<p>ಕಾರ್ಗಲ್: ಭಾರಂಗಿ ಹೋಬಳಿಯ ಕಾರ್ಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗಡಿ ಭಾಗದ ನಾಗವಳ್ಳಿ, ಕೋಗಾರು, ಭಾನುಕುಳಿ, ಚನ್ನಗೊಂಡ ಪ್ರದೇಶದ ವಿದ್ಯಾರ್ಥಿಗಳು ಬರುತ್ತಾರೆ.</p>.<p>ಇವರೂ ಸೇರಿದಂತೆ ಒಟ್ಟು 35 ವಿದ್ಯಾರ್ಥಿಗಳಿಗೆ ಜೋಗ–ಕಾರ್ಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಕೆ.ಸುರೇಶ್ ಅವರು ಸ್ವಂತ ಖರ್ಚಿನಿಂದ ಪ್ರತಿನಿತ್ಯ ಬಾದಾಮಿ ಹಾಲು, ಬ್ರೆಡ್ ವಿತರಿಸುತ್ತಿದ್ದಾರೆ.</p>.<p>‘ಹಳ್ಳಿ ಭಾಗದ ವಿದ್ಯಾರ್ಥಿಗಳ ಕಷ್ಟದ ಅರಿವು ಇದೆ. ಹೀಗಾಗಿ ಈ ಕೆಲಸಕ್ಕೆ ಮುಂದಾಗಿದ್ದು, ಸರ್ಕಾರಿ ಸೇವೆಯ ಜೊತೆಗೆ ಸಾಮಾಜಿಕವಾಗಿ ತೊಡಗಿಕೊಳ್ಳಲು ಇದೊಂದು ಅವಕಾಶವಾಗಿದೆ. ಈ ಕಾರ್ಯಕ್ಕೆ ವಾಹನ ಚಾಲಕ ಬಸವರಾಜ್ ಕೂಡ ಕೈಜೋಡಿಸಿದ್ದಾರೆ’ ಎಂದು ಎಂ.ಕೆ. ಸುರೇಶ್ ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-42-1560282687</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರ್ಗಲ್: ಭಾರಂಗಿ ಹೋಬಳಿಯ ಕಾರ್ಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗಡಿ ಭಾಗದ ನಾಗವಳ್ಳಿ, ಕೋಗಾರು, ಭಾನುಕುಳಿ, ಚನ್ನಗೊಂಡ ಪ್ರದೇಶದ ವಿದ್ಯಾರ್ಥಿಗಳು ಬರುತ್ತಾರೆ.</p>.<p>ಇವರೂ ಸೇರಿದಂತೆ ಒಟ್ಟು 35 ವಿದ್ಯಾರ್ಥಿಗಳಿಗೆ ಜೋಗ–ಕಾರ್ಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಕೆ.ಸುರೇಶ್ ಅವರು ಸ್ವಂತ ಖರ್ಚಿನಿಂದ ಪ್ರತಿನಿತ್ಯ ಬಾದಾಮಿ ಹಾಲು, ಬ್ರೆಡ್ ವಿತರಿಸುತ್ತಿದ್ದಾರೆ.</p>.<p>‘ಹಳ್ಳಿ ಭಾಗದ ವಿದ್ಯಾರ್ಥಿಗಳ ಕಷ್ಟದ ಅರಿವು ಇದೆ. ಹೀಗಾಗಿ ಈ ಕೆಲಸಕ್ಕೆ ಮುಂದಾಗಿದ್ದು, ಸರ್ಕಾರಿ ಸೇವೆಯ ಜೊತೆಗೆ ಸಾಮಾಜಿಕವಾಗಿ ತೊಡಗಿಕೊಳ್ಳಲು ಇದೊಂದು ಅವಕಾಶವಾಗಿದೆ. ಈ ಕಾರ್ಯಕ್ಕೆ ವಾಹನ ಚಾಲಕ ಬಸವರಾಜ್ ಕೂಡ ಕೈಜೋಡಿಸಿದ್ದಾರೆ’ ಎಂದು ಎಂ.ಕೆ. ಸುರೇಶ್ ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-42-1560282687</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>