<p>ಬೇತಮಂಗಲ: ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹದೇವಪುರ ಹಾಗೂ ಕೆರೆಮಿಂಡಹಳ್ಳಿಯ ಸಾಧಕ ವಿದ್ಯಾರ್ಥಿಗಳನ್ನು ಮಹದೇವಪುರದಲ್ಲಿ ಮುಖಂಡ ವಿ.ಮೋಹನ್ ಕೃಷ್ಣ ಅವರು ಸತ್ಕರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಕೆಜಿಎಫ್ ತಾಲ್ಲೂಕಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದರೆ ₹50 ಸಾವಿರ ಬಹುಮಾನ ನೀಡುವುದಾಗಿ ನೀಡಿದ್ದ ಭರವಸೆಯಂತೆ 621 ಅಂಕ ಗಳಿಸಿರುವ ಬೇತಮಂಗಲದ ವಿದ್ಯಾರ್ಥಿನಿ ಹಾರಿಕಾ ರೆಡ್ಡಿಗೆ ಅವರಿಗೆ ನೀಡುವುದಾಗಿ ಘೋಷಿಸಿದರು.</p>.<p>ಮುಂದಿನ ದಿನಗಳಲ್ಲಿ ಪಿಯು ಹಂತದಲ್ಲೂ ಇದೇ ರೀತಿಯ ಸಾಧನೆ ಮಾಡಿ, ಉತ್ತಮ ಅಧಿಕಾರಿಗಳಾಗಿ ದೇಶದ ಸತ್ಪ್ರಜೆಗಳಾಗಿ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗಿರೆಡ್ಡಿ, ಲಕ್ಷ್ಮಮ್ಮ, ಗುತ್ತಿಗೆದಾರ ಕೃಷ್ಣಪ್ಪ, ಶುಗರ್ ಕೃಷ್ಣಪ್ಪ, ಕಿಟ್ಟಪ್ಪ, ಆನಂದ್ ರೆಡ್ಡಿ, ಶ್ರೀನಾಥ್, ಕಾರ್ತಿಕ್, ಗೋವಿಂದಪ್ಪ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-18-2112213395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹದೇವಪುರ ಹಾಗೂ ಕೆರೆಮಿಂಡಹಳ್ಳಿಯ ಸಾಧಕ ವಿದ್ಯಾರ್ಥಿಗಳನ್ನು ಮಹದೇವಪುರದಲ್ಲಿ ಮುಖಂಡ ವಿ.ಮೋಹನ್ ಕೃಷ್ಣ ಅವರು ಸತ್ಕರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ಕೆಜಿಎಫ್ ತಾಲ್ಲೂಕಿನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದರೆ ₹50 ಸಾವಿರ ಬಹುಮಾನ ನೀಡುವುದಾಗಿ ನೀಡಿದ್ದ ಭರವಸೆಯಂತೆ 621 ಅಂಕ ಗಳಿಸಿರುವ ಬೇತಮಂಗಲದ ವಿದ್ಯಾರ್ಥಿನಿ ಹಾರಿಕಾ ರೆಡ್ಡಿಗೆ ಅವರಿಗೆ ನೀಡುವುದಾಗಿ ಘೋಷಿಸಿದರು.</p>.<p>ಮುಂದಿನ ದಿನಗಳಲ್ಲಿ ಪಿಯು ಹಂತದಲ್ಲೂ ಇದೇ ರೀತಿಯ ಸಾಧನೆ ಮಾಡಿ, ಉತ್ತಮ ಅಧಿಕಾರಿಗಳಾಗಿ ದೇಶದ ಸತ್ಪ್ರಜೆಗಳಾಗಿ ಎಂದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗಿರೆಡ್ಡಿ, ಲಕ್ಷ್ಮಮ್ಮ, ಗುತ್ತಿಗೆದಾರ ಕೃಷ್ಣಪ್ಪ, ಶುಗರ್ ಕೃಷ್ಣಪ್ಪ, ಕಿಟ್ಟಪ್ಪ, ಆನಂದ್ ರೆಡ್ಡಿ, ಶ್ರೀನಾಥ್, ಕಾರ್ತಿಕ್, ಗೋವಿಂದಪ್ಪ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-18-2112213395</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>