<p>ತಿ.ನರಸೀಪುರ: ‘ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆಯತ್ತ ಗಮನಹರಿಸಬೇಕು’ ಎಂದು ನಿವೃತ್ತ ಉಪ ಪ್ರಾಂಶುಪಾಲ ಜಿ.ಎಸ್. ಮಲ್ಲೇಶ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮದ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಉನ್ನತ ವ್ಯಾಸಂಗದ ಗುರಿ ಇಟ್ಟುಕೊಂಡು ಪರಿಶ್ರಮ ಪಡಬೇಕು. ಆಗ ಯಶಸ್ಸು ನಿಮ್ಮದಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿ ವರ್ಷ ನಮ್ಮ ಗ್ರಾಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ’ ಎಂದರು.</p>.<p>ವೈದ್ಯ ಡಾ. ಪ್ರದೀಪ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉನ್ನತ ವ್ಯಾಸಂಗಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮದ ಮುಖಂಡ ಮಹದೇವಪ್ಪ ಮಾತನಾಡಿ, ‘ಶಿಕ್ಷಣದಿಂದ ಸಾಧನೆ ಸಾಧ್ಯ ಎಂಬುದನ್ನು ಬಿ.ಆರ್. ಅಂಬೇಡ್ಕರ್ ಅವರು ವಿಶ್ವಜ್ಞಾನಿಯಾಗಿ ತೋರಿದ್ದಾರೆ. ಅವರ ಜೀವನದ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೆಗೆದುಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸೋನು, ವರ್ಷಿತಾ, ಅನುಷಾ, ದೀಕ್ಷಿತ, ಸ್ಮಿತಾ, ಅನನ್ಯ, ನಿಶ್ಚಿತಾ, ಕೀರ್ತನಾ, ರಾಜೇಶ್ ಅವರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p>ಗ್ರಂಥಾಲಯ ಮೇಲ್ವಿಚಾರಕ ಶಿವಮಲ್ಲಯ್ಯ, ಹರಿಣಾಕ್ಷಿ, ಮಹೇಶ, ಕಾಳಯ್ಯ, ಕುಳ್ಳಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-1707417453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿ.ನರಸೀಪುರ: ‘ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆಯತ್ತ ಗಮನಹರಿಸಬೇಕು’ ಎಂದು ನಿವೃತ್ತ ಉಪ ಪ್ರಾಂಶುಪಾಲ ಜಿ.ಎಸ್. ಮಲ್ಲೇಶ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮದ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಉನ್ನತ ವ್ಯಾಸಂಗದ ಗುರಿ ಇಟ್ಟುಕೊಂಡು ಪರಿಶ್ರಮ ಪಡಬೇಕು. ಆಗ ಯಶಸ್ಸು ನಿಮ್ಮದಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಪ್ರತಿ ವರ್ಷ ನಮ್ಮ ಗ್ರಾಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತೇವೆ’ ಎಂದರು.</p>.<p>ವೈದ್ಯ ಡಾ. ಪ್ರದೀಪ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉನ್ನತ ವ್ಯಾಸಂಗಕ್ಕಾಗಿ ಸಹಾಯಧನ ನೀಡಲಾಗುತ್ತದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗ್ರಾಮದ ಮುಖಂಡ ಮಹದೇವಪ್ಪ ಮಾತನಾಡಿ, ‘ಶಿಕ್ಷಣದಿಂದ ಸಾಧನೆ ಸಾಧ್ಯ ಎಂಬುದನ್ನು ಬಿ.ಆರ್. ಅಂಬೇಡ್ಕರ್ ಅವರು ವಿಶ್ವಜ್ಞಾನಿಯಾಗಿ ತೋರಿದ್ದಾರೆ. ಅವರ ಜೀವನದ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೆಗೆದುಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಸೋನು, ವರ್ಷಿತಾ, ಅನುಷಾ, ದೀಕ್ಷಿತ, ಸ್ಮಿತಾ, ಅನನ್ಯ, ನಿಶ್ಚಿತಾ, ಕೀರ್ತನಾ, ರಾಜೇಶ್ ಅವರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.</p>.<p>ಗ್ರಂಥಾಲಯ ಮೇಲ್ವಿಚಾರಕ ಶಿವಮಲ್ಲಯ್ಯ, ಹರಿಣಾಕ್ಷಿ, ಮಹೇಶ, ಕಾಳಯ್ಯ, ಕುಳ್ಳಯ್ಯ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-38-1707417453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>