<p>ಕಾಳಗಿ: ‘2025-26ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 95ರಷ್ಟು ಫಲಿತಾಂಶ ಸಾಧಿಸಿದ್ದು, ಪ್ರಸಕ್ತ ವರ್ಷ ಶೇ 100ರಷ್ಟು ಫಲಿತಾಂಶಕ್ಕೆ ಪ್ರಯತ್ನ ಮಾಡಲಾಗುವುದು’ ಎಂದು ಇಲ್ಲಿನ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕ ಮಹೇಶಕುಮಾರ ಬಡಿಗೇರ ಹೇಳಿದರು.</p>.<p>ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಶಿಕ್ಷಕರ ಪರಿಶ್ರಮ, ಎಸ್ಡಿಎಂಸಿ ಅವರ ಸಹಕಾರದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಈ ಬಾರಿಯೂ ಅದೇ ದಾರಿಯಲ್ಲಿ ಹೆಚ್ಚು ಪ್ರಯತ್ನಿಸಲಾಗುವುದು’ ಎಂದರು.</p>.<p>ಎಸ್ಡಿಎಂಸಿ ಸದಸ್ಯೆ ಶಿವಲೀಲಾ ಅಷ್ಟಗಿ ಮಾತನಾಡಿ ‘ವಿದ್ಯಾರ್ಥಿಗಳ ಉನ್ನತಿಗೆ ಎಸ್ಸೆಸ್ಸೆಲ್ಸಿ ತಿರುವಿನ ಹಂತವಾಗಿದೆ. ಪೋಷಕರು ಮಕ್ಕಳ ಕಾಳಜಿಯತ್ತ ಹೆಚ್ಚು ಗಮನಹರಿಸಿ ಅವರ ಉತ್ತಮ ಭವಿಷ್ಯದ ರಚನೆಗೆ ಕೈ ಜೋಡಿಸಬೇಕು’ ಎಂದರು.</p>.<p>ಶಿಕ್ಷಕ ಶಿವಕುಮಾರ ಶಾಸ್ತ್ರಿ ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಗುಂಡಪ್ಪ ಕರೆಮನೋರ, ಸದಸ್ಯ ಅಮೃತ ನರನಾಳ ವೇದಿಕೆಯಲ್ಲಿದ್ದರು. ಶಿಕ್ಷಕ ಸೋಮು ಕುಂಬಾರ ನಿರೂಪಿಸಿದರು.</p>.<p>ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲಾಯಿತು. ಇದಕ್ಕೂ ಮುಂಚೆ ಎಲ್ಲ ಮಕ್ಕಳಿಗೆ ದ್ವಾರಬಾಗಿಲದೊಳಗೆ ಗುಲಾಬಿ ಹೂವು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರದಲ್ಲಿ ಸಿಹಿ ಊಟ ಬಡಿಸಲಾಯಿತು.</p>.<p>ಶಿಕ್ಷಕ ಚಂದ್ರಕಾಂತ ಗೊಣಗಿಮಠ, ಭಗವಾನ ಕಟಕೆ, ಸುನಿತಾ ಚವಾಣ, ಝರೀನಾ ಜಬೀನ್, ಶಾಹೀನ್, ನಿಖತ್ ತಬಸುಮ್, ರೆಹನಾಬೇಗಂ, ಸಫಿಯಾಬೇಗಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-31-1978421871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಳಗಿ: ‘2025-26ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 95ರಷ್ಟು ಫಲಿತಾಂಶ ಸಾಧಿಸಿದ್ದು, ಪ್ರಸಕ್ತ ವರ್ಷ ಶೇ 100ರಷ್ಟು ಫಲಿತಾಂಶಕ್ಕೆ ಪ್ರಯತ್ನ ಮಾಡಲಾಗುವುದು’ ಎಂದು ಇಲ್ಲಿನ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕ ಮಹೇಶಕುಮಾರ ಬಡಿಗೇರ ಹೇಳಿದರು.</p>.<p>ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಶಿಕ್ಷಕರ ಪರಿಶ್ರಮ, ಎಸ್ಡಿಎಂಸಿ ಅವರ ಸಹಕಾರದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ. ಈ ಬಾರಿಯೂ ಅದೇ ದಾರಿಯಲ್ಲಿ ಹೆಚ್ಚು ಪ್ರಯತ್ನಿಸಲಾಗುವುದು’ ಎಂದರು.</p>.<p>ಎಸ್ಡಿಎಂಸಿ ಸದಸ್ಯೆ ಶಿವಲೀಲಾ ಅಷ್ಟಗಿ ಮಾತನಾಡಿ ‘ವಿದ್ಯಾರ್ಥಿಗಳ ಉನ್ನತಿಗೆ ಎಸ್ಸೆಸ್ಸೆಲ್ಸಿ ತಿರುವಿನ ಹಂತವಾಗಿದೆ. ಪೋಷಕರು ಮಕ್ಕಳ ಕಾಳಜಿಯತ್ತ ಹೆಚ್ಚು ಗಮನಹರಿಸಿ ಅವರ ಉತ್ತಮ ಭವಿಷ್ಯದ ರಚನೆಗೆ ಕೈ ಜೋಡಿಸಬೇಕು’ ಎಂದರು.</p>.<p>ಶಿಕ್ಷಕ ಶಿವಕುಮಾರ ಶಾಸ್ತ್ರಿ ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಗುಂಡಪ್ಪ ಕರೆಮನೋರ, ಸದಸ್ಯ ಅಮೃತ ನರನಾಳ ವೇದಿಕೆಯಲ್ಲಿದ್ದರು. ಶಿಕ್ಷಕ ಸೋಮು ಕುಂಬಾರ ನಿರೂಪಿಸಿದರು.</p>.<p>ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆ ಮಾಡಲಾಯಿತು. ಇದಕ್ಕೂ ಮುಂಚೆ ಎಲ್ಲ ಮಕ್ಕಳಿಗೆ ದ್ವಾರಬಾಗಿಲದೊಳಗೆ ಗುಲಾಬಿ ಹೂವು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರದಲ್ಲಿ ಸಿಹಿ ಊಟ ಬಡಿಸಲಾಯಿತು.</p>.<p>ಶಿಕ್ಷಕ ಚಂದ್ರಕಾಂತ ಗೊಣಗಿಮಠ, ಭಗವಾನ ಕಟಕೆ, ಸುನಿತಾ ಚವಾಣ, ಝರೀನಾ ಜಬೀನ್, ಶಾಹೀನ್, ನಿಖತ್ ತಬಸುಮ್, ರೆಹನಾಬೇಗಂ, ಸಫಿಯಾಬೇಗಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-31-1978421871</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>