<p>ಸಿರವಾರ: ‘ಪದವಿ ಮುಗಿದ ಬಳಿಕ ಉನ್ನತ ವ್ಯಾಸಂಗ ಮಾಡಲು ವಿದ್ಯಾರ್ಥಿ ವೇತನ ಸೌಲಭ್ಯಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಅತ್ಯುನ್ನತ ಸ್ಥಾನ ಪಡೆಯಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ ಕೊರಪುರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಐಕ್ಯೂಎಸಿ ಮತ್ತು ವಿದ್ಯಾರ್ಥಿ ವೇತನ ಕೋಶದ ವತಿಯಿಂದ ಗುರುವಾರ ನಡೆದ ವಿದ್ಯಾರ್ಥಿ ವೇತನದ ಕುರಿತ ಮಾಹಿತಿ ಕಾರ್ಯಕ್ರಮ ಮತ್ತು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಹಣಕಾಸಿನ ಕೊರತೆ, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾ ಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಹಲವಾರು ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ವೇತನ ಕೋಶದ ಸಂಯೋಜಕ ಎಸ್.ಸುಬಾನ್ ಸಾಬ್ ಪದವಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಿದರು.</p>.<p>ಕವಿತಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೇಮಾ ಮಾತನಾಡಿ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ನಾಯಕತ್ವ, ಸವಾಲುಗಳು ಮತ್ತು ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ವಿ.ವಿನಯ ಶಂಕರ ನಿರೂಪಿಸಿದರು. ಮಹಿಳಾ ಸಬಲೀಕರಣದ ಸಂಯೋಜಕಿ ಪದ್ಮಾವತಿ, ಕನ್ನಡ ಭಾಷಾ ವಿಭಾಗದ ಉಪನ್ಯಾಸಕ ಹಂದೇರ ಮೂಗವ್ವ, ಸಹಾಯಕ ಪ್ರಾಧ್ಯಾಪಕ ಲಕ್ಷ್ಮಣ ಯಾದವ, ಮುತ್ತಪ್ಪ, ಅಶೋಕ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-32-1406980066</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರವಾರ: ‘ಪದವಿ ಮುಗಿದ ಬಳಿಕ ಉನ್ನತ ವ್ಯಾಸಂಗ ಮಾಡಲು ವಿದ್ಯಾರ್ಥಿ ವೇತನ ಸೌಲಭ್ಯಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಅತ್ಯುನ್ನತ ಸ್ಥಾನ ಪಡೆಯಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹನುಮಂತಪ್ಪ ಕೊರಪುರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಐಕ್ಯೂಎಸಿ ಮತ್ತು ವಿದ್ಯಾರ್ಥಿ ವೇತನ ಕೋಶದ ವತಿಯಿಂದ ಗುರುವಾರ ನಡೆದ ವಿದ್ಯಾರ್ಥಿ ವೇತನದ ಕುರಿತ ಮಾಹಿತಿ ಕಾರ್ಯಕ್ರಮ ಮತ್ತು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಹಣಕಾಸಿನ ಕೊರತೆ, ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾ ಗಬಾರದು ಎನ್ನುವ ಕಾರಣಕ್ಕೆ ಸರ್ಕಾರ ಹಲವಾರು ವಿದ್ಯಾರ್ಥಿ ವೇತನ ಸೌಲಭ್ಯಗಳನ್ನು ರೂಪಿಸಿದೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿ ವೇತನ ಕೋಶದ ಸಂಯೋಜಕ ಎಸ್.ಸುಬಾನ್ ಸಾಬ್ ಪದವಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಿದರು.</p>.<p>ಕವಿತಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೇಮಾ ಮಾತನಾಡಿ ರಾಜಕೀಯ ಕ್ಷೇತ್ರದಲ್ಲಿ ಮಹಿಳಾ ನಾಯಕತ್ವ, ಸವಾಲುಗಳು ಮತ್ತು ಅವಕಾಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ವಿ.ವಿನಯ ಶಂಕರ ನಿರೂಪಿಸಿದರು. ಮಹಿಳಾ ಸಬಲೀಕರಣದ ಸಂಯೋಜಕಿ ಪದ್ಮಾವತಿ, ಕನ್ನಡ ಭಾಷಾ ವಿಭಾಗದ ಉಪನ್ಯಾಸಕ ಹಂದೇರ ಮೂಗವ್ವ, ಸಹಾಯಕ ಪ್ರಾಧ್ಯಾಪಕ ಲಕ್ಷ್ಮಣ ಯಾದವ, ಮುತ್ತಪ್ಪ, ಅಶೋಕ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-32-1406980066</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>