<p>ಕೋಲಾರ: ರಸ್ತೆ ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯವಾದ ಕಾರಣ ಸ್ಟ್ರೆಚರ್ನಲ್ಲಿ ಬಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಕೆಜಿಎಫ್ ತಾಲ್ಲೂಕಿನ ಚೆನ್ನಾಗನಹಳ್ಳಿಯ ವಿದ್ಯಾರ್ಥಿನಿ ಎಸ್.ಕುಸುಮಾ ಇದೀಗ ಮತ್ತೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಆ್ಯಂಡರ್ಸನ್ಪೇಟೆಯ ಸೇಂಟ್ ಮೇರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ನೆರವಿಗೆ ಧಾವಿಸಿರುವ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ‘ತಂದೆ ಶಂಕರಪ್ಪ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ಮಗಳ ಚಿಕಿತ್ಸೆಯ ಬಿಲ್ ಪಾವತಿಸಲು ಕಿಡ್ನಿ ಮಾರಾಟ ಮಾಡಲು ಮುಂದಾಗಿರುವ ವಿಚಾರ ತಿಳಿದು ಕಸಿವಿಸಿಯಾಯಿತು’ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.</p>.<p>ಆಸ್ಪತ್ರೆ ಆಡಳಿತ ಮಂಡಳಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಆಯುಕ್ತ, ಸಂಸದ ಪಿ.ಸಿ.ಮೋಹನ್ ಹಾಗೂ ಮುಖ್ಯಮಂತ್ರಿ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಜೊತೆ ಮಾತನಾಡಿ, ವಿದ್ಯಾರ್ಥಿನಿಗೆ ಚಿಕಿತ್ಸೆ ವೆಚ್ಚ ಕೊಡಿಸುವ ಭರವಸೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-18-134169427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ರಸ್ತೆ ಅಪಘಾತದಲ್ಲಿ ಕಾಲಿಗೆ ಗಂಭೀರವಾಗಿ ಗಾಯವಾದ ಕಾರಣ ಸ್ಟ್ರೆಚರ್ನಲ್ಲಿ ಬಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಕೆಜಿಎಫ್ ತಾಲ್ಲೂಕಿನ ಚೆನ್ನಾಗನಹಳ್ಳಿಯ ವಿದ್ಯಾರ್ಥಿನಿ ಎಸ್.ಕುಸುಮಾ ಇದೀಗ ಮತ್ತೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಆ್ಯಂಡರ್ಸನ್ಪೇಟೆಯ ಸೇಂಟ್ ಮೇರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ನೆರವಿಗೆ ಧಾವಿಸಿರುವ ಶಾಸಕ ಸುರೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಚರ್ಚಿಸಿದ್ದಾರೆ. ‘ತಂದೆ ಶಂಕರಪ್ಪ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದು, ಮಗಳ ಚಿಕಿತ್ಸೆಯ ಬಿಲ್ ಪಾವತಿಸಲು ಕಿಡ್ನಿ ಮಾರಾಟ ಮಾಡಲು ಮುಂದಾಗಿರುವ ವಿಚಾರ ತಿಳಿದು ಕಸಿವಿಸಿಯಾಯಿತು’ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.</p>.<p>ಆಸ್ಪತ್ರೆ ಆಡಳಿತ ಮಂಡಳಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಆಯುಕ್ತ, ಸಂಸದ ಪಿ.ಸಿ.ಮೋಹನ್ ಹಾಗೂ ಮುಖ್ಯಮಂತ್ರಿ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಜೊತೆ ಮಾತನಾಡಿ, ವಿದ್ಯಾರ್ಥಿನಿಗೆ ಚಿಕಿತ್ಸೆ ವೆಚ್ಚ ಕೊಡಿಸುವ ಭರವಸೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-18-134169427</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>