<p>ಬಾಗೇಪಲ್ಲಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಬಾಗೇಪಲ್ಲಿ ಪಟ್ಟಣದ ಹೊರವಲಯದ ಪ್ರಗತಿ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಪ್ರಗತಿ ಅನುತ್ತೀರ್ಣಳಾಗಿದ್ದಳು. ಆದರೆ, ಮರು ಮೌಲ್ಯಮಾಪನದಲ್ಲಿ ಪ್ರಥಮ ಶ್ರೇಣಿ ಅಂಕ ಪಡೆದಿದ್ದಾಳೆ.</p>.<p>ತಪ್ಪಾದ ಮೌಲ್ಯಮಾಪನದಿಂದ ವಿದ್ಯಾರ್ಥಿನಿ ಮತ್ತು ಪೋಷಕರು ಆತಂಕಕ್ಕೊಳಗಾದ ಬಗ್ಗೆ ಸಂಸ್ಥೆ ಪ್ರಾಂಶುಪಾಲ ಆರ್ಯನ್ ಮಿರ್ಜಾ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು.</p>.<p>ನಂತರ ಮಾತನಾಡಿ, ‘ನಮ್ಮ ಶಾಲೆ ವಿದ್ಯಾರ್ಥಿನಿ ಪ್ರಗತಿ ಪರೀಕ್ಷೆ-1ರಲ್ಲಿ 405 ಅಂಕ ಪಡೆದಿದ್ದರೂ ಅನುತ್ತೀರ್ಣಳು ಎಂದು ಫಲಿತಾಂಶ ಪ್ರಕಟವಾಗಿತ್ತು. ವರ್ಷ ಪೂರ್ತಿ ಶ್ರಮಿಸಿ ಬರೆದ ಪರೀಕ್ಷೆಗೆ ಮೌಲ್ಯಮಾಪಕರ ನಿರ್ಲಕ್ಷ್ಯದಿಂದ ಈ ಫಲಿತಾಂಶ ಬಂದಿದೆ. ಇದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದಾಳೆ. ಮೌಲ್ಯಮಾಪಕರ ನಿರ್ಲಕ್ಷ್ಯಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.</p>.<p>ಅನುತ್ತೀರ್ಣಳಾದ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 409 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ನಿರ್ಲಕ್ಷ್ಯವಾಗಿ ಮೌಲ್ಯಮಾಪನ ಮಾಡಿದವರ ವಿರುದ್ಧ ಎಸ್ಸೆಸ್ಸೆಲ್ಸಿ ಬೋರ್ಡ್ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-16-1815180926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಬಾಗೇಪಲ್ಲಿ ಪಟ್ಟಣದ ಹೊರವಲಯದ ಪ್ರಗತಿ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಪ್ರಗತಿ ಅನುತ್ತೀರ್ಣಳಾಗಿದ್ದಳು. ಆದರೆ, ಮರು ಮೌಲ್ಯಮಾಪನದಲ್ಲಿ ಪ್ರಥಮ ಶ್ರೇಣಿ ಅಂಕ ಪಡೆದಿದ್ದಾಳೆ.</p>.<p>ತಪ್ಪಾದ ಮೌಲ್ಯಮಾಪನದಿಂದ ವಿದ್ಯಾರ್ಥಿನಿ ಮತ್ತು ಪೋಷಕರು ಆತಂಕಕ್ಕೊಳಗಾದ ಬಗ್ಗೆ ಸಂಸ್ಥೆ ಪ್ರಾಂಶುಪಾಲ ಆರ್ಯನ್ ಮಿರ್ಜಾ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು.</p>.<p>ನಂತರ ಮಾತನಾಡಿ, ‘ನಮ್ಮ ಶಾಲೆ ವಿದ್ಯಾರ್ಥಿನಿ ಪ್ರಗತಿ ಪರೀಕ್ಷೆ-1ರಲ್ಲಿ 405 ಅಂಕ ಪಡೆದಿದ್ದರೂ ಅನುತ್ತೀರ್ಣಳು ಎಂದು ಫಲಿತಾಂಶ ಪ್ರಕಟವಾಗಿತ್ತು. ವರ್ಷ ಪೂರ್ತಿ ಶ್ರಮಿಸಿ ಬರೆದ ಪರೀಕ್ಷೆಗೆ ಮೌಲ್ಯಮಾಪಕರ ನಿರ್ಲಕ್ಷ್ಯದಿಂದ ಈ ಫಲಿತಾಂಶ ಬಂದಿದೆ. ಇದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದಾಳೆ. ಮೌಲ್ಯಮಾಪಕರ ನಿರ್ಲಕ್ಷ್ಯಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.</p>.<p>ಅನುತ್ತೀರ್ಣಳಾದ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 409 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ನಿರ್ಲಕ್ಷ್ಯವಾಗಿ ಮೌಲ್ಯಮಾಪನ ಮಾಡಿದವರ ವಿರುದ್ಧ ಎಸ್ಸೆಸ್ಸೆಲ್ಸಿ ಬೋರ್ಡ್ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-16-1815180926</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>