<p>ಔರಾದ್: ‘ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿಯೂ ವಿದ್ಯಾರ್ಥಿಗಳು ಅದ್ಭುತ ಪ್ರತಿಭೆ ಮೆರೆದಿದ್ದು, ಅವರಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ಮತ್ತು ಮಾರ್ಗದರ್ಶನ ದೊರೆತರೆ ರಾಜ್ಯ ಮಟ್ಟದ ಸಾಧನೆ ಸಾಧ್ಯವಾಗುತ್ತದೆ’ ಎಂದು ತಹಶೀಲ್ದಾರ್ ಮಹೇಶ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಸಂತಪುರ ಅನುಭವ ಮಂಟಪದಲ್ಲಿ ಈಚೆಗೆ ನಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಭಾಲ್ಕಿ ಪಟ್ಟದೇವರು ಗಡಿಭಾಗದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿ ನಡೆಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಸಂತಪುರ ಸಿದ್ದರಾಮೇಶ್ವರ ಕಾಲೇಜು ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಕಳೆದ 8 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಯನ್ನು ತೋರಿಸುತ್ತದೆ. ಅನುಭವ ಮಂಟಪ ಗುರುಕುಲ ಪ್ರೌಢಶಾಲೆಯೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು 16 ವರ್ಷಗಳಿಂದ ಶೇ.100 ಫಲಿತಾಂಶ ಸಾಧಿಸಿರುವುದು ವಿಶೇಷ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ ಗುರುಬಸವ ಪಟ್ಟದೇವರು ಮಾತನಾಡಿ, ‘ಪ್ರತಿಯೊಬ್ಬರೂ ಸುಖ, ಶಾಂತಿ ಮತ್ತು ನೆಮ್ಮದಿ ಪಡೆಯಬೇಕಾದರೆ ಸತ್ಸಂಗದ ಮಾರ್ಗದಲ್ಲಿ ನಡೆಯಬೇಕು. ಜ್ಞಾನಕ್ಕೆ ಇಡೀ ಜಗತ್ತೇ ತಲೆಬಾಗುತ್ತದೆ. ವಿದ್ಯಾರ್ಥಿಗಳು ಜ್ಞಾನದ ರತ್ನಗಳಾಗಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ರತಿಕಾಂತ ಸ್ವಾಮಿ ಮಾತನಾಡಿದರು. ಸಂಜೀವಕುಮಾರ ಜುಮ್ಮಾ, ಹೈದರಾಬಾದ್ನ ರಾಜಕುಮಾರ ಮಾಳಗೆ, ಅಭಿಷೇಕ ಸ್ವಾಮಿ, ಬಸವರಾಜ ಬಿರಾದಾರ ಉಪಸ್ಥಿತರಿದ್ದರು.</p>.<p>ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಸ್ವಾಗತಿಸಿದರು. ಮುಖ್ಯಶಿಕ್ಷಕ ಶಿವಕುಮಾರ ಹಿರೇಮಠ ವಂದಿಸಿದರು. ಸಂಗಮೇಶ ಬ್ಯಾಳೆ ಕಾರ್ಯಕ್ರಮ ನಿರೂಪಿಸಿದರು. ಹಾವಗಿರಾವ ಶೆಂಬೆಳ್ಳಿ ಹಾಗೂ ಗೋವಿಂದರೆಡ್ಡಿ ವಚನ ಸಂಗೀತ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-33-1369401548</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ‘ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿಯೂ ವಿದ್ಯಾರ್ಥಿಗಳು ಅದ್ಭುತ ಪ್ರತಿಭೆ ಮೆರೆದಿದ್ದು, ಅವರಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ಮತ್ತು ಮಾರ್ಗದರ್ಶನ ದೊರೆತರೆ ರಾಜ್ಯ ಮಟ್ಟದ ಸಾಧನೆ ಸಾಧ್ಯವಾಗುತ್ತದೆ’ ಎಂದು ತಹಶೀಲ್ದಾರ್ ಮಹೇಶ ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಸಂತಪುರ ಅನುಭವ ಮಂಟಪದಲ್ಲಿ ಈಚೆಗೆ ನಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಭಾಲ್ಕಿ ಪಟ್ಟದೇವರು ಗಡಿಭಾಗದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿ ನಡೆಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಸಂತಪುರ ಸಿದ್ದರಾಮೇಶ್ವರ ಕಾಲೇಜು ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಕಳೆದ 8 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಯನ್ನು ತೋರಿಸುತ್ತದೆ. ಅನುಭವ ಮಂಟಪ ಗುರುಕುಲ ಪ್ರೌಢಶಾಲೆಯೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು 16 ವರ್ಷಗಳಿಂದ ಶೇ.100 ಫಲಿತಾಂಶ ಸಾಧಿಸಿರುವುದು ವಿಶೇಷ’ ಎಂದು ಹೇಳಿದರು.</p>.<p>ಸಾನ್ನಿಧ್ಯ ವಹಿಸಿದ ಗುರುಬಸವ ಪಟ್ಟದೇವರು ಮಾತನಾಡಿ, ‘ಪ್ರತಿಯೊಬ್ಬರೂ ಸುಖ, ಶಾಂತಿ ಮತ್ತು ನೆಮ್ಮದಿ ಪಡೆಯಬೇಕಾದರೆ ಸತ್ಸಂಗದ ಮಾರ್ಗದಲ್ಲಿ ನಡೆಯಬೇಕು. ಜ್ಞಾನಕ್ಕೆ ಇಡೀ ಜಗತ್ತೇ ತಲೆಬಾಗುತ್ತದೆ. ವಿದ್ಯಾರ್ಥಿಗಳು ಜ್ಞಾನದ ರತ್ನಗಳಾಗಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ರತಿಕಾಂತ ಸ್ವಾಮಿ ಮಾತನಾಡಿದರು. ಸಂಜೀವಕುಮಾರ ಜುಮ್ಮಾ, ಹೈದರಾಬಾದ್ನ ರಾಜಕುಮಾರ ಮಾಳಗೆ, ಅಭಿಷೇಕ ಸ್ವಾಮಿ, ಬಸವರಾಜ ಬಿರಾದಾರ ಉಪಸ್ಥಿತರಿದ್ದರು.</p>.<p>ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಸ್ವಾಗತಿಸಿದರು. ಮುಖ್ಯಶಿಕ್ಷಕ ಶಿವಕುಮಾರ ಹಿರೇಮಠ ವಂದಿಸಿದರು. ಸಂಗಮೇಶ ಬ್ಯಾಳೆ ಕಾರ್ಯಕ್ರಮ ನಿರೂಪಿಸಿದರು. ಹಾವಗಿರಾವ ಶೆಂಬೆಳ್ಳಿ ಹಾಗೂ ಗೋವಿಂದರೆಡ್ಡಿ ವಚನ ಸಂಗೀತ ನಡೆಸಿಕೊಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-33-1369401548</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>