<p>ತೇರದಾಳ: ಪಿಯುಸಿಯಲ್ಲಿ ವಾಣಿಜ್ಯ ವಿಭಾಗ ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಮುಂದುವರೆದು ಪದವಿ ಮುಗಿಸಿದರೆ ಈ ವಿಭಾಗದಲ್ಲಿ ವಿಫುಲವಾದ ಅವಕಾಶಗಳಿದ್ದು, ಸರಿಯಾದ ಮಾರ್ಗದರ್ಶನ ಪಡೆದು ಮುನ್ನಡೆದರೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಆಕ್ಯಾಡೆಮಿಕ್ ಡೀನ್ ವಿಶ್ವನಾಥ ರೆಡ್ಡಿ ಹೇಳಿದರು.</p>.<p>ದಾನಿಗೊಂಡ ಸಮೂಹ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಗಳ ಹಾಗೂ ಗುರುಗಳ ಪಾತ್ರ ಅತಿ ಮುಖ್ಯ ಎಂದರು.</p>.<p>ಉಪನ್ಯಾಸಕರಾದ ಬಿ.ಎಸ್. ಬಾಗೇವಾಡಿ ಮಾತನಾಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಬಿ.ಎಸ್. ನೇಗಿನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಮತ್ತು ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಅನುಪ್ರಿಯಾ ಬಾಗಿ ಹಾಗೂ ಸ್ನೇಹಾ ಮಲ್ಹೋತ್ರಾ ನಿರೂಪಿಸಿದರು. ಸಾಕ್ಷಿ ಲೋಕಾಪೂರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಐಶ್ವರ್ಯ ಬಿರಡಿ ಸ್ವಾಗತಿಸಿದರು. ವಾಣಿಶ್ರೀ ಹಳಿಂಗಳಿ ವಂದಿಸಿದರು. ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಪ್ರಕಾಶ ಮಾಳಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-19-1623599453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೇರದಾಳ: ಪಿಯುಸಿಯಲ್ಲಿ ವಾಣಿಜ್ಯ ವಿಭಾಗ ಆಯ್ಕೆ ಮಾಡಿಕೊಂಡು ಅದರಲ್ಲಿಯೇ ಮುಂದುವರೆದು ಪದವಿ ಮುಗಿಸಿದರೆ ಈ ವಿಭಾಗದಲ್ಲಿ ವಿಫುಲವಾದ ಅವಕಾಶಗಳಿದ್ದು, ಸರಿಯಾದ ಮಾರ್ಗದರ್ಶನ ಪಡೆದು ಮುನ್ನಡೆದರೆ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವಿದೆ ಎಂದು ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಗಳ ಆಕ್ಯಾಡೆಮಿಕ್ ಡೀನ್ ವಿಶ್ವನಾಥ ರೆಡ್ಡಿ ಹೇಳಿದರು.</p>.<p>ದಾನಿಗೊಂಡ ಸಮೂಹ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು. ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಗಳ ಹಾಗೂ ಗುರುಗಳ ಪಾತ್ರ ಅತಿ ಮುಖ್ಯ ಎಂದರು.</p>.<p>ಉಪನ್ಯಾಸಕರಾದ ಬಿ.ಎಸ್. ಬಾಗೇವಾಡಿ ಮಾತನಾಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಬಿ.ಎಸ್. ನೇಗಿನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಮತ್ತು ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಅನುಪ್ರಿಯಾ ಬಾಗಿ ಹಾಗೂ ಸ್ನೇಹಾ ಮಲ್ಹೋತ್ರಾ ನಿರೂಪಿಸಿದರು. ಸಾಕ್ಷಿ ಲೋಕಾಪೂರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಐಶ್ವರ್ಯ ಬಿರಡಿ ಸ್ವಾಗತಿಸಿದರು. ವಾಣಿಶ್ರೀ ಹಳಿಂಗಳಿ ವಂದಿಸಿದರು. ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಪ್ರಕಾಶ ಮಾಳಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-19-1623599453</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>