<p>ಹಿರಿಯೂರು: ಕೂಲಿ ಕೆಲಸ ಮಾಡುವ ದಂಪತಿಯ ಪುತ್ರನೊಬ್ಬ ಜಪಾನ್ನಲ್ಲಿ ನಡೆಯಲಿರುವ ಸಕುರ–ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ಮತ್ತು ತಂತ್ರಜ್ಞಾನ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾನೆ.</p>.<p>ನಗರದ ಲಕ್ಕವ್ವನಹಳ್ಳಿ ರಸ್ತೆಯ ವಾಗ್ದೇವಿ ವಿದ್ಯಾಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಎನ್.ಕಾರ್ತಿಕ್ ಆಯ್ಕೆಯಾದ ವಿದ್ಯಾರ್ಥಿ. ಈತ ವಾಣಿವಿಲಾಸಪುರ ರಸ್ತೆಯ ಉಪ್ಪಾರಹಟ್ಟಿಯ ನಾಗರಾಜ– ಸುಧಾ ದಂಪತಿಯ ಪುತ್ರ.</p>.<p>ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ನಡೆಸಲಾಗುವ ಇನ್ಸ್ಪೈರ್ ಅವಾರ್ಡ್ ಮಾನಕ್ನಲ್ಲಿ ‘ಪೆಡಲ್ ಆಪರೇಟೆಡ್ ಕಾಂಪೋಸ್ಟ್ ಶ್ರೆಡರ್’ ಎನ್ನುವ ಮಾದರಿ ತಯಾರಿಸಿ ಆನ್ಲೈನ್ ಮೂಲಕ ಪ್ರದರ್ಶಿಸಿದ್ದ. ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದ.</p>.<p>2024–25 ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ಪಾಲ್ಗೊಂಡಿದ್ದ. ಈತನನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವೇ ಜಪಾನ್ಗೆ ಕಳುಹಿಸುತ್ತಿದ್ದು, ಸಂಪೂರ್ಣ ವೆಚ್ಚವನ್ನೂ ಭರಿಸುತ್ತಿದೆ.</p>.<p>ವಾಗ್ದೇವಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರು ಕಾರ್ತಿಕ್ನನ್ನು ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಕೆ.ವಿ. ಅಮರೇಶ್, ಮಾರ್ಗದರ್ಶಿ ಶಿಕ್ಷಕಿ ರುಕ್ಮಿಣಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಟಿ.ಎಸ್. ಶ್ರೀನಿವಾಸ್, ಡಯಟ್ ಉಪನ್ಯಾಸಕ ರೇವಣ್ಣ, ನೋಡಲ್ ಅಧಿಕಾರಿ ನಿಜಗುಣಮೂರ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-44-893710401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ಕೂಲಿ ಕೆಲಸ ಮಾಡುವ ದಂಪತಿಯ ಪುತ್ರನೊಬ್ಬ ಜಪಾನ್ನಲ್ಲಿ ನಡೆಯಲಿರುವ ಸಕುರ–ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ಮತ್ತು ತಂತ್ರಜ್ಞಾನ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾನೆ.</p>.<p>ನಗರದ ಲಕ್ಕವ್ವನಹಳ್ಳಿ ರಸ್ತೆಯ ವಾಗ್ದೇವಿ ವಿದ್ಯಾಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿರುವ ಎನ್.ಕಾರ್ತಿಕ್ ಆಯ್ಕೆಯಾದ ವಿದ್ಯಾರ್ಥಿ. ಈತ ವಾಣಿವಿಲಾಸಪುರ ರಸ್ತೆಯ ಉಪ್ಪಾರಹಟ್ಟಿಯ ನಾಗರಾಜ– ಸುಧಾ ದಂಪತಿಯ ಪುತ್ರ.</p>.<p>ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ನಡೆಸಲಾಗುವ ಇನ್ಸ್ಪೈರ್ ಅವಾರ್ಡ್ ಮಾನಕ್ನಲ್ಲಿ ‘ಪೆಡಲ್ ಆಪರೇಟೆಡ್ ಕಾಂಪೋಸ್ಟ್ ಶ್ರೆಡರ್’ ಎನ್ನುವ ಮಾದರಿ ತಯಾರಿಸಿ ಆನ್ಲೈನ್ ಮೂಲಕ ಪ್ರದರ್ಶಿಸಿದ್ದ. ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದ.</p>.<p>2024–25 ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲೂ ಪಾಲ್ಗೊಂಡಿದ್ದ. ಈತನನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವೇ ಜಪಾನ್ಗೆ ಕಳುಹಿಸುತ್ತಿದ್ದು, ಸಂಪೂರ್ಣ ವೆಚ್ಚವನ್ನೂ ಭರಿಸುತ್ತಿದೆ.</p>.<p>ವಾಗ್ದೇವಿ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಬಿಇಒ ಸಿ.ಎಂ.ತಿಪ್ಪೇಸ್ವಾಮಿ ಅವರು ಕಾರ್ತಿಕ್ನನ್ನು ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಕೆ.ವಿ. ಅಮರೇಶ್, ಮಾರ್ಗದರ್ಶಿ ಶಿಕ್ಷಕಿ ರುಕ್ಮಿಣಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್.ಟಿ.ಎಸ್. ಶ್ರೀನಿವಾಸ್, ಡಯಟ್ ಉಪನ್ಯಾಸಕ ರೇವಣ್ಣ, ನೋಡಲ್ ಅಧಿಕಾರಿ ನಿಜಗುಣಮೂರ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-44-893710401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>