<p>ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಕ್ಕೆ ಖುಷಿಯಾಗಿದೆ. ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದೇನೆ ಎಂದು ನಗರದ ಚೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಪಾಟೀಲ ಹೇಳಿದಳು.</p>.<p>‘ಶಿಕ್ಷಕರು, ತಂದೆ ತಾಯಿಯ ಮಾರ್ಗದರ್ಶನದಿಂದ ಹೆಚ್ಚು ಅಂಕ ಗಳಿಸಲು ಸಾಧ್ಯವಾಯಿತು. ಪರೀಕ್ಷೆಗೆ ವಿಶೇಷ ಸಿದ್ಧತೆ ಮಾಡಿಕೊಂಡಿರಲಿಲ್ಲ. ದಿನಕ್ಕೆ ಐದಾರು ಗಂಟೆ ಓದುತ್ತಿದ್ದೆ. ಓದಿದ್ದನ್ನು ಮನನ ಮಾಡಿಕೊಳ್ಳಲು ಹೆಚ್ಚು ಒತ್ತು ಕೊಡುತ್ತಿದ್ದೆ. ಗೊಂದಲವಾದಾಗ ತಕ್ಷಣ ಪರಿಹರಿಸಿಕೊಳ್ಳುತ್ತಿದ್ದೆ. ಟ್ಯೂಷನ್ಗೆ ಹೋಗಿಲ್ಲ’ ಎಂದು ಅಪೇಕ್ಷಾ ಹೇಳಿದಳು.</p>.<p>ಗಣಿತ ಮತ್ತು ವಿಜ್ಞಾನ ನನ್ನ ಇಷ್ಟದ ವಿಷಯಗಳಾಗಿದ್ದವು. ಅವುಗಳಲ್ಲಿ ಉತ್ತಮ ಅಂಕಗಳು ಬಂದಿವೆ. ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡಿಸಿದ್ದರಿಂದಲೂ ಅನುಕೂಲವಾಯಿತು ಎಂದಳು.</p>.<p>ಅಪೇಕ್ಷಾಳ ತಂದೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಸಿದ್ಧಾರೂಢ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದು, ತಾಯಿ ಗೃಹಿಣಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-24-1282496739</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಕ್ಕೆ ಖುಷಿಯಾಗಿದೆ. ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದೇನೆ ಎಂದು ನಗರದ ಚೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಪಾಟೀಲ ಹೇಳಿದಳು.</p>.<p>‘ಶಿಕ್ಷಕರು, ತಂದೆ ತಾಯಿಯ ಮಾರ್ಗದರ್ಶನದಿಂದ ಹೆಚ್ಚು ಅಂಕ ಗಳಿಸಲು ಸಾಧ್ಯವಾಯಿತು. ಪರೀಕ್ಷೆಗೆ ವಿಶೇಷ ಸಿದ್ಧತೆ ಮಾಡಿಕೊಂಡಿರಲಿಲ್ಲ. ದಿನಕ್ಕೆ ಐದಾರು ಗಂಟೆ ಓದುತ್ತಿದ್ದೆ. ಓದಿದ್ದನ್ನು ಮನನ ಮಾಡಿಕೊಳ್ಳಲು ಹೆಚ್ಚು ಒತ್ತು ಕೊಡುತ್ತಿದ್ದೆ. ಗೊಂದಲವಾದಾಗ ತಕ್ಷಣ ಪರಿಹರಿಸಿಕೊಳ್ಳುತ್ತಿದ್ದೆ. ಟ್ಯೂಷನ್ಗೆ ಹೋಗಿಲ್ಲ’ ಎಂದು ಅಪೇಕ್ಷಾ ಹೇಳಿದಳು.</p>.<p>ಗಣಿತ ಮತ್ತು ವಿಜ್ಞಾನ ನನ್ನ ಇಷ್ಟದ ವಿಷಯಗಳಾಗಿದ್ದವು. ಅವುಗಳಲ್ಲಿ ಉತ್ತಮ ಅಂಕಗಳು ಬಂದಿವೆ. ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡಿಸಿದ್ದರಿಂದಲೂ ಅನುಕೂಲವಾಯಿತು ಎಂದಳು.</p>.<p>ಅಪೇಕ್ಷಾಳ ತಂದೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಸಿದ್ಧಾರೂಢ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದು, ತಾಯಿ ಗೃಹಿಣಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-24-1282496739</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>