<p>ಮುಳಗುಂದ: ‘ಸಾಧನೆಗೆ ಮೊದಲು ಪ್ರಯತ್ನ ಬೇಕು. ಪ್ರಯತ್ನವೇ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸತತ ಅಧ್ಯಯನ, ಪರಿಶ್ರಮದಿಂದ ಯಶಸ್ಸು ಸಾಧ್ಯ’ ಎಂದು ಆರ್.ಎನ್. ದೇಶಪಾಂಡೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ಹೇಳಿದರು.</p>.<p>ಇಲ್ಲಿನ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಸೋಮವಾರ ನಡೆದ ಹಾಲುಮತ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜಾಗೃತಗೊಂಡರೆ ಇಡೀ ಸಮಾಜ ಅಭಿವೃದ್ಧಿ ಸಾಧಿಸುವುದರಲ್ಲಿ ಸಂದೇಹವಿಲ್ಲ. ಯಾವಾಗಲೂ ಕ್ರಿಯಾಶೀಲರಾಗಿರಬೇಕು. ಜೀವನದಲ್ಲಿ ಮೌಲ್ಯ, ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಜಗತ್ತಲ್ಲಿ ಜ್ಞಾನಕ್ಕಿಂತ ದೊಡ್ಡದು ಯಾವುದೂ ಇಲ್ಲ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿದರು.</p>.<p>ವೈದ್ಯ ಎಸ್.ಸಿ. ಚವಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಿವೃತ್ತ ಆರ್ಟಿಒ ಅಧಿಕಾರಿ ಬಿ.ಡಿ. ಹರ್ತಿ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನ ಗೌರವಿಸಲಾಯಿತು.</p>.<p>ಹಾಲುಮತ ಸಮಾಜದ ಗುರು ಫಕ್ಕೀರಯ್ಯ ಅಮೋಘಿಮಠ, ಮುಖಂಡರಾದ ಮಹಾಂತೇಶ ನೀಲಗುಂದ, ಮಲ್ಲಪ್ಪ ಕುಂದಗೋಳ, ಬಸವರಾಜ ಬಡ್ನಿ, ಬಿ.ವಿ.ಸುಂಕಾಪುರ, ಅಶೋಕ ಹುಣಸಿಮರದ, ಬಸವರಾಜ ಹಾರೋಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-23-1478480411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಗುಂದ: ‘ಸಾಧನೆಗೆ ಮೊದಲು ಪ್ರಯತ್ನ ಬೇಕು. ಪ್ರಯತ್ನವೇ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸತತ ಅಧ್ಯಯನ, ಪರಿಶ್ರಮದಿಂದ ಯಶಸ್ಸು ಸಾಧ್ಯ’ ಎಂದು ಆರ್.ಎನ್. ದೇಶಪಾಂಡೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ಹೇಳಿದರು.</p>.<p>ಇಲ್ಲಿನ ಶ್ರೀ ಬೀರಲಿಂಗೇಶ್ವರ ಸೇವಾ ಸಮಿತಿ ವತಿಯಿಂದ ಸೋಮವಾರ ನಡೆದ ಹಾಲುಮತ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಜಾಗೃತಗೊಂಡರೆ ಇಡೀ ಸಮಾಜ ಅಭಿವೃದ್ಧಿ ಸಾಧಿಸುವುದರಲ್ಲಿ ಸಂದೇಹವಿಲ್ಲ. ಯಾವಾಗಲೂ ಕ್ರಿಯಾಶೀಲರಾಗಿರಬೇಕು. ಜೀವನದಲ್ಲಿ ಮೌಲ್ಯ, ಕೌಶಲಗಳನ್ನು ಅಳವಡಿಸಿಕೊಳ್ಳಬೇಕು. ಜಗತ್ತಲ್ಲಿ ಜ್ಞಾನಕ್ಕಿಂತ ದೊಡ್ಡದು ಯಾವುದೂ ಇಲ್ಲ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿದರು.</p>.<p>ವೈದ್ಯ ಎಸ್.ಸಿ. ಚವಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಿವೃತ್ತ ಆರ್ಟಿಒ ಅಧಿಕಾರಿ ಬಿ.ಡಿ. ಹರ್ತಿ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿವಿಧ ಕ್ಷೇತ್ರಗಳ ಸಾಧಕರನ್ನ ಗೌರವಿಸಲಾಯಿತು.</p>.<p>ಹಾಲುಮತ ಸಮಾಜದ ಗುರು ಫಕ್ಕೀರಯ್ಯ ಅಮೋಘಿಮಠ, ಮುಖಂಡರಾದ ಮಹಾಂತೇಶ ನೀಲಗುಂದ, ಮಲ್ಲಪ್ಪ ಕುಂದಗೋಳ, ಬಸವರಾಜ ಬಡ್ನಿ, ಬಿ.ವಿ.ಸುಂಕಾಪುರ, ಅಶೋಕ ಹುಣಸಿಮರದ, ಬಸವರಾಜ ಹಾರೋಗೇರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-23-1478480411</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>