<p>ಔರಾದ್: ಈ ವರ್ಷ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವೃದ್ಧಿಯಾಗಿದ್ದು, ಶೇ 92.92 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಎದುರಿಸಿದ 2882 ವಿದ್ಯಾರ್ಥಿಗಳ ಪೈಕಿ 2676 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಶೇ 56 ಪ್ರತಿಶತ ಫಲಿತಾಂಶ ಬಂದಿತ್ತು. ಈ ಬಾರಿ ಶೇ 92.92 ಸಾಧನೆ ಮಾಡಿ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ್ ತಿಳಿಸಿದ್ದಾರೆ.</p>.<p>ತಾಲ್ಲೂಕಿಗೆ ದಿವ್ಯ, ತಾಂಬ್ರಗೌರಿ ಪ್ರಥಮ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಂತಪೂರ ಜ್ಞಾನಭಾರತಿ ಪ್ರೌಢಶಾಲೆಯ ದಿವ್ಯ ಮಲ್ಲಪ್ಪಗೌಡ ಹಾಗೂ ಸಂತಪೂರ ಅನುಭವ ಮಂಟಪ ಗುರುಕುಲ ಶಾಲೆಯ ತಾಂಬ್ರಗೌರಿ ಸೋಮನಾಥ ತಲಾ 619 (ಶೇ 99.4) ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.</p>.<p>ಸಂತಪೂರ ಅನುಭವ ಮಂಪಟ ಗುರುಕುಲ ಶಾಲೆಯ ವೈಷ್ಣವಿ ಹಾಗೂ ಕಮಲನಗರ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆಯ ಅಮೃತಾ 618 (ಶೇ 98.88) ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.</p>.<p>ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಪತ್ರಕರ್ತ ಮಲ್ಲಪ್ಪಗೌಡ ಅವರ ಮಗಳು ದಿವ್ಯ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿ ತಾಯಿ ಅಂಗನವಾಡಿ ಶಿಕ್ಷಕಿಯಾಗಿದ್ದು, ಮಗಳ ಸಾಧನೆಗೆ ಹಮ್ಮೆ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯಾರ್ಥಿನಿ ತಾಂಬ್ರಗೌರಿ ಸೋಮನಾಥ ಗ್ರಾಮೀಣ ಭಾಗದ ಕೃಷಿ ಕುಟಂಬದಿಂದ ಬಂದಿದ್ದು, ಇಬ್ಬರು ಕನ್ನಡ ಮಾಧ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.</p>.<p>36 ವಿದ್ಯಾರ್ಥಿಗಳು ಅಗ್ರಶ್ರೇಣಿ: ತಾಲ್ಲೂಕಿನ ಸಂತಪೂರ ಅನುಭವ ಮಂಟಪ ಗುರುಕುಲ ಕನ್ನಡ ಮಾಧ್ಯಮ ಶಾಲೆಯ 36 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿ ಸಾಧನೆ ಮಾಡಿದ್ದಾರೆ.</p>.<p>ಪರೀಕ್ಷೆಗೆ ಹಾಜರಾಗಿದ್ದ 57 ವಿದ್ಯಾರ್ಥಿಗಳ ಪೈಕಿ 36 ಅಗ್ರಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ತಾಮ್ರಗೌರಿ ಶೇ 99.04, ವೈಷ್ಣವಿ ಸಿದ್ದಪ್ಪ ಶೇ 98.88, ಶ್ರಾವಣಿ ಶಿವರಾಜ ಶೇ 98.24 ಅಂಕ ಪಡೆದು ಸಾಧನೆ ಮಾಡಿದ್ದಾರೆ ಎಂದು ಮುಖ್ಯ ಶಿಕ್ಷಕ ಶಿವಕುಮಾರ ಹಿರೇಮಠ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಸಂಜುಕುಮಾರ ಜುಮ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-33-1420043977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ಈ ವರ್ಷ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವೃದ್ಧಿಯಾಗಿದ್ದು, ಶೇ 92.92 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಎದುರಿಸಿದ 2882 ವಿದ್ಯಾರ್ಥಿಗಳ ಪೈಕಿ 2676 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.</p>.<p>ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಶೇ 56 ಪ್ರತಿಶತ ಫಲಿತಾಂಶ ಬಂದಿತ್ತು. ಈ ಬಾರಿ ಶೇ 92.92 ಸಾಧನೆ ಮಾಡಿ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ್ ತಿಳಿಸಿದ್ದಾರೆ.</p>.<p>ತಾಲ್ಲೂಕಿಗೆ ದಿವ್ಯ, ತಾಂಬ್ರಗೌರಿ ಪ್ರಥಮ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಂತಪೂರ ಜ್ಞಾನಭಾರತಿ ಪ್ರೌಢಶಾಲೆಯ ದಿವ್ಯ ಮಲ್ಲಪ್ಪಗೌಡ ಹಾಗೂ ಸಂತಪೂರ ಅನುಭವ ಮಂಟಪ ಗುರುಕುಲ ಶಾಲೆಯ ತಾಂಬ್ರಗೌರಿ ಸೋಮನಾಥ ತಲಾ 619 (ಶೇ 99.4) ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.</p>.<p>ಸಂತಪೂರ ಅನುಭವ ಮಂಪಟ ಗುರುಕುಲ ಶಾಲೆಯ ವೈಷ್ಣವಿ ಹಾಗೂ ಕಮಲನಗರ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆಯ ಅಮೃತಾ 618 (ಶೇ 98.88) ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.</p>.<p>ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಪತ್ರಕರ್ತ ಮಲ್ಲಪ್ಪಗೌಡ ಅವರ ಮಗಳು ದಿವ್ಯ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿ ತಾಯಿ ಅಂಗನವಾಡಿ ಶಿಕ್ಷಕಿಯಾಗಿದ್ದು, ಮಗಳ ಸಾಧನೆಗೆ ಹಮ್ಮೆ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯಾರ್ಥಿನಿ ತಾಂಬ್ರಗೌರಿ ಸೋಮನಾಥ ಗ್ರಾಮೀಣ ಭಾಗದ ಕೃಷಿ ಕುಟಂಬದಿಂದ ಬಂದಿದ್ದು, ಇಬ್ಬರು ಕನ್ನಡ ಮಾಧ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.</p>.<p>36 ವಿದ್ಯಾರ್ಥಿಗಳು ಅಗ್ರಶ್ರೇಣಿ: ತಾಲ್ಲೂಕಿನ ಸಂತಪೂರ ಅನುಭವ ಮಂಟಪ ಗುರುಕುಲ ಕನ್ನಡ ಮಾಧ್ಯಮ ಶಾಲೆಯ 36 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿ ಸಾಧನೆ ಮಾಡಿದ್ದಾರೆ.</p>.<p>ಪರೀಕ್ಷೆಗೆ ಹಾಜರಾಗಿದ್ದ 57 ವಿದ್ಯಾರ್ಥಿಗಳ ಪೈಕಿ 36 ಅಗ್ರಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.</p>.<p>ತಾಮ್ರಗೌರಿ ಶೇ 99.04, ವೈಷ್ಣವಿ ಸಿದ್ದಪ್ಪ ಶೇ 98.88, ಶ್ರಾವಣಿ ಶಿವರಾಜ ಶೇ 98.24 ಅಂಕ ಪಡೆದು ಸಾಧನೆ ಮಾಡಿದ್ದಾರೆ ಎಂದು ಮುಖ್ಯ ಶಿಕ್ಷಕ ಶಿವಕುಮಾರ ಹಿರೇಮಠ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳ ಸಾಧನೆಗೆ ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಸಂಜುಕುಮಾರ ಜುಮ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-33-1420043977</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>