<p>ಅಂಕೋಲಾ: ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪಟ್ಟಣದ ಪಿ.ಎಂ.ಹೈಸ್ಕೂಲಿನ ರೈತ ಭವನದಲ್ಲಿ ಕೊಂಕಣಿ ಖಾರ್ವಿ ಸಮಾಜದ ನೌಕರರ ಸಂಘವು ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನಿಸಿತು.</p>.<p>ದಿನಕರ ವೇದಿಕೆಯ ಜಿಲ್ಲಾ ಅಧ್ಯಕ್ಷ ರವೀಂದ್ರ ಕೇಣಿ ಮಾತನಾಡಿ, ಕೊಂಕಣಿ ಖಾರ್ವಿ ಸಮಾಜ ನೌಕರರ ಸಂಘದವರು ಒಂದು ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನಿಯವಾಗಿದೆ. ಮಕ್ಕಳೇ, ಈ ಸನ್ಮಾನ ನಿಮ್ಮ ಕೊನೆಯ ಗುರಿಯಲ್ಲ. ಇದು ನಿಮ್ಮ ಮುಂದಿನ ದೊಡ್ಡ ಜಿಗಿತಕ್ಕೆ ಇಟ್ಟ ಮೊದಲ ಹೆಜ್ಜೆ. ಇನ್ನಷ್ಟು ಕಲಿಯಿರಿ, ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಜಿ.ಆರ್. ತಾಂಡೇಲ ಮಾತನಾಡಿ, ನಮ್ಮ ಸಮಾಜದ ನೌಕರರೆಲ್ಲರೂ ಒಂದಾಗಿ, ಯುವಪೀಳಿಗೆಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಸ್ವಾಗತಾರ್ಹ ಎಂದು ಅವರು ಪ್ರಶಂಶಿಸಿದರು.</p>.<p>ಸುದರ್ಶನ, ಸಂತೋಷ ಕುಡ್ತಳಕರ, ರಮಾ ಖಾರ್ವಿ ಬೆಳಂಬಾರ, ನಾಗರಾಜ ಗಂಗಾವಳಿಕರ, ನಂದಾದೀಪ ತಾಂಡೇಲ, ಖಜಾಂಚಿ ತುಳಸಿದಾಸ ಕುಡ್ತಳಕರ, ನಾಗರಾಜ ಬಾನಾವಳಿಕರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-20-261299507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪಟ್ಟಣದ ಪಿ.ಎಂ.ಹೈಸ್ಕೂಲಿನ ರೈತ ಭವನದಲ್ಲಿ ಕೊಂಕಣಿ ಖಾರ್ವಿ ಸಮಾಜದ ನೌಕರರ ಸಂಘವು ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನಿಸಿತು.</p>.<p>ದಿನಕರ ವೇದಿಕೆಯ ಜಿಲ್ಲಾ ಅಧ್ಯಕ್ಷ ರವೀಂದ್ರ ಕೇಣಿ ಮಾತನಾಡಿ, ಕೊಂಕಣಿ ಖಾರ್ವಿ ಸಮಾಜ ನೌಕರರ ಸಂಘದವರು ಒಂದು ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನಿಯವಾಗಿದೆ. ಮಕ್ಕಳೇ, ಈ ಸನ್ಮಾನ ನಿಮ್ಮ ಕೊನೆಯ ಗುರಿಯಲ್ಲ. ಇದು ನಿಮ್ಮ ಮುಂದಿನ ದೊಡ್ಡ ಜಿಗಿತಕ್ಕೆ ಇಟ್ಟ ಮೊದಲ ಹೆಜ್ಜೆ. ಇನ್ನಷ್ಟು ಕಲಿಯಿರಿ, ಇನ್ನಷ್ಟು ಎತ್ತರಕ್ಕೆ ಬೆಳೆಯಿರಿ ಎಂದು ಹೇಳಿದರು.</p>.<p>ಸಂಘದ ಅಧ್ಯಕ್ಷ ಜಿ.ಆರ್. ತಾಂಡೇಲ ಮಾತನಾಡಿ, ನಮ್ಮ ಸಮಾಜದ ನೌಕರರೆಲ್ಲರೂ ಒಂದಾಗಿ, ಯುವಪೀಳಿಗೆಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಸ್ವಾಗತಾರ್ಹ ಎಂದು ಅವರು ಪ್ರಶಂಶಿಸಿದರು.</p>.<p>ಸುದರ್ಶನ, ಸಂತೋಷ ಕುಡ್ತಳಕರ, ರಮಾ ಖಾರ್ವಿ ಬೆಳಂಬಾರ, ನಾಗರಾಜ ಗಂಗಾವಳಿಕರ, ನಂದಾದೀಪ ತಾಂಡೇಲ, ಖಜಾಂಚಿ ತುಳಸಿದಾಸ ಕುಡ್ತಳಕರ, ನಾಗರಾಜ ಬಾನಾವಳಿಕರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-20-261299507</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>