<p>ಹೊನ್ನಾಳಿ: ‘ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಜೂನ್ 28ರಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೇರಣೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಇನ್ಸೈಟ್ಸ್ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ್ ಹೇಳಿದರು.</p>.<p>‘ಕಳೆದ ವರ್ಷ ಶೇ 90ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ₹1,000 ನಗದು, ಸ್ಮರಣಿಕೆ ನೀಡಿ ಸನ್ಮಾನಿಸಲಾಗಿತ್ತು. ಈ ಬಾರಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಈ ಬಾರಿಯೂ ₹1,000 ನಗದು, ಸ್ಮರಣಿಕೆ ನೀಡಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು? ಎನ್ನುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು. ಈ ಹಂತದಲ್ಲಿಯೇ ಐಎಎಸ್, ಐಪಿಎಸ್ನಂತಹ ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಆಸಕ್ತಿ ಬೆಳೆಸುವ ಹಾಗೂ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಆಗಮಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಈಗಾಗಲೇ 120 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಸಂಖ್ಯೆ 400ಕ್ಕೆ ಹೆಚ್ಚುವ ಅಂದಾಜಿದೆ. ಜೂನ್ 15ರೊಳಗಾಗಿ ವಿದ್ಯಾರ್ಥಿಗಳು ತಮ್ಮ ಹೆಸರು, ಪೋಷಕರ ಹೆಸರು, ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ಈ ಕೆಳಕಂಡವರನ್ನು ಸಂಪರ್ಕಿಸಬಹುದು’ ಎಂದು ಮನವಿ ಮಾಡಿದರು.</p>.<p>ರಾಜು ಕಣಗಣ್ಣಾರ್ ಮೊ: 8073362266, ಪಂಕಜಾಕ್ಷಿ 9886628687, ನಾಗೇಶ್ ಗಂಜಿನಹಳ್ಳಿ 7892229504, ಸಂದೀಪ್ ನ್ಯಾಮತಿ 8095446750, ಕರೀಂ ಸಾಸ್ವೆಹಳ್ಳಿ 8197069136, ಅಯ್ಯಣ್ಣ 9353460054.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-43-1787339965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊನ್ನಾಳಿ: ‘ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಜೂನ್ 28ರಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೇರಣೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಇನ್ಸೈಟ್ಸ್ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ್ ಹೇಳಿದರು.</p>.<p>‘ಕಳೆದ ವರ್ಷ ಶೇ 90ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ₹1,000 ನಗದು, ಸ್ಮರಣಿಕೆ ನೀಡಿ ಸನ್ಮಾನಿಸಲಾಗಿತ್ತು. ಈ ಬಾರಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಈ ಬಾರಿಯೂ ₹1,000 ನಗದು, ಸ್ಮರಣಿಕೆ ನೀಡಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು? ಎನ್ನುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು. ಈ ಹಂತದಲ್ಲಿಯೇ ಐಎಎಸ್, ಐಪಿಎಸ್ನಂತಹ ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಆಸಕ್ತಿ ಬೆಳೆಸುವ ಹಾಗೂ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಆಗಮಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಈಗಾಗಲೇ 120 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಸಂಖ್ಯೆ 400ಕ್ಕೆ ಹೆಚ್ಚುವ ಅಂದಾಜಿದೆ. ಜೂನ್ 15ರೊಳಗಾಗಿ ವಿದ್ಯಾರ್ಥಿಗಳು ತಮ್ಮ ಹೆಸರು, ಪೋಷಕರ ಹೆಸರು, ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ಈ ಕೆಳಕಂಡವರನ್ನು ಸಂಪರ್ಕಿಸಬಹುದು’ ಎಂದು ಮನವಿ ಮಾಡಿದರು.</p>.<p>ರಾಜು ಕಣಗಣ್ಣಾರ್ ಮೊ: 8073362266, ಪಂಕಜಾಕ್ಷಿ 9886628687, ನಾಗೇಶ್ ಗಂಜಿನಹಳ್ಳಿ 7892229504, ಸಂದೀಪ್ ನ್ಯಾಮತಿ 8095446750, ಕರೀಂ ಸಾಸ್ವೆಹಳ್ಳಿ 8197069136, ಅಯ್ಯಣ್ಣ 9353460054.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-43-1787339965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>