<p>ಸುರಪುರ: ‘ವಿದ್ಯಾರ್ಥಿ ಜೀವನವು ಬದುಕಿನ ಬುನಾದಿಯಿದ್ದಂತೆ. ನೀವು ಗಳಿಸಿರುವ ಅಂಕಗಳು ನಿಮ್ಮ ಕಠಿಣ ಪರಿಶ್ರಮಕ್ಕೆ ಸಂದ ಜಯ. ಇದೇ ಉತ್ಸಾಹವನ್ನು ನೀವು ಮುಂದಿನ ಉನ್ನತ ಶಿಕ್ಷಣದಲ್ಲೂ ಮುಂದುವರಿಸಬೇಕು’ ಎಂದು ರುಕ್ಮಾಪುರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ರುಕ್ಮಾಪುರ ಗ್ರಾಮದ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ಬನಶಂಕರಿ ದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಗುರು-ಹಿರಿಯರಲ್ಲಿ ಗೌರವ ಭಾವನೆ ಇಟ್ಟುಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಸ್ಪಷ್ಟವಾದ ಗುರಿ ಮತ್ತು ಅದನ್ನು ತಲುಪುವ ಛಲ ಇರಬೇಕು. ಸಮಾಜಕ್ಕೆ ಉಪಯುಕ್ತವಾಗುವಂತಹ ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಅಕ್ಕಲಕೋಟೆಯ ಈಶ್ವರಾನಂದ ಸ್ವಾಮೀಜಿ ಮಾತನಾಡಿ, ‘ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಗುಟ್ಟು. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಉತ್ಸಾಹ ತುಂಬಿ, ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಪ್ರೇರಣೆಯಾಗುತ್ತವೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯ ಬಸವರಾಜ ಬಡಗಾ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ಮಹೇಶ ಕುಂಟೋಜಿ, ಉಪನ್ಯಾಸಕ ರಜಾಕ್ ಬಾಗವಾನ್ ಮಾತನಾಡಿದರು. ಅರ್ಚಕ ಈರಣ್ಣ ಪೂಜಾರಿ ನೇತೃತ್ವ ವಹಿಸಿದ್ದರು. ಮಹಾಂತೇಶ ಕಲ್ಲೂರು ಅಧ್ಯಕ್ಷತೆ ವಹಿಸಿದ್ದರು.</p>.<p>ಸುರೇಶ ಚಟ್ಟಿ, ಹಣಮೇಶಗೌಡ ಪೊಲೀಸ್ ಪಾಟೀಲ, ಮಲ್ಲಕಾರ್ಜುನ ಚಟ್ಟಿ ವೇದಿಕೆಯಲ್ಲಿದ್ದರು. ಸನ್ಮಾನಿತ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಗಣ್ಯರು ಇದ್ದರು. ಅಂಬರೀಶ ಚಿಲ್ಲಾಳ ಸ್ವಾಗತಿಸಿದರು. ಬಸವರಾಜ ಯಾಳಗಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-1545905056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ವಿದ್ಯಾರ್ಥಿ ಜೀವನವು ಬದುಕಿನ ಬುನಾದಿಯಿದ್ದಂತೆ. ನೀವು ಗಳಿಸಿರುವ ಅಂಕಗಳು ನಿಮ್ಮ ಕಠಿಣ ಪರಿಶ್ರಮಕ್ಕೆ ಸಂದ ಜಯ. ಇದೇ ಉತ್ಸಾಹವನ್ನು ನೀವು ಮುಂದಿನ ಉನ್ನತ ಶಿಕ್ಷಣದಲ್ಲೂ ಮುಂದುವರಿಸಬೇಕು’ ಎಂದು ರುಕ್ಮಾಪುರ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಶಾಂತಮೂರ್ತಿ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ರುಕ್ಮಾಪುರ ಗ್ರಾಮದ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ಬನಶಂಕರಿ ದೇವಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಗುರು-ಹಿರಿಯರಲ್ಲಿ ಗೌರವ ಭಾವನೆ ಇಟ್ಟುಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಸ್ಪಷ್ಟವಾದ ಗುರಿ ಮತ್ತು ಅದನ್ನು ತಲುಪುವ ಛಲ ಇರಬೇಕು. ಸಮಾಜಕ್ಕೆ ಉಪಯುಕ್ತವಾಗುವಂತಹ ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಅಕ್ಕಲಕೋಟೆಯ ಈಶ್ವರಾನಂದ ಸ್ವಾಮೀಜಿ ಮಾತನಾಡಿ, ‘ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಗುಟ್ಟು. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಉತ್ಸಾಹ ತುಂಬಿ, ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಪ್ರೇರಣೆಯಾಗುತ್ತವೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯ ಬಸವರಾಜ ಬಡಗಾ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ಮಹೇಶ ಕುಂಟೋಜಿ, ಉಪನ್ಯಾಸಕ ರಜಾಕ್ ಬಾಗವಾನ್ ಮಾತನಾಡಿದರು. ಅರ್ಚಕ ಈರಣ್ಣ ಪೂಜಾರಿ ನೇತೃತ್ವ ವಹಿಸಿದ್ದರು. ಮಹಾಂತೇಶ ಕಲ್ಲೂರು ಅಧ್ಯಕ್ಷತೆ ವಹಿಸಿದ್ದರು.</p>.<p>ಸುರೇಶ ಚಟ್ಟಿ, ಹಣಮೇಶಗೌಡ ಪೊಲೀಸ್ ಪಾಟೀಲ, ಮಲ್ಲಕಾರ್ಜುನ ಚಟ್ಟಿ ವೇದಿಕೆಯಲ್ಲಿದ್ದರು. ಸನ್ಮಾನಿತ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಗಣ್ಯರು ಇದ್ದರು. ಅಂಬರೀಶ ಚಿಲ್ಲಾಳ ಸ್ವಾಗತಿಸಿದರು. ಬಸವರಾಜ ಯಾಳಗಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-1545905056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>