<p>ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮದ ಹೋಲಿ ಕ್ರಾಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿವ್ಯಾ ಪ್ರದೀಪ ದೇಸಾಯಿ ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ.</p>.<p>ಪರೀಕ್ಷೆಯ ಫಲಿತಾಂಶ ಬಂದಾಗ ದಿವ್ಯಾಳಿಗೆ 624 ಅಂಕಗಳು ಲಭಿಸಿದ್ದವು. ಇಂಗ್ಲಿಷ್ ವಿಷಯದಲ್ಲಿ ಈಕೆಗೆ 124 ಅಂಕಗಳನ್ನು ನೀಡಲಾಗಿತ್ತು. ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿದ್ದ ಎಲ್ಲ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದರೂ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ದಿವ್ಯಾ ಈ ವಿಷಯವನ್ನು ಶಾಸಕ ವಿಠ್ಠಲ ಹಲಗೇಕರ, ಬಿಇಒ ರಾಮಪ್ಪ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಅಲ್ಮೇಡಾ ಅವರ ಗಮನಕ್ಕೆ ತಂದಿದ್ದರು.</p>.<p>ಬಳಿಕ ಶಾಸಕ ಹಲಗೇಕರ ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳಿಗೆ ಈ ಸಂಗತಿ ಮುಟ್ಟಿಸಿದ್ದರು. ಇದೇ ಸಂದರ್ಭದಲ್ಲಿ ದಿವ್ಯಾ ಶಾಸಕರು ಮತ್ತು ಬಿಇಒ ಅವರ ಸಲಹೆಯಂತೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರುಮೌಲ್ಯಮಾಪನದಲ್ಲಿ ದಿವ್ಯಾಳಿಗೆ ನ್ಯಾಯ ಸಿಕ್ಕಿದೆ ಎಂದು ಶಾಸಕ ಹಲಗೇಕರ ಹಾಗೂ ಬಿಇಒ ರಾಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-21-1954247983</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖಾನಾಪುರ: ತಾಲ್ಲೂಕಿನ ಬೀಡಿ ಗ್ರಾಮದ ಹೋಲಿ ಕ್ರಾಸ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿವ್ಯಾ ಪ್ರದೀಪ ದೇಸಾಯಿ ಎಸ್ಎಸ್ಎಲ್ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ.</p>.<p>ಪರೀಕ್ಷೆಯ ಫಲಿತಾಂಶ ಬಂದಾಗ ದಿವ್ಯಾಳಿಗೆ 624 ಅಂಕಗಳು ಲಭಿಸಿದ್ದವು. ಇಂಗ್ಲಿಷ್ ವಿಷಯದಲ್ಲಿ ಈಕೆಗೆ 124 ಅಂಕಗಳನ್ನು ನೀಡಲಾಗಿತ್ತು. ಇಂಗ್ಲಿಷ್ ಪ್ರಶ್ನೆ ಪತ್ರಿಕೆಯಲ್ಲಿದ್ದ ಎಲ್ಲ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದರೂ ತನಗೆ ಒಂದು ಅಂಕ ಕಡಿಮೆ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ದಿವ್ಯಾ ಈ ವಿಷಯವನ್ನು ಶಾಸಕ ವಿಠ್ಠಲ ಹಲಗೇಕರ, ಬಿಇಒ ರಾಮಪ್ಪ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಅಲ್ಮೇಡಾ ಅವರ ಗಮನಕ್ಕೆ ತಂದಿದ್ದರು.</p>.<p>ಬಳಿಕ ಶಾಸಕ ಹಲಗೇಕರ ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳಿಗೆ ಈ ಸಂಗತಿ ಮುಟ್ಟಿಸಿದ್ದರು. ಇದೇ ಸಂದರ್ಭದಲ್ಲಿ ದಿವ್ಯಾ ಶಾಸಕರು ಮತ್ತು ಬಿಇಒ ಅವರ ಸಲಹೆಯಂತೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರುಮೌಲ್ಯಮಾಪನದಲ್ಲಿ ದಿವ್ಯಾಳಿಗೆ ನ್ಯಾಯ ಸಿಕ್ಕಿದೆ ಎಂದು ಶಾಸಕ ಹಲಗೇಕರ ಹಾಗೂ ಬಿಇಒ ರಾಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-21-1954247983</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>