<p>ಮೈಸೂರು: ‘ಮಕ್ಕಳ ಬದುಕು ರೂಪಿಸುವಲ್ಲಿ ಪೋಷಕರ ಶ್ರಮ ಸ್ಮರಣೀಯ’ ಎಂದು ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.</p>.<p>ಜೆ.ಎಸ್. ಜಗದೀಶ್ ಸ್ನೇಹ ಬಳಗದ ವತಿಯಿಂದ ಇಲ್ಲಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳಿಗೆ ಕಷ್ಟದ ಬಗ್ಗೆ ತಿಳಿಸಬೇಕು. ನೋವಿನ ಪರಿಚಯವಿದ್ದರೆ ಗೆಲುವು ಹೆಚ್ಚು ಸಿಹಿಯಾಗಿರುತ್ತದೆ’ ಎಂದರು.</p>.<p>ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್, ‘ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಅನೇಕ ಅವಕಾಶ ಇದೆ. ಒಂದೇ ಕ್ಷೇತ್ರದಲ್ಲೇ ಸಾಧನೆ ಮಾಡಬೇಕೆಂದಿಲ್ಲ. ನಿಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ‘15 ವರ್ಷದಿಂದ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕೆಲಸ ಮಾಡುತ್ತಿದ್ದೇವೆ. ಈವರೆಗೆ 2 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಅಭಿನಂದಿಸಿದ್ದೇವೆ’ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ300ಕ್ಕೂ ಹೆಚ್ಚು ಮಕ್ಕಳನ್ನು ಪುರಸ್ಕರಿಸಲಾಯಿತು.</p>.<p>ವೈದ್ಯೆ ಡಾ.ಯಶಸ್ವಿನಿ ಸಂಜಯ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮುಖಂಡರಾದ ಆಯರಹಳ್ಳಿ ವಿರೂಪಾಕ್ಷ, ಲೋಹಿತ್ ಶರ್ಮ, ಶ್ರೀನಿವಾಸ್, ಸತ್ಯಾನಂದ ವಿಟ್ಟು, ಪ್ರಸನ್ನಕುಮಾರ್, ಮೋಹನ್, ರಘು, ರವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-39-704674671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಮಕ್ಕಳ ಬದುಕು ರೂಪಿಸುವಲ್ಲಿ ಪೋಷಕರ ಶ್ರಮ ಸ್ಮರಣೀಯ’ ಎಂದು ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.</p>.<p>ಜೆ.ಎಸ್. ಜಗದೀಶ್ ಸ್ನೇಹ ಬಳಗದ ವತಿಯಿಂದ ಇಲ್ಲಿನ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪಾಲಕರು ಮಕ್ಕಳಿಗೆ ಕಷ್ಟದ ಬಗ್ಗೆ ತಿಳಿಸಬೇಕು. ನೋವಿನ ಪರಿಚಯವಿದ್ದರೆ ಗೆಲುವು ಹೆಚ್ಚು ಸಿಹಿಯಾಗಿರುತ್ತದೆ’ ಎಂದರು.</p>.<p>ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ.ವಿನಯ್ಕುಮಾರ್, ‘ವಿದ್ಯಾರ್ಥಿಗಳಿಗೆ ಪಿಯುಸಿ ನಂತರ ಅನೇಕ ಅವಕಾಶ ಇದೆ. ಒಂದೇ ಕ್ಷೇತ್ರದಲ್ಲೇ ಸಾಧನೆ ಮಾಡಬೇಕೆಂದಿಲ್ಲ. ನಿಮಗೆ ಆಸಕ್ತಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ’ ಎಂದು ಸಲಹೆ ನೀಡಿದರು.</p>.<p>ನಗರಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್, ‘15 ವರ್ಷದಿಂದ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕೆಲಸ ಮಾಡುತ್ತಿದ್ದೇವೆ. ಈವರೆಗೆ 2 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಅಭಿನಂದಿಸಿದ್ದೇವೆ’ ಎಂದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ300ಕ್ಕೂ ಹೆಚ್ಚು ಮಕ್ಕಳನ್ನು ಪುರಸ್ಕರಿಸಲಾಯಿತು.</p>.<p>ವೈದ್ಯೆ ಡಾ.ಯಶಸ್ವಿನಿ ಸಂಜಯ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಮುಖಂಡರಾದ ಆಯರಹಳ್ಳಿ ವಿರೂಪಾಕ್ಷ, ಲೋಹಿತ್ ಶರ್ಮ, ಶ್ರೀನಿವಾಸ್, ಸತ್ಯಾನಂದ ವಿಟ್ಟು, ಪ್ರಸನ್ನಕುಮಾರ್, ಮೋಹನ್, ರಘು, ರವಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-39-704674671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>