<p>ಗದಗ: ‘ಭಾಷಾ ತಜ್ಞರು, ಶಿಕ್ಷಣ ತಜ್ಞರು ಹಲವು ವರ್ಷಗಳಿಂದ ದ್ವಿಭಾಷಾ ನೀತಿಗಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಜನರ ಬೇಡಿಕೆಗೆ ಮನ್ನಣೆ ನೀಡಿರುವ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿ ಮಾಡಿದೆ. ಆದರೆ, ಈ ಸಂಪೂರ್ಣ ಪ್ರಕ್ರಿಯೆಯನ್ನು ಯಾವುದೇ ರೀತಿಯ ಸಮಾಲೋಚನೆ ನಡೆಸದೆ ಪರೀಕ್ಷೆಯ ಮಧ್ಯ ಭಾಗದಲ್ಲಿ ಘೋಷಿಸಿರುವುದು ಖಂಡನೀಯ’ ಎಂದು ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಎಂ.ಶಾಂತಿ ಹೇಳಿದ್ದಾರೆ.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯನ್ನು ಕಡ್ಡಾಯ ತೇರ್ಗಡೆಯಿಂದ ಹೊರಗಿರಿಸಿ, ಎಸ್ಎಸ್ಎಲ್ಸಿಯ ಒಟ್ಟಾರೆ ಅಂಕವನ್ನು 525ಕ್ಕೆ ಇಳಿಸಿದೆ. ಹಿಂದಿ ಭಾಷೆಯನ್ನು ಗುರಿಯಾಗಿರಿಸಿ ತೃತೀಯ ಭಾಷೆಯ ಹೊರೆ ಕಡಿಮೆಗೊಳಿಸಿರುವುದು ಮುಂದೆ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಇದೀಗ, ವಿದ್ಯಾರ್ಥಿಗಳ ಹಿತದೃಷ್ಟಿಯ ಹೆಸರಿನಲ್ಲಿ ಇಂತಹ ನೀತಿಯನ್ನು ಜಾರಿಗೆ ತಂದರೆ, ಮುಂದೆ ಇದೇ ರೀತಿಯಲ್ಲಿ ಶಿಕ್ಷಣ ವಿರೋಧಿ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಸಹ ಯಾವುದೇ ಸಮಾಲೋಚನೆ, ಚರ್ಚೆ ಇಲ್ಲದೆ ಜಾರಿಗೆ ತರುವುದು ಸರ್ವೇ ಸಾಮಾನ್ಯ ಎಂಬಂತಾಗುತ್ತದೆ. ಈ ರೀತಿ, ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಕರು, ಪೋಷಕರು ಯಾರ ಅಭಿಪ್ರಾಯವನ್ನು ಪಡೆಯದೇ ನೀತಿಗಳನ್ನು ಬದಲಾಯಿಸುವ ಪ್ರಕ್ರಿಯೆ ಶಿಕ್ಷಣದ ಆಶಯಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಖಂಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-23-675610460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಭಾಷಾ ತಜ್ಞರು, ಶಿಕ್ಷಣ ತಜ್ಞರು ಹಲವು ವರ್ಷಗಳಿಂದ ದ್ವಿಭಾಷಾ ನೀತಿಗಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಜನರ ಬೇಡಿಕೆಗೆ ಮನ್ನಣೆ ನೀಡಿರುವ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿ ಮಾಡಿದೆ. ಆದರೆ, ಈ ಸಂಪೂರ್ಣ ಪ್ರಕ್ರಿಯೆಯನ್ನು ಯಾವುದೇ ರೀತಿಯ ಸಮಾಲೋಚನೆ ನಡೆಸದೆ ಪರೀಕ್ಷೆಯ ಮಧ್ಯ ಭಾಗದಲ್ಲಿ ಘೋಷಿಸಿರುವುದು ಖಂಡನೀಯ’ ಎಂದು ಎಐಡಿಎಸ್ಒ ಜಿಲ್ಲಾ ಸಂಚಾಲಕಿ ಎಂ.ಶಾಂತಿ ಹೇಳಿದ್ದಾರೆ.</p>.<p>ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯನ್ನು ಕಡ್ಡಾಯ ತೇರ್ಗಡೆಯಿಂದ ಹೊರಗಿರಿಸಿ, ಎಸ್ಎಸ್ಎಲ್ಸಿಯ ಒಟ್ಟಾರೆ ಅಂಕವನ್ನು 525ಕ್ಕೆ ಇಳಿಸಿದೆ. ಹಿಂದಿ ಭಾಷೆಯನ್ನು ಗುರಿಯಾಗಿರಿಸಿ ತೃತೀಯ ಭಾಷೆಯ ಹೊರೆ ಕಡಿಮೆಗೊಳಿಸಿರುವುದು ಮುಂದೆ ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವತ್ತ ಪ್ರಮುಖ ಹೆಜ್ಜೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಇದೀಗ, ವಿದ್ಯಾರ್ಥಿಗಳ ಹಿತದೃಷ್ಟಿಯ ಹೆಸರಿನಲ್ಲಿ ಇಂತಹ ನೀತಿಯನ್ನು ಜಾರಿಗೆ ತಂದರೆ, ಮುಂದೆ ಇದೇ ರೀತಿಯಲ್ಲಿ ಶಿಕ್ಷಣ ವಿರೋಧಿ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಸಹ ಯಾವುದೇ ಸಮಾಲೋಚನೆ, ಚರ್ಚೆ ಇಲ್ಲದೆ ಜಾರಿಗೆ ತರುವುದು ಸರ್ವೇ ಸಾಮಾನ್ಯ ಎಂಬಂತಾಗುತ್ತದೆ. ಈ ರೀತಿ, ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಕರು, ಪೋಷಕರು ಯಾರ ಅಭಿಪ್ರಾಯವನ್ನು ಪಡೆಯದೇ ನೀತಿಗಳನ್ನು ಬದಲಾಯಿಸುವ ಪ್ರಕ್ರಿಯೆ ಶಿಕ್ಷಣದ ಆಶಯಕ್ಕೆ ಧಕ್ಕೆ ಉಂಟು ಮಾಡುತ್ತದೆ ಎಂದು ಖಂಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-23-675610460</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>