<p>ಮೈಸೂರು: ನಗರದ ಶಿಕ್ಷಕರ ಬಡಾವಣೆಯಲ್ಲಿರುವ ಆಜಾದ್ ನ್ಯಾಷನಲ್ ನರ್ಸರಿ, ಪ್ರಾಥಮಿಕ ಶಾಲೆ ಮತ್ತು ಮೌಲಾನಾ ಆಜಾದ್ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ಪಡೆದಿದ್ದು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುವಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಶಾಲೆಯ ಸಾಯಿ ಭರತ್ (572 ಅಂಕ), ನಿತಿನ್ ನಾರಾಯಣ್ (530) ಹಾಗೂ ಸಿಂಧುಶ್ರೀ (513) ಅವರನ್ನು ಶಾಲೆ ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಜಾಕೀರ್ ಹುಸೇನ್ ‘ ಶಾಲೆಯು ಸಮಗ್ರ ಶಿಕ್ಷಣ, ಸೃಜನಶೀಲತೆ, ಬಲವಾದ ಶೈಕ್ಷಣಿಕ ಅಡಿಪಾಯ, ಶಿಸ್ತು ಮತ್ತು ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಿದೆ’ ಎಂದು ಹೇಳಿದರು.</p>.<p>ಕಾತ್ಯಾಯಿನಿ ಯಶೋಮತಿ, ‘ಡೆಕ್ಕನ್ ಹೆರಾಲ್ಡ್’ ಮೈಸೂರು ಬ್ಯುರೊ ಮುಖ್ಯಸ್ಥ ಟಿ.ಆರ್. ಸತೀಶ್ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಫಾಹೀನ್ ಹುಸೇನ್ , ಮುಖ್ಯ ಶಿಕ್ಷಕ ಸಾದಿಕ್ ಉರ್ ರೆಹನಾ, ಆಡಳಿತಾಧಿಕಾರಿ ಮನ್ಸೂರ್ ಅಹಮದ್ ಖಾನ್, ಶಿಕ್ಷಕರಾದ ಭವ್ಯಾ, ಶಿವಮ್ಮ, ತನುಶ್ರೀ, ಮೈಕ್ ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-39-1900616301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರದ ಶಿಕ್ಷಕರ ಬಡಾವಣೆಯಲ್ಲಿರುವ ಆಜಾದ್ ನ್ಯಾಷನಲ್ ನರ್ಸರಿ, ಪ್ರಾಥಮಿಕ ಶಾಲೆ ಮತ್ತು ಮೌಲಾನಾ ಆಜಾದ್ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ಪಡೆದಿದ್ದು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುವಾರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಶಾಲೆಯ ಸಾಯಿ ಭರತ್ (572 ಅಂಕ), ನಿತಿನ್ ನಾರಾಯಣ್ (530) ಹಾಗೂ ಸಿಂಧುಶ್ರೀ (513) ಅವರನ್ನು ಶಾಲೆ ಆಡಳಿತ ಮಂಡಳಿ ಪರವಾಗಿ ಅಭಿನಂದಿಸಲಾಯಿತು.</p>.<p>ಸಂಸ್ಥೆಯ ಅಧ್ಯಕ್ಷ ಜಾಕೀರ್ ಹುಸೇನ್ ‘ ಶಾಲೆಯು ಸಮಗ್ರ ಶಿಕ್ಷಣ, ಸೃಜನಶೀಲತೆ, ಬಲವಾದ ಶೈಕ್ಷಣಿಕ ಅಡಿಪಾಯ, ಶಿಸ್ತು ಮತ್ತು ಭವಿಷ್ಯದ ಸವಾಲುಗಳಿಗೆ ವಿದ್ಯಾರ್ಥಿಗಳನ್ನು ಸಬಲರನ್ನಾಗಿ ಮಾಡುವ ಉದ್ದೇಶ ಹೊಂದಿದೆ’ ಎಂದು ಹೇಳಿದರು.</p>.<p>ಕಾತ್ಯಾಯಿನಿ ಯಶೋಮತಿ, ‘ಡೆಕ್ಕನ್ ಹೆರಾಲ್ಡ್’ ಮೈಸೂರು ಬ್ಯುರೊ ಮುಖ್ಯಸ್ಥ ಟಿ.ಆರ್. ಸತೀಶ್ಕುಮಾರ್, ಸಂಸ್ಥೆಯ ಕಾರ್ಯದರ್ಶಿ ಫಾಹೀನ್ ಹುಸೇನ್ , ಮುಖ್ಯ ಶಿಕ್ಷಕ ಸಾದಿಕ್ ಉರ್ ರೆಹನಾ, ಆಡಳಿತಾಧಿಕಾರಿ ಮನ್ಸೂರ್ ಅಹಮದ್ ಖಾನ್, ಶಿಕ್ಷಕರಾದ ಭವ್ಯಾ, ಶಿವಮ್ಮ, ತನುಶ್ರೀ, ಮೈಕ್ ಪ್ರಕಾಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-39-1900616301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>