<p>ಬ್ಯಾಡಗಿ: ಶೋಷಿತರಲ್ಲಿ ಒಂದಾದ ನದಾಫ್/ಪಿಂಜಾರ್ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಕೈಲಾದ ಸಹಾಯವನ್ನು ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ರಾಜೇಸಾಬ ಕಳ್ಯಾಳ ಹೇಳಿದರು.</p>.<p>ಪಟ್ಟಣದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ನದಾಫ್/ಪಿಂಜಾರ ಸಮಾಜದ ಮಕ್ಕಳಿಗೆ ಭಾನುವಾರ ಏರ್ಪಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಅಲ್ಪಸಂಖ್ಯಾತರಿಗೆ ಸರ್ಕಾರ ಒತ್ತು ನೀಡಿದ್ದು, ಹಾಸ್ಟೇಲ್ ಸೌಲಭ್ಯವನ್ನು ಸಹ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಕೆಲಸಕ್ಕೆ ಹಚ್ಚದೆ ಉನ್ನತ ಶಿಕ್ಷಣ ಕೊಡಿಸುವಂತೆ ಪಾಲಕರಲ್ಲಿ ಮನವಿ ಮಾಡಿಕೊಂಡರು.</p>.<p>ರಾಜಾಭಕ್ಷ ಕೂರಗುಂದ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಮುದಾಯ ಸಾಕಷ್ಟು ಬದಲಾವಣೆಯನ್ನು ಕಾಣಲು ಎಲ್ಲರಿಗೂ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣವನ್ನು ನೀಡುವಂತೆ ಹೇಳಿದರು.</p>.<p>ಈ ವೇಳೆ ನದಾಫ್/ಪಿಂಜಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹಡಗಲಿ, ಹಸನಸಾಬ್ ಮೈದೂರ, ರಿಯಾಜ್ ನದಾಫ್, ಅಬ್ದುಲ್ಮುನಾಫ್ ಎರೆಶೀಮಿ, ಮಹಮದ್ ಕುಡುತನಿ, ಖಾಶೀಂ ದೇವಿಹೊಸೂರ, ರಾಜೇಸಾಬ ಯರೆಶೀಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-22-1769772335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ಶೋಷಿತರಲ್ಲಿ ಒಂದಾದ ನದಾಫ್/ಪಿಂಜಾರ್ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಕೈಲಾದ ಸಹಾಯವನ್ನು ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ರಾಜೇಸಾಬ ಕಳ್ಯಾಳ ಹೇಳಿದರು.</p>.<p>ಪಟ್ಟಣದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ನದಾಫ್/ಪಿಂಜಾರ ಸಮಾಜದ ಮಕ್ಕಳಿಗೆ ಭಾನುವಾರ ಏರ್ಪಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಅಲ್ಪಸಂಖ್ಯಾತರಿಗೆ ಸರ್ಕಾರ ಒತ್ತು ನೀಡಿದ್ದು, ಹಾಸ್ಟೇಲ್ ಸೌಲಭ್ಯವನ್ನು ಸಹ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಕೆಲಸಕ್ಕೆ ಹಚ್ಚದೆ ಉನ್ನತ ಶಿಕ್ಷಣ ಕೊಡಿಸುವಂತೆ ಪಾಲಕರಲ್ಲಿ ಮನವಿ ಮಾಡಿಕೊಂಡರು.</p>.<p>ರಾಜಾಭಕ್ಷ ಕೂರಗುಂದ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಮುದಾಯ ಸಾಕಷ್ಟು ಬದಲಾವಣೆಯನ್ನು ಕಾಣಲು ಎಲ್ಲರಿಗೂ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣವನ್ನು ನೀಡುವಂತೆ ಹೇಳಿದರು.</p>.<p>ಈ ವೇಳೆ ನದಾಫ್/ಪಿಂಜಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹಡಗಲಿ, ಹಸನಸಾಬ್ ಮೈದೂರ, ರಿಯಾಜ್ ನದಾಫ್, ಅಬ್ದುಲ್ಮುನಾಫ್ ಎರೆಶೀಮಿ, ಮಹಮದ್ ಕುಡುತನಿ, ಖಾಶೀಂ ದೇವಿಹೊಸೂರ, ರಾಜೇಸಾಬ ಯರೆಶೀಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-22-1769772335</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>