<p>ಕೋಲಾರ: ಎಸ್ಎಸ್ಎಲ್ಸಿ ತೃತೀಯ ಭಾಷೆ (ಹಿಂದಿ) ವಿಷಯದ ವಾರ್ಷಿಕ ಪರೀಕ್ಷೆ ಮಂಗಳವಾರ ನಡೆದಿದ್ದು, 203 ವಿದ್ಯಾರ್ಥಿಗಳು ಗೈರಾಗಿದ್ದರು. ಶೇ 98.92 ಹಾಜರಾತಿಯೊಂದಿಗೆ ಐದನೇ ಪರೀಕ್ಷೆಯೂ ಸುಗಮಮವಾಗಿ ನಡೆದಿದೆ.</p>.<p>ತೇರ್ಗಡೆಗೆ ತೃತೀಯ ಭಾಷೆಯ ಅಂಕ ಮಾನದಂಡವಲ್ಲ ಎಂದು ರಾಜ್ಯ ಸರ್ಕಾರ ಈಚೆಗೆ ಘೋಷಿಸಿದೆ.</p>.<p>ಜಿಲ್ಲೆಯ 65 ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ಪರೀಕ್ಷೆಗೆ 18,768 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 18,565 ಮಂದಿ ಹಾಜರಾಗಿದ್ದರು.</p>.<p>ಪರೀಕ್ಷೆಯು ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಯಾವುದೇ ಅವ್ಯವಹಾರ ವರದಿ ಆಗಿಲ್ಲ ಎಂದು ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾ, ವೆಬ್ ಕ್ಯಾಸ್ಟಿಂಗ್ ಕಣ್ಗಾವಲಿನಲ್ಲಿ ನಡೆಯುತ್ತಿರುವ 4ನೇ ವರ್ಷದ ಪರೀಕ್ಷೆ ಇದಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರಿಗಳು ವೀಕ್ಷಣೆಯಲ್ಲಿ ತೊಡಗಿದ್ದರು.</p>.<p>ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ತೃತೀಯ ಭಾಷೆ ವಿಷಯಕ್ಕೆ 2,476 ಮಂದಿ ನೋಂದಾಯಿಸಿದ್ದು, 20 ಮಂದಿ ಗೈರಾಗಿದ್ದರು. ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3,231 ಮಕ್ಕಳು ಹೆಸರು ನೋಂದಾಯಿಸಿದ್ದು, 36 ಮಂದಿ ಬಂದಿರಲಿಲ್ಲ.</p>.<p>ಕೋಲಾರ ತಾಲ್ಲೂಕಿನ 18 ಕೇಂದ್ರಗಳಲ್ಲಿ 4,764 ಮಂದಿ ಹೆಸರು ನೋಂದಾಯಿಸಿದ್ದು, 41 ಮಂದಿ ಗೈರಾಗಿದ್ದರು. ಮಾಲೂರು ತಾಲ್ಲೂಕಿನ 8 ಕೇಂದ್ರಗಳಲ್ಲಿ 2,941 ಮಂದಿ ಹೆಸರು ನೋಂದಾಯಿಸಿದ್ದು, 31 ಮಂದಿ ಬಂದಿರಲಿಲ್ಲ.</p>.<p>ಮುಳಬಾಗಿಲು ತಾಲ್ಲೂಕಿನ 12 ಕೇಂದ್ರಗಳಲ್ಲಿ 2,804 ಮಂದಿ ನೋಂದಾಯಿಸಿದ್ದು, 54 ಮಂದಿ ಗೈರಾಗಿದ್ದರು. ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2,552 ಮಂದಿ ಹೆಸರು ನೋಂದಾಯಿಸಿದ್ದು, 21 ಮಂದಿ ಬಂದಿರಲಿಲ್ಲ.</p>.<p>ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳದವರು ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿರ್ಬಂಧ ವಿಧಿಸಲಾಗಿತ್ತು.</p>.<p>ಏ.2ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಅದು ಎಸ್ಎಸ್ಎಲ್ಸಿ–1ರ ಕೊನೆಯ ಪರೀಕ್ಷೆ ಆಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-18-720725085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಎಸ್ಎಸ್ಎಲ್ಸಿ ತೃತೀಯ ಭಾಷೆ (ಹಿಂದಿ) ವಿಷಯದ ವಾರ್ಷಿಕ ಪರೀಕ್ಷೆ ಮಂಗಳವಾರ ನಡೆದಿದ್ದು, 203 ವಿದ್ಯಾರ್ಥಿಗಳು ಗೈರಾಗಿದ್ದರು. ಶೇ 98.92 ಹಾಜರಾತಿಯೊಂದಿಗೆ ಐದನೇ ಪರೀಕ್ಷೆಯೂ ಸುಗಮಮವಾಗಿ ನಡೆದಿದೆ.</p>.<p>ತೇರ್ಗಡೆಗೆ ತೃತೀಯ ಭಾಷೆಯ ಅಂಕ ಮಾನದಂಡವಲ್ಲ ಎಂದು ರಾಜ್ಯ ಸರ್ಕಾರ ಈಚೆಗೆ ಘೋಷಿಸಿದೆ.</p>.<p>ಜಿಲ್ಲೆಯ 65 ಕೇಂದ್ರಗಳಲ್ಲಿ ನಡೆದ ತೃತೀಯ ಭಾಷೆ ಪರೀಕ್ಷೆಗೆ 18,768 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ 18,565 ಮಂದಿ ಹಾಜರಾಗಿದ್ದರು.</p>.<p>ಪರೀಕ್ಷೆಯು ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಯಾವುದೇ ಅವ್ಯವಹಾರ ವರದಿ ಆಗಿಲ್ಲ ಎಂದು ಡಿಡಿಪಿಐ ಅಲ್ಮಾಸ್ ಪರ್ವೀನ್ ತಾಜ್ ತಿಳಿಸಿದರು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾ, ವೆಬ್ ಕ್ಯಾಸ್ಟಿಂಗ್ ಕಣ್ಗಾವಲಿನಲ್ಲಿ ನಡೆಯುತ್ತಿರುವ 4ನೇ ವರ್ಷದ ಪರೀಕ್ಷೆ ಇದಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರಿಗಳು ವೀಕ್ಷಣೆಯಲ್ಲಿ ತೊಡಗಿದ್ದರು.</p>.<p>ಬಂಗಾರಪೇಟೆ ತಾಲ್ಲೂಕಿನ 8 ಕೇಂದ್ರಗಳಲ್ಲಿ ತೃತೀಯ ಭಾಷೆ ವಿಷಯಕ್ಕೆ 2,476 ಮಂದಿ ನೋಂದಾಯಿಸಿದ್ದು, 20 ಮಂದಿ ಗೈರಾಗಿದ್ದರು. ಕೆಜಿಎಫ್ ತಾಲ್ಲೂಕಿನ 9 ಕೇಂದ್ರಗಳಲ್ಲಿ 3,231 ಮಕ್ಕಳು ಹೆಸರು ನೋಂದಾಯಿಸಿದ್ದು, 36 ಮಂದಿ ಬಂದಿರಲಿಲ್ಲ.</p>.<p>ಕೋಲಾರ ತಾಲ್ಲೂಕಿನ 18 ಕೇಂದ್ರಗಳಲ್ಲಿ 4,764 ಮಂದಿ ಹೆಸರು ನೋಂದಾಯಿಸಿದ್ದು, 41 ಮಂದಿ ಗೈರಾಗಿದ್ದರು. ಮಾಲೂರು ತಾಲ್ಲೂಕಿನ 8 ಕೇಂದ್ರಗಳಲ್ಲಿ 2,941 ಮಂದಿ ಹೆಸರು ನೋಂದಾಯಿಸಿದ್ದು, 31 ಮಂದಿ ಬಂದಿರಲಿಲ್ಲ.</p>.<p>ಮುಳಬಾಗಿಲು ತಾಲ್ಲೂಕಿನ 12 ಕೇಂದ್ರಗಳಲ್ಲಿ 2,804 ಮಂದಿ ನೋಂದಾಯಿಸಿದ್ದು, 54 ಮಂದಿ ಗೈರಾಗಿದ್ದರು. ಶ್ರೀನಿವಾಸಪುರ ತಾಲ್ಲೂಕಿನ 10 ಕೇಂದ್ರಗಳಲ್ಲಿ 2,552 ಮಂದಿ ಹೆಸರು ನೋಂದಾಯಿಸಿದ್ದು, 21 ಮಂದಿ ಬಂದಿರಲಿಲ್ಲ.</p>.<p>ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು, ರಾಜ್ಯ ಜಾಗೃತದಳದವರು ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ವರೆಗೆ ನಿರ್ಬಂಧ ವಿಧಿಸಲಾಗಿತ್ತು.</p>.<p>ಏ.2ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಅದು ಎಸ್ಎಸ್ಎಲ್ಸಿ–1ರ ಕೊನೆಯ ಪರೀಕ್ಷೆ ಆಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-18-720725085</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>