<p>ಚಿಕ್ಕಬಳ್ಳಾಪುರ: ಪ್ರಪಂಚದ ಯಾವುದೇ ದೇಶದಲ್ಲಿಯೂ ಇಲ್ಲದ ಸಂಸ್ಕೃತಿ, ಭಾಷೆ, ಧರ್ಮ ಭಾರತದಲ್ಲಿ ಇದೆ. ದೇಶದ ಬಗ್ಗೆ ಎಲ್ಲರಿಗೂ ಹೆಮ್ಮೆ ಇರಬೇಕು. ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ತಿಳಿಸಿದರು.</p>.<p>ನಗರದಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯ ಹಾಗೂ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಮಾನವೀಯತೆ ರೂಢಿಸಿಕೊಳ್ಳಬೇಕು. ಪ್ರತಿ ಹಂತದಲ್ಲೂ ಗುರಿ ಇಟ್ಟುಕೊಳ್ಳಬೇಕು. ಗುರು ಹಿರಿಯರು, ಪೋಷಕರ ತಾಯಿ ಬಗ್ಗೆ ವ್ಯಾಸಂಗ ಮಾಡಿದ ಶಾಲೆಯ ಬಗ್ಗೆ ಅಭಿಮಾನ, ಗೌರವ, ಪ್ರೀತಿ ಹೊಂದಿರಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳಾದ ಪ್ರಣತಿರಾಜ್, ಧನುಶ್ರೀ, ಕುಶಲ್ ಕೆ.ಎಸ್, ಕೆ.ಎನ್.ವೀಣಾ, ಶ್ರುತಿ ಸಿ., ಪೂರ್ವಿಕಾ ಆರ್., ಕರುಣಶ್ರೀ, ನಿಹಾರಿಕಾ ಕೆ.ಎನ್, ಅನುಜ, ಚಂದ್ರದೀಪ ಕೆ.ಎಲ್, ವೈಷ್ಣವಿ ಎಸ್., ರಾಜಸ್ ಸಿ.ಎಂ., ತೇಜಸ್ವಿನಿ ಎಂ., ದರ್ಶನ್, ವಿಷ್ಣು, ಅನುಪಮಾ ಎಂ ಅವರನ್ನು ಸನ್ಮಾನಿಸಲಾಯಿತು.</p>.<p>ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಸ್ಥಾನಿಕ ಸಂಚಾಲಕಿ ಬಿ.ಕೆ.ಲಲಿತ, ರಾಮಕೃಷ್ಣಣ್ಣ, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಅಂಜಿನಪ್ಪ, ಹಿರಿಯ ಪತ್ರಕರ್ತ ಎಚ್.ವಿ.ಸೋಮಶೇಖರ್, ಶಿಕ್ಷಕ ಮಂಜುನಾಥ್, ಬಿ.ಕೆ.ರೇಣುಕಾ, ಚಿನ್ನಮ್ಮ, ಲಕ್ಷ್ಮಿದೇವಮ್ಮ, ಮಂಜುಳಾ, ಎಂ. ಕೃಷ್ಣಪ್ಪ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-16-1274012858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಪ್ರಪಂಚದ ಯಾವುದೇ ದೇಶದಲ್ಲಿಯೂ ಇಲ್ಲದ ಸಂಸ್ಕೃತಿ, ಭಾಷೆ, ಧರ್ಮ ಭಾರತದಲ್ಲಿ ಇದೆ. ದೇಶದ ಬಗ್ಗೆ ಎಲ್ಲರಿಗೂ ಹೆಮ್ಮೆ ಇರಬೇಕು. ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ತಿಳಿಸಿದರು.</p>.<p>ನಗರದಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯ ಹಾಗೂ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಮಾನವೀಯತೆ ರೂಢಿಸಿಕೊಳ್ಳಬೇಕು. ಪ್ರತಿ ಹಂತದಲ್ಲೂ ಗುರಿ ಇಟ್ಟುಕೊಳ್ಳಬೇಕು. ಗುರು ಹಿರಿಯರು, ಪೋಷಕರ ತಾಯಿ ಬಗ್ಗೆ ವ್ಯಾಸಂಗ ಮಾಡಿದ ಶಾಲೆಯ ಬಗ್ಗೆ ಅಭಿಮಾನ, ಗೌರವ, ಪ್ರೀತಿ ಹೊಂದಿರಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳಾದ ಪ್ರಣತಿರಾಜ್, ಧನುಶ್ರೀ, ಕುಶಲ್ ಕೆ.ಎಸ್, ಕೆ.ಎನ್.ವೀಣಾ, ಶ್ರುತಿ ಸಿ., ಪೂರ್ವಿಕಾ ಆರ್., ಕರುಣಶ್ರೀ, ನಿಹಾರಿಕಾ ಕೆ.ಎನ್, ಅನುಜ, ಚಂದ್ರದೀಪ ಕೆ.ಎಲ್, ವೈಷ್ಣವಿ ಎಸ್., ರಾಜಸ್ ಸಿ.ಎಂ., ತೇಜಸ್ವಿನಿ ಎಂ., ದರ್ಶನ್, ವಿಷ್ಣು, ಅನುಪಮಾ ಎಂ ಅವರನ್ನು ಸನ್ಮಾನಿಸಲಾಯಿತು.</p>.<p>ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಸ್ಥಾನಿಕ ಸಂಚಾಲಕಿ ಬಿ.ಕೆ.ಲಲಿತ, ರಾಮಕೃಷ್ಣಣ್ಣ, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಅಂಜಿನಪ್ಪ, ಹಿರಿಯ ಪತ್ರಕರ್ತ ಎಚ್.ವಿ.ಸೋಮಶೇಖರ್, ಶಿಕ್ಷಕ ಮಂಜುನಾಥ್, ಬಿ.ಕೆ.ರೇಣುಕಾ, ಚಿನ್ನಮ್ಮ, ಲಕ್ಷ್ಮಿದೇವಮ್ಮ, ಮಂಜುಳಾ, ಎಂ. ಕೃಷ್ಣಪ್ಪ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-16-1274012858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>