<p>ಚಿಂತಾಮಣಿ: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ನಿವೃತ್ತ ಸರ್ಕಾರಿ ನೌಕರರ ಮೊಮ್ಮಕ್ಕಳನ್ನು ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಗೌರವಿಸಲಾಯಿತು.</p>.<p>ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಎನ್.ಕಾರುಣ್ಯ, ಎನ್.ವೇದ, ಸ್ಕಂದ ಶ್ರೀವಾತ್ಸವ ಹಾಗೂ ಎಸ್ಎಸ್ಎಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಜಿ.ಆರ್. ನಯನ ಅವರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ವಿ.ಚೌಡಪ್ಪ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದು ಮಾತ್ರ ಮುಖ್ಯವಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಅಂಕಗಳನ್ನು ಬೆನ್ನಟ್ಟುವುದು ಸಹಜ. ಅಂಕಗಳ ಜತೆಗೆ ಉತ್ತಮ ಸಂಸ್ಕಾರ, ನಡವಳಿಕೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.</p>.<p>ರಾಜ್ಯ ಸಂಘದ ಕಾರ್ಯದರ್ಶಿ ಎಚ್.ಮುನಿಯಪ್ಪ, ಜಿಲ್ಲಾ ಸಂಘದ ಉಪಾಧ್ಯಕ್ಷ ಕೆವಿ. ಚೌಡಪ್ಪ, ಜಿಲ್ಲಾ ಸಂಘದ ಪ್ರತಿನಿಧಿ ಅಂಜನಾಚಾರಿ, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಎ.ಎಸ್. ರಾಮಚಂದ್ರಮೂರ್ತಿ, ಕಾರ್ಯದರ್ಶಿ ಎಸ್.ಆಂಜನಪ್ಪ, ಡಿಜಿಎಂ ನರಸಿಂಹಮೂರ್ತಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-16-718616209</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ನಿವೃತ್ತ ಸರ್ಕಾರಿ ನೌಕರರ ಮೊಮ್ಮಕ್ಕಳನ್ನು ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಗೌರವಿಸಲಾಯಿತು.</p>.<p>ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಎನ್.ಕಾರುಣ್ಯ, ಎನ್.ವೇದ, ಸ್ಕಂದ ಶ್ರೀವಾತ್ಸವ ಹಾಗೂ ಎಸ್ಎಸ್ಎಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಜಿ.ಆರ್. ನಯನ ಅವರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ವಿ.ಚೌಡಪ್ಪ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದು ಮಾತ್ರ ಮುಖ್ಯವಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಅಂಕಗಳನ್ನು ಬೆನ್ನಟ್ಟುವುದು ಸಹಜ. ಅಂಕಗಳ ಜತೆಗೆ ಉತ್ತಮ ಸಂಸ್ಕಾರ, ನಡವಳಿಕೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.</p>.<p>ರಾಜ್ಯ ಸಂಘದ ಕಾರ್ಯದರ್ಶಿ ಎಚ್.ಮುನಿಯಪ್ಪ, ಜಿಲ್ಲಾ ಸಂಘದ ಉಪಾಧ್ಯಕ್ಷ ಕೆವಿ. ಚೌಡಪ್ಪ, ಜಿಲ್ಲಾ ಸಂಘದ ಪ್ರತಿನಿಧಿ ಅಂಜನಾಚಾರಿ, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಎ.ಎಸ್. ರಾಮಚಂದ್ರಮೂರ್ತಿ, ಕಾರ್ಯದರ್ಶಿ ಎಸ್.ಆಂಜನಪ್ಪ, ಡಿಜಿಎಂ ನರಸಿಂಹಮೂರ್ತಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-16-718616209</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>