<p>ತಿ.ನರಸೀಪುರ: ‘ದೈಹಿಕ ನ್ಯೂನತೆಯ ಬಗ್ಗೆ ಆಲೋಚಿಸದೆ, ಪರಿಶ್ರಮದೊಂದಿಗೆ ಓದಿ ಉನ್ನತ ಶಿಕ್ಷಣದತ್ತ ಸಾಗಬೇಕು’ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಾಗೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಅಂಗವಿಕಲ ವಿದ್ಯಾರ್ಥಿಗಳಿಗೆ ಮಂಗಳವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತು ಅವರ ಸಾಧನೆಗೆ ಅಗತ್ಯ ಸಹಕಾರ ನೀಡಬೇಕು ಎಂದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ ಮಾತನಾಡಿ, ಸರ್ಕಾರ ವಿಶೇಷ ಚೇತನರಿಗೆ ಅನೇಕ ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಬಳಸಿ ಕೊಂಡು ಉಜ್ವಲ ರೂಪಿಸಿಕೊಳ್ಳುವಂತೆ ತಿಳಿಸಿದರು.</p>.<p>ಹೆಚ್ಚು ಅಂಕ ಪಡೆದ ಚಿದರಹಳ್ಳಿ ಸರ್ಕಾರಿ ಶಾಲೆಯ ಜಯಲಕ್ಷ್ಮೀ, ಗೌರಿಶಂಕರ ಪ್ರೌಢಶಾಲೆಯ ಶರತ್ವಿ, ದ್ಯೋದಯ ಶಾಲೆಯ ಶ್ರೇಯಾ ಅವರನ್ನು ಅಭಿನಂದಿಸಲಾಯಿತು.</p>.<p>ಇಲಾಖೆ ಶಿಕ್ಷಣ ಸಂಯೋಜಕರಾದ ರಮೇಶ್, ಬಸವರಾಜು, ಬಿಐಆರ್ಟಿ ಅಧಿಕಾರಿ ಆರ್.ವೆಂಕಟೇಶ್, ರಘು, ಸೌಜನ್ಯ, ಯೋಗೇಶ್ವರಿ, ಪ್ರೋಗ್ರಾಮರ್ ರವಿಚಂದ್ರ, ಭಾವನ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-1744531513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ.ನರಸೀಪುರ: ‘ದೈಹಿಕ ನ್ಯೂನತೆಯ ಬಗ್ಗೆ ಆಲೋಚಿಸದೆ, ಪರಿಶ್ರಮದೊಂದಿಗೆ ಓದಿ ಉನ್ನತ ಶಿಕ್ಷಣದತ್ತ ಸಾಗಬೇಕು’ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನಾಗೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಪಟ್ಟಣದ ಬಿಆರ್ಸಿ ಕೇಂದ್ರದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಅಂಗವಿಕಲ ವಿದ್ಯಾರ್ಥಿಗಳಿಗೆ ಮಂಗಳವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪೋಷಕರು ವಿದ್ಯಾರ್ಥಿಗಳಿಗೆ ಬೆಂಬಲವಾಗಿ ನಿಂತು ಅವರ ಸಾಧನೆಗೆ ಅಗತ್ಯ ಸಹಕಾರ ನೀಡಬೇಕು ಎಂದರು.</p>.<p>ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರಮೂರ್ತಿ ಮಾತನಾಡಿ, ಸರ್ಕಾರ ವಿಶೇಷ ಚೇತನರಿಗೆ ಅನೇಕ ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಬಳಸಿ ಕೊಂಡು ಉಜ್ವಲ ರೂಪಿಸಿಕೊಳ್ಳುವಂತೆ ತಿಳಿಸಿದರು.</p>.<p>ಹೆಚ್ಚು ಅಂಕ ಪಡೆದ ಚಿದರಹಳ್ಳಿ ಸರ್ಕಾರಿ ಶಾಲೆಯ ಜಯಲಕ್ಷ್ಮೀ, ಗೌರಿಶಂಕರ ಪ್ರೌಢಶಾಲೆಯ ಶರತ್ವಿ, ದ್ಯೋದಯ ಶಾಲೆಯ ಶ್ರೇಯಾ ಅವರನ್ನು ಅಭಿನಂದಿಸಲಾಯಿತು.</p>.<p>ಇಲಾಖೆ ಶಿಕ್ಷಣ ಸಂಯೋಜಕರಾದ ರಮೇಶ್, ಬಸವರಾಜು, ಬಿಐಆರ್ಟಿ ಅಧಿಕಾರಿ ಆರ್.ವೆಂಕಟೇಶ್, ರಘು, ಸೌಜನ್ಯ, ಯೋಗೇಶ್ವರಿ, ಪ್ರೋಗ್ರಾಮರ್ ರವಿಚಂದ್ರ, ಭಾವನ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-1744531513</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>