<p><strong>ರಾಯಚೂರು:</strong> ‘ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಉತ್ತಮವಾಗಿ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು’ ಎಂದು ಜಿ.ಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹೇಳಿದರು.</p>.<p>ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 10ನೇ ತರಗತಿ, ಪಿಯುಸಿ ನಂತರ ವೃತ್ತಿ ಪ್ರಪಂಚದ ಅರಿವು ಮೂಡಿಸಲು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಮ್ಮ ತಂದೆ- ತಾಯಿಯವರ ಕನಸುಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳು ಕೌಶಲದ ಕಡೆ ಗಮನಹರಿಸಬೇಕು. ಎಐ ಬಗ್ಗೆ ವಿದ್ಯಾರ್ಥಿಗಳು ಸರಿಯಾಗಿ ತಿಳಿದುಕೊಳ್ಳಬೇಕು. 10ನೇ ಹಾಗೂ ದ್ವಿತೀಯ ಪಿಯುಸಿ ನಂತರ ಕೋರ್ಸುಗಳ ಆಯ್ಕೆಗೆ ಈ ಮೇಳ ಸಹಕಾರಿಯಾಗಿದೆ’ ಎಂದು ವಿವರಿಸಿದರು.</p>.<p>‘ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸರಿಯಾದ ಸಮಯಕ್ಕೆ ಹೆಚ್ಚಾಗಿ ನೀರು ಕುಡಿಯಬೇಕು. ಜಿಲ್ಲಾಡಳಿತದಿಂದ ಈ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ. ಬಡಿಗೇರ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಿವಿಧ ಮಳಿಗೆ ಉದ್ಘಾಟನೆ: ನಗರದ ರಂಗಮಂದಿರದ ಆವರಣದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ವಿಶೇಷ ಅವಕಾಶ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿ ಗಳಿಗೆ ಮುಂದಿನ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶ ದಿಂದ ಸ್ಥಾಪಿಸಲಾಗಿದ್ದ ವಿವಿಧ ಮಳಿಗೆಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಚಾಲನೆ ನೀಡಿದರು.</p>.<p>ಕೃಷಿ ವಿಶ್ವವಿದ್ಯಾಲಯ ಅಡಿಯಲ್ಲಿನ ಕೋರ್ಸ್ಗಳ ಮಾಹಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳಿಂದ ವಿವಿಧ ಶಿಕ್ಷಣಾವಕಾಶಗಳು, ತಾಂತ್ರಿಕ ಶಿಕ್ಷಣ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಮೆಡಿಕಲ್, ಕೌಶಲ ತರಬೇತಿ, ಕೃಷಿ, ಕಂಪ್ಯೂಟರ್ ಕೋರ್ಸ್ಗಳು, ವಿದ್ಯಾರ್ಥಿ ವೇತನ, ತರಬೇತಿ ಕೇಂದ್ರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.</p>.<p>1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ: ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳದಲ್ಲಿ ಜಿಲ್ಲೆಯ ವಿವಿಧ ಶಾಲೆಯ 1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಂತರ ಕರಿಯರ್ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಜತೆಗೆ ಕರಿಯರ್ ರಥವನ್ನು ಎಳೆಯಲಾಯಿತು. ಇದಕ್ಕೂ ಮುಂಚೆ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಅವರಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಸೋಮಶೇಖರಪ್ಪ ಹೋಕ್ರಾಣಿ, ಡಯಟ್ ಪ್ರಾಂಶುಪಾಲ ಹಾಗೂ ಅಭಿವೃದ್ಧಿ ಉಪ ನಿರ್ದೇಶಕ ಚಂದ್ರಶೇಖರ ಭಂಡಾರಿ, ಡಯಟ್ ಹಿರಿಯ ಉಪನ್ಯಾಸಕ ಶಿವಮ್ಮ, ಶರಣಪ್ಪ ವಟಗಲ್, ಡಯಟ್ ನೋಡಲ್ ಅಧಿಕಾರಿ ಸುಖದೇವ, ಶಿವಮಣಿ ಸೇರಿದಂತೆ ವಿವಿಧ ಶಾಲಾ ಹಾಗೂ ಕಾಲೇಜಿನ ಶಿಕ್ಷಕರು, ಉಪನ್ಯಾಸರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಉತ್ತಮವಾಗಿ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು’ ಎಂದು ಜಿ.ಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹೇಳಿದರು.</p>.<p>ಇಲ್ಲಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ 10ನೇ ತರಗತಿ, ಪಿಯುಸಿ ನಂತರ ವೃತ್ತಿ ಪ್ರಪಂಚದ ಅರಿವು ಮೂಡಿಸಲು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ತಮ್ಮ ತಂದೆ- ತಾಯಿಯವರ ಕನಸುಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳು ಕೌಶಲದ ಕಡೆ ಗಮನಹರಿಸಬೇಕು. ಎಐ ಬಗ್ಗೆ ವಿದ್ಯಾರ್ಥಿಗಳು ಸರಿಯಾಗಿ ತಿಳಿದುಕೊಳ್ಳಬೇಕು. 10ನೇ ಹಾಗೂ ದ್ವಿತೀಯ ಪಿಯುಸಿ ನಂತರ ಕೋರ್ಸುಗಳ ಆಯ್ಕೆಗೆ ಈ ಮೇಳ ಸಹಕಾರಿಯಾಗಿದೆ’ ಎಂದು ವಿವರಿಸಿದರು.</p>.<p>‘ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಆರೋಗ್ಯ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸರಿಯಾದ ಸಮಯಕ್ಕೆ ಹೆಚ್ಚಾಗಿ ನೀರು ಕುಡಿಯಬೇಕು. ಜಿಲ್ಲಾಡಳಿತದಿಂದ ಈ ಬಗ್ಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಅವುಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ. ಬಡಿಗೇರ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ವಿವಿಧ ಮಳಿಗೆ ಉದ್ಘಾಟನೆ: ನಗರದ ರಂಗಮಂದಿರದ ಆವರಣದಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ವಿಶೇಷ ಅವಕಾಶ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಹಂತದ ವಿದ್ಯಾರ್ಥಿ ಗಳಿಗೆ ಮುಂದಿನ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ನೀಡುವ ಉದ್ದೇಶ ದಿಂದ ಸ್ಥಾಪಿಸಲಾಗಿದ್ದ ವಿವಿಧ ಮಳಿಗೆಗಳಿಗೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಚಾಲನೆ ನೀಡಿದರು.</p>.<p>ಕೃಷಿ ವಿಶ್ವವಿದ್ಯಾಲಯ ಅಡಿಯಲ್ಲಿನ ಕೋರ್ಸ್ಗಳ ಮಾಹಿತಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಇಲಾಖೆಗಳಿಂದ ವಿವಿಧ ಶಿಕ್ಷಣಾವಕಾಶಗಳು, ತಾಂತ್ರಿಕ ಶಿಕ್ಷಣ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಮೆಡಿಕಲ್, ಕೌಶಲ ತರಬೇತಿ, ಕೃಷಿ, ಕಂಪ್ಯೂಟರ್ ಕೋರ್ಸ್ಗಳು, ವಿದ್ಯಾರ್ಥಿ ವೇತನ, ತರಬೇತಿ ಕೇಂದ್ರಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.</p>.<p>1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ: ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳದಲ್ಲಿ ಜಿಲ್ಲೆಯ ವಿವಿಧ ಶಾಲೆಯ 1,407ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಂತರ ಕರಿಯರ್ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಜತೆಗೆ ಕರಿಯರ್ ರಥವನ್ನು ಎಳೆಯಲಾಯಿತು. ಇದಕ್ಕೂ ಮುಂಚೆ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಅವರಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪ ನಿರ್ದೇಶಕ ಸೋಮಶೇಖರಪ್ಪ ಹೋಕ್ರಾಣಿ, ಡಯಟ್ ಪ್ರಾಂಶುಪಾಲ ಹಾಗೂ ಅಭಿವೃದ್ಧಿ ಉಪ ನಿರ್ದೇಶಕ ಚಂದ್ರಶೇಖರ ಭಂಡಾರಿ, ಡಯಟ್ ಹಿರಿಯ ಉಪನ್ಯಾಸಕ ಶಿವಮ್ಮ, ಶರಣಪ್ಪ ವಟಗಲ್, ಡಯಟ್ ನೋಡಲ್ ಅಧಿಕಾರಿ ಸುಖದೇವ, ಶಿವಮಣಿ ಸೇರಿದಂತೆ ವಿವಿಧ ಶಾಲಾ ಹಾಗೂ ಕಾಲೇಜಿನ ಶಿಕ್ಷಕರು, ಉಪನ್ಯಾಸರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>