<p>ಬಸವಕಲ್ಯಾಣ: ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಜಿಲ್ಲಾ ಘಟಕದಿಂದ ಭಾನುವಾರ ನಗರದಲ್ಲಿ ಸಭೆ ಆಯೋಜಿಸಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಹೂಗಾರ ಮದಕಟ್ಟಿ ಮಾತನಾಡಿ, ‘ಸಮಾಜದ ಏಳ್ಗೆಗಾಗಿ ವಿವಿಧ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ’ ಎಂದರು.</p>.<p>ಸಂಘದ ರಾಜ್ಯ ಸಹ ಕಾರ್ಯದರ್ಶಿ ದುರ್ಯೋಧನ ಹೂಗಾರ ಮಾತನಾಡಿ, ‘ಎಲ್ಲರೂ ಒಗ್ಗಟ್ಟಿನಿಂದ ಇದ್ದು ಎಲ್ಲ ಕಾರ್ಯಕ್ಕೂ ಸಹಕಾರ ನೀಡಬೇಕು’ ಎಂದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಠಲ್ ಹೂಗಾರ, ಜಿಲ್ಲಾ ಉಪಾಧ್ಯಕ್ಷ ಶಿವಪುತ್ರಪ್ಪ ಹೂಗಾರ, ರಾಜೇಂದ್ರ ಹೂಗಾರ, ಲಕ್ಷ್ಮಿಬಾಯಿ ಪಾಟೀಲ, ವಕೀಲರಾದ ವಿಜಯಲಕ್ಷ್ಮಿ ಹೂಗಾರ, ರೇಖಾ, ರೇಷ್ಮಾ, ಹಣಮಂತ ಹೂಗಾರ, ರವಿ ಹೂಗಾರ ಉಪಸ್ಥಿತರಿದ್ದರು.</p>.<p>ಆಹ್ವಾನ: ಬೀದರ್ ಜಿಲ್ಲೆಯಲ್ಲಿನ ಹೂಗಾರ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅಂಕ ಪಟ್ಟಿಯ ನಕಲುಪ್ರತಿ ಹಾಗೂ ಒಂದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 9449726950, 8150017465 ಸಂಪರ್ಕಿಸಲು ಕೋರಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-33-1145453253</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಜಿಲ್ಲಾ ಘಟಕದಿಂದ ಭಾನುವಾರ ನಗರದಲ್ಲಿ ಸಭೆ ಆಯೋಜಿಸಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಹೂಗಾರ ಮದಕಟ್ಟಿ ಮಾತನಾಡಿ, ‘ಸಮಾಜದ ಏಳ್ಗೆಗಾಗಿ ವಿವಿಧ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ’ ಎಂದರು.</p>.<p>ಸಂಘದ ರಾಜ್ಯ ಸಹ ಕಾರ್ಯದರ್ಶಿ ದುರ್ಯೋಧನ ಹೂಗಾರ ಮಾತನಾಡಿ, ‘ಎಲ್ಲರೂ ಒಗ್ಗಟ್ಟಿನಿಂದ ಇದ್ದು ಎಲ್ಲ ಕಾರ್ಯಕ್ಕೂ ಸಹಕಾರ ನೀಡಬೇಕು’ ಎಂದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಠಲ್ ಹೂಗಾರ, ಜಿಲ್ಲಾ ಉಪಾಧ್ಯಕ್ಷ ಶಿವಪುತ್ರಪ್ಪ ಹೂಗಾರ, ರಾಜೇಂದ್ರ ಹೂಗಾರ, ಲಕ್ಷ್ಮಿಬಾಯಿ ಪಾಟೀಲ, ವಕೀಲರಾದ ವಿಜಯಲಕ್ಷ್ಮಿ ಹೂಗಾರ, ರೇಖಾ, ರೇಷ್ಮಾ, ಹಣಮಂತ ಹೂಗಾರ, ರವಿ ಹೂಗಾರ ಉಪಸ್ಥಿತರಿದ್ದರು.</p>.<p>ಆಹ್ವಾನ: ಬೀದರ್ ಜಿಲ್ಲೆಯಲ್ಲಿನ ಹೂಗಾರ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅಂಕ ಪಟ್ಟಿಯ ನಕಲುಪ್ರತಿ ಹಾಗೂ ಒಂದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 9449726950, 8150017465 ಸಂಪರ್ಕಿಸಲು ಕೋರಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-33-1145453253</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>