<p>ಬ್ಯಾಡಗಿ: ರಾಜ್ಯದಲ್ಲಿ ಈಚೆಗೆ ಪ್ರಕಟಗೊಂಡ ಎಸ್ಎಸ್ಎಲ್ಸಿ ಫಲಿತಾಂಶವನ್ನು ವಿಶ್ಲೇಷಿಸಿದಾಗ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಿಗಿಂತ ಮಾತೃ ಭಾಷೆಯಾದ ಕನ್ನಡ ವಿಷಯದಲ್ಲಿ ಅತೀಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣವಾಗಿರುವುದು ಅತಂಕಕಾರಿಯಾಗಿದೆ ಎಂದು ಬಿಇಒ ಎಸ್.ಜಿ.ಕೋಟಿ ಕಳವಳ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಿವಪುರ ಬಡಾವಣೆಯ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಶುಕ್ರವಾರ ಆಯೋಜಿಸಿದ್ದ 2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಓದು, ಬರಹದ ಆಸಕ್ತಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳ ಅನುತ್ತೀರ್ಣ ಪ್ರಮಾಣ ಹೆಚ್ಚಳವಾಗುತ್ತಿದೆ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪುರ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಸಾಪ ಕನ್ನಡದಲ್ಲಿ ಶೇ 100ರಷ್ಟು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನಡೆಸುತ್ತಿದೆ. ತಾಲ್ಲೂಕಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ ಎಂದರು.</p>.<p>ಈ ವೇಳೆ ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಮೇಲಗಿರಿ, ರೋಟರಿ ಕ್ಲಬ್ ಅಧ್ಯಕ್ಷ ಅನಿಲಕುಮಾರ, ನಿವೃತ್ತ ಪ್ರಾಚಾರ್ಯ ಆನಂದ ಮುದುಕಮ್ಮನವರ, ಕಸಾಪ ಪದಾಧಿಕಾರಿಗಳಾದ ಜೀವರಾಜ ಛತ್ರದ, ಮಾಲತೇಶ ಚಳಗೇರಿ, ಎಸ್.ಬಿ.ಇಮ್ಮಡಿ, ಮಾಲತೇಶ ಅರಳಿಮಟ್ಟಿ, ಮಂಜುನಾಥ ಉಪ್ಪಾರ, ವಿರೇಂದ್ರ ಶೆಟ್ಟರ, ರಾಜಣ್ಣ ಹೊಸಳ್ಳಿ, ಪರುಶುರಾಮ ಮೇಲಗಿರಿ ಹಾಗೂ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-1038901696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ: ರಾಜ್ಯದಲ್ಲಿ ಈಚೆಗೆ ಪ್ರಕಟಗೊಂಡ ಎಸ್ಎಸ್ಎಲ್ಸಿ ಫಲಿತಾಂಶವನ್ನು ವಿಶ್ಲೇಷಿಸಿದಾಗ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಿಗಿಂತ ಮಾತೃ ಭಾಷೆಯಾದ ಕನ್ನಡ ವಿಷಯದಲ್ಲಿ ಅತೀಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣವಾಗಿರುವುದು ಅತಂಕಕಾರಿಯಾಗಿದೆ ಎಂದು ಬಿಇಒ ಎಸ್.ಜಿ.ಕೋಟಿ ಕಳವಳ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಿವಪುರ ಬಡಾವಣೆಯ ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಶುಕ್ರವಾರ ಆಯೋಜಿಸಿದ್ದ 2025–26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮಕ್ಕಳಲ್ಲಿ ಓದು, ಬರಹದ ಆಸಕ್ತಿ ಕಡಿಮೆಯಾಗುತ್ತಿದೆ. ಇದರಿಂದಾಗಿ ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳ ಅನುತ್ತೀರ್ಣ ಪ್ರಮಾಣ ಹೆಚ್ಚಳವಾಗುತ್ತಿದೆ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪುರ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಸಾಪ ಕನ್ನಡದಲ್ಲಿ ಶೇ 100ರಷ್ಟು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ನಡೆಸುತ್ತಿದೆ. ತಾಲ್ಲೂಕಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ ಎಂದರು.</p>.<p>ಈ ವೇಳೆ ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಮೇಲಗಿರಿ, ರೋಟರಿ ಕ್ಲಬ್ ಅಧ್ಯಕ್ಷ ಅನಿಲಕುಮಾರ, ನಿವೃತ್ತ ಪ್ರಾಚಾರ್ಯ ಆನಂದ ಮುದುಕಮ್ಮನವರ, ಕಸಾಪ ಪದಾಧಿಕಾರಿಗಳಾದ ಜೀವರಾಜ ಛತ್ರದ, ಮಾಲತೇಶ ಚಳಗೇರಿ, ಎಸ್.ಬಿ.ಇಮ್ಮಡಿ, ಮಾಲತೇಶ ಅರಳಿಮಟ್ಟಿ, ಮಂಜುನಾಥ ಉಪ್ಪಾರ, ವಿರೇಂದ್ರ ಶೆಟ್ಟರ, ರಾಜಣ್ಣ ಹೊಸಳ್ಳಿ, ಪರುಶುರಾಮ ಮೇಲಗಿರಿ ಹಾಗೂ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-1038901696</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>