<p>ದಾವಣಗೆರೆ: ‘ಹೊನ್ನಾಳಿಯ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಮೇ 31ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಅಶೋಕ ಎಚ್.ಬಿ. ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ಹೊನ್ನಾಳಿ ತಾಲ್ಲೂಕಿನ ವಿದ್ಯಾರ್ಥಿಗಳು ಮೇ 25ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಯಾವುದೇ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿಪದಕ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.</p>.<p>‘23 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದೇವೆ. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನಿವೃತ್ತ ನೌಕರರನ್ನೂ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು’ ಎಂದು ಸಂಘಟನೆಯ ಅಧ್ಯಕ್ಷ ಪಿ. ವೀರಣ್ಣ ಪಟ್ಟಣಶೆಟ್ಟಿ ಮಾಹಿತಿ ನೀಡಿದರು.</p>.<p>ಹೆಚ್ಚಿನ ಮಾಹಿತಿಗೆ ಮೊ.ನಂ. 9480767070, 9880709470ಗೆ ಸಂಪರ್ಕಿಸಬಹುದು.</p>.<p>ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಾಲೇಶ್ ಕುಂಕೋದ್, ಹಾಲಸ್ವಾಮಿ, ಪ್ರಭು ಎಚ್.ಆರ್. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-979690434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಹೊನ್ನಾಳಿಯ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಮೇ 31ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಅಶೋಕ ಎಚ್.ಬಿ. ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ಹೊನ್ನಾಳಿ ತಾಲ್ಲೂಕಿನ ವಿದ್ಯಾರ್ಥಿಗಳು ಮೇ 25ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಯಾವುದೇ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿಪದಕ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.</p>.<p>‘23 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದೇವೆ. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನಿವೃತ್ತ ನೌಕರರನ್ನೂ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು’ ಎಂದು ಸಂಘಟನೆಯ ಅಧ್ಯಕ್ಷ ಪಿ. ವೀರಣ್ಣ ಪಟ್ಟಣಶೆಟ್ಟಿ ಮಾಹಿತಿ ನೀಡಿದರು.</p>.<p>ಹೆಚ್ಚಿನ ಮಾಹಿತಿಗೆ ಮೊ.ನಂ. 9480767070, 9880709470ಗೆ ಸಂಪರ್ಕಿಸಬಹುದು.</p>.<p>ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಾಲೇಶ್ ಕುಂಕೋದ್, ಹಾಲಸ್ವಾಮಿ, ಪ್ರಭು ಎಚ್.ಆರ್. ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-979690434</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>