕಂದಕೂರ ಅವರು ಸ್ಮರಿಸಿಕೊಂಡರು.</p>.<p>ತಾಲ್ಲೂಕಿನ ಕಂದಕೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ನೂತನ ಪದವಿ ಪೂರ್ವ ಕಾಲೇಜಿನ ಸೌಲಭ್ಯಗಳ ಪರಿಶೀಲನೆ ಮತ್ತು ಅಧಿಕಾರಿಗಳೊಡನೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ತಂದೆಯವರ ಅವಧಿಯಲ್ಲೇ ಕಾಲೇಜು ಸ್ಥಾಪನೆಗೆ ಸಾಕಷ್ಟು ಪ್ರಯತ್ನಿಸಿದ್ದರು. ನಾನೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸತತ ಮನವಿ ಮಾಡಿ, ಕಾಲೇಜು ಸ್ಥಾಪನೆಯ ಅಗತ್ಯತೆಯನ್ನು ಮನವರಿಕೆ ಮಾಡಿದ್ದೆ. ಈಗ ಬಹುದಿನಗಳ ಕನಸು ನನಸಾಗಿದೆ’ ಎಂದು ಹೇಳಿದರು.</p>.<p>‘ಕಂದಕೂರ ಗ್ರಾಮಕ್ಕೆ ಸರ್ಕಾರ ನೂತನ ಕಾಲೇಜು ಮಂಜೂರು ಮಾಡಿದ್ದು, ಪ್ರಸಕ್ತ ಸಾಲಿನಿಂದಲೇ ವಿದ್ಯಾರ್ಥಿಗಳ ದಾಖಲಾತಿಗೆ ಸತತ ಪ್ರಯತ್ನ ಮಾಡಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಕಲಾ ವಿಭಾಗಕ್ಕಿಂತ ವಾಣಿಜ್ಯ ವಿಭಾಗದ ಕೋರ್ಸ್ಗಳಿಗೆ ಹೆಚ್ಚಿನ ಅವಕಾಶಗಳಿವೆ. ಬಿ.ಕಾಂ, ಎಂಬಿಎ ಪದವಿ ಪಡೆದರೆ ಕಾರ್ಖಾನೆ, ಖಾಸಗಿ ಬೃಹತ್ ಉದ್ಯಮಗಳಲ್ಲಿ ಸಾವಿರಾರು ಉದ್ಯೋಗ ಅವಕಾಶಗಳಿವೆ. ಹೀಗಾಗಿ ಕಾಮರ್ಸ್ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.</p>.<p>‘ನಮ್ಮೂರಿನ ಮಕ್ಕಳು ಕಾಲೇಜಿಗೆ ದೂರದ ಪಟ್ಟಣಗಳಿಗೆ ಅಲೆದಾಟವನ್ನು ತಪ್ಪಿಸಲು ಗ್ರಾಮದಲ್ಲೇ ಕಾಲೇಜು ಮಂಜೂರು ಮಾಡಿಸಲಾಗಿದೆ. ಗ್ರಾಮಸ್ಥರು ತಮ್ಮ ಮಕ್ಕಳಿಗೆ ಹೊಸ ಕಾಲೇಜಿಗೆ ದಾಖಲಾತಿ ಮಾಡಿಸಿ’ ಎಂದು ಗ್ರಾಮಸ್ಥರಿಗೆ ಮನವಿ ಮಾಡಿದರು.</p>.<p>ಕಲಾ ವಿಭಾಗಕ್ಕೆ ಬೇಡಿಕೆ: ‘ಪ್ರಸ್ತುತ ಉನ್ನತೀಕರಿಸಿದ ಈ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರ ಆರಂಭಿಸಲು ಸರ್ಕಾರ ಅನುಮತಿಸಿದೆ. ಆದರೆ, ನಮ್ಮ ಭಾಗದಲ್ಲಿ ಕಲಾ ವಿಭಾಗಕ್ಕೆ ಹೆಚ್ಚಿನ ಬೇಡಿಕೆಯಿದೆ’ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.</p>.<p>ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಕಂದಕೂರ ಕರೆ ಮಾಡಿ, ನೂತನ ಕಾಲೇಜಿನಲ್ಲಿ ಕಲಾ ವಿಭಾಗದ ಸ್ಥಾಪನೆ ಕುರಿತು ಮನವಿ ಮಾಡಿದರು. ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕ ಸ್ಪಂದಿಸಿದ್ದು, ಪರಿಶೀಲಿಸಿ ಕ್ರಮವಹಿಸುವ ಭರವಸೆ ನೀಡಿದ್ದಾರೆ.</p>.<p>ನಂತರ ಇಲಾಖೆಯ ಕಾರ್ಯದರ್ಶಿ ರಶ್ಮಿ ಅವರಿಗೆ ಕರೆ ಮಾಡಿದ ಶಾಸಕರು, ಕಾಲೇಜಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು. ಡಿಡಿಪಿಯು ಪಂಡಿತರಾವ ಪವಾರ, ಬಿಇಒ ವೀರಣ್ಣ ಕನ್ನಳ್ಳಿ, ಶರಣಗೌಡ ಆಶನಾಳ, ಎಸ್ಡಿಎಂಸಿ ಅಧ್ಯಕ್ಷ ವೆಂಕಟರಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-30-1119310391</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>