<p>ಮಡಿಕೇರಿ: ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳಿಗೆ ಸಾಧನ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 22ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>‘ಶಾಸಕ ಡಾ.ಮಂತರ್ಗೌಡ ಕಾರ್ಯಕ್ರಮ ಉದ್ಘಾಟಿಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಪೆರಿಗ್ರಿನ್ ಎಸ್.ಮಚಾಡೊ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ.ರಂಗಸ್ವಾಮಿ’ ಭಾಗವಹಿಸಲಿದ್ದಾರೆ ಎಂದು ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‘</p>.<p>ಕಳೆದ 14 ವರ್ಷಗಳ ಹಿಂದೆ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ ನೀಡಿದೆವು. ಆನಂತರ ಪೂರ್ಣಾಂಕ ಪಡೆಯುವ ವಿದ್ಯಾರ್ಥಿಗಳು ಹೆಚ್ಚಾದರು. ಈಗ ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಲಾಗುತ್ತಿದೆ ಎಂದರು.</p>.<p>ಶಾಲೆಗಳ ಮುಖ್ಯಶಿಕ್ಷಕರು ಅಥವಾ ಶಾಲೆಯಿಂದ ಬರುವ ಪ್ರತಿನಿಧಿಗೆ ಸನ್ಮಾನ ಮಾಡಲಾಗುವುದು. ಜೊತೆಗೆ, 2 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ವಿತರಿಸಲಾಗುವುದು ಎಂದರು.</p>.<p>ಕನ್ನಡ ಭಾಷೆ, ಸಾಹಿತ್ಯಕ್ಕಾಗಿ ಕನ್ನಡ ಸಿರಿ ಸ್ನೇಹ ಬಳಗ ಅವಿರತವಾಗಿ ದುಡಿಯುತ್ತಿದೆ. ಹಲವು ಕಾರ್ಯಕ್ರಮಗಳನ್ನು ಈ ಸಂಬಂಧ ಆಯೋಜಿಸಲಾಗಿದೆ. ಅದರ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಕೆ.ಎಸ್.ರಮೇಶ್, ಧನಂಜಯ, ನಾಗರಾಜಶೆಟ್ಟಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-156302745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಕೊಡಗು ಜಿಲ್ಲೆಯ ಪ್ರೌಢಶಾಲೆಗಳಿಗೆ ಸಾಧನ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 22ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಲಿದೆ.</p>.<p>‘ಶಾಸಕ ಡಾ.ಮಂತರ್ಗೌಡ ಕಾರ್ಯಕ್ರಮ ಉದ್ಘಾಟಿಲಿದ್ದಾರೆ. ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಪೆರಿಗ್ರಿನ್ ಎಸ್.ಮಚಾಡೊ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಎಂ.ಡಿ.ರಂಗಸ್ವಾಮಿ’ ಭಾಗವಹಿಸಲಿದ್ದಾರೆ ಎಂದು ಬಳಗದ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‘</p>.<p>ಕಳೆದ 14 ವರ್ಷಗಳ ಹಿಂದೆ ಕನ್ನಡ ವಿಷಯದಲ್ಲಿ ಪೂರ್ಣಾಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ ನೀಡಿದೆವು. ಆನಂತರ ಪೂರ್ಣಾಂಕ ಪಡೆಯುವ ವಿದ್ಯಾರ್ಥಿಗಳು ಹೆಚ್ಚಾದರು. ಈಗ ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳನ್ನು ಅಭಿನಂದಿಸಲಾಗುತ್ತಿದೆ ಎಂದರು.</p>.<p>ಶಾಲೆಗಳ ಮುಖ್ಯಶಿಕ್ಷಕರು ಅಥವಾ ಶಾಲೆಯಿಂದ ಬರುವ ಪ್ರತಿನಿಧಿಗೆ ಸನ್ಮಾನ ಮಾಡಲಾಗುವುದು. ಜೊತೆಗೆ, 2 ಸಾವಿರಕ್ಕೂ ಅಧಿಕ ಪುಸ್ತಕಗಳನ್ನು ವಿತರಿಸಲಾಗುವುದು ಎಂದರು.</p>.<p>ಕನ್ನಡ ಭಾಷೆ, ಸಾಹಿತ್ಯಕ್ಕಾಗಿ ಕನ್ನಡ ಸಿರಿ ಸ್ನೇಹ ಬಳಗ ಅವಿರತವಾಗಿ ದುಡಿಯುತ್ತಿದೆ. ಹಲವು ಕಾರ್ಯಕ್ರಮಗಳನ್ನು ಈ ಸಂಬಂಧ ಆಯೋಜಿಸಲಾಗಿದೆ. ಅದರ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.</p>.<p>ಮುಖಂಡರಾದ ಕೆ.ಎಸ್.ರಮೇಶ್, ಧನಂಜಯ, ನಾಗರಾಜಶೆಟ್ಟಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-156302745</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>